ಬ್ರೇಕಿಂಗ್ ನ್ಯೂಸ್
10-04-21 01:56 pm Source: FILMIBEAT Shruthi Gk ಸಿನಿಮಾ
ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ಯಾಂಡಲ್ ವುಡ್ ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ತಿಂಗಳ ಬಳಿಕ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಕಿರುತೆರೆಯ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿರುವ ಇಬ್ಬರೂ ನಟಿಯರು ವೇದಿಕೆಯಲ್ಲಿ ಕುಣಿದು, ಕುಪ್ಪಳಿಸುವ ಜೊತೆಗೆ ಕಷ್ಟದ ದಿನಗಳನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಮಾದಕ ವಸ್ತು ಪ್ರಕರಣದಲ್ಲಿ ನಟಿ ರಾಗಿಣಿ ಮತ್ತು ಸಂಜನಾ ಕಳೆದ ವರ್ಷ ಸೆಪ್ಟಂಬರ್ ತಿಂಗಳಲ್ಲಿ ಜೈಲು ಸೇರಿದಿದ್ದರು.
ಸುಮಾರು 4 ತಿಂಗಳ ಕಾನೂನು ಹೋರಾಟದ ಬಳಿಕ ಇಬ್ಬರೂ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಜೈಲಿನಿಂದ ಹೊರಬಂದ ರಾಗಿಣಿ ಮತ್ತು ಸಂಜನಾ ಸದ್ಯ ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಮತ್ತೆ ಬಣ್ಣದ ಲೋಕದಲ್ಲಿ ಸಕ್ರೀಯರಾಗಿರುವ ಇಬ್ಬರೂ ನಟಿಯರು ಇತ್ತೀಚಿಗೆ ಕಿರುತೆರೆಯ ಅದ್ದೂರಿ ಸಮಾರಂಭದಲ್ಲಿ ಭಾಗಿಯಾಗಿದ್ದರು.
ಯುಗಾದಿ ಸಂಭ್ರಮದಲ್ಲಿ ರಾಗಿಣಿ-ಸಂಜನಾ
ಸಂಜನಾ ಮತ್ತು ರಾಗಿಣಿ ಇಬ್ಬರೂ ಕಿರುತೆರೆಯ ಯುಗಾದಿ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಯುಗಾದಿ ಸಂಭ್ರಮದಲ್ಲಿ ವಿಶೇಷ ಅತಿಥಿಗಳಾಗಿ ಎಂಟ್ರಿ ಕೊಟ್ಟಿದ್ದಾರೆ. ಜೈಲಿನಿಂದ ಹೊರ ಬಂದ ಬಳಿಕ ಇಬ್ಬರೂ ಮೊದಲ ಬಾರಿಗೆ ಅದ್ದೂರಿ ಸಮಾರಂಭದಲ್ಲಿ

ಅಪ್ಪ-ಅಮ್ಮನ ಕಣ್ಣಲ್ಲಿ ನೀರು ನೋಡಿದ್ರೆ ಪ್ರಾಣ ಹೋಗುತ್ತೆ
ಯುಗಾದಿ ಹಬ್ಬದ ಸಂಭ್ರಮ, ಸಡಗರ ನಡುವೆಯೂ ಸಂಜನಾ ಮತ್ತು ರಾಗಿಣಿ ಕಣ್ಣೀರೀಟ್ಟಿದ್ದಾರೆ. ವೇದಿಕೆ ಮೇಲೆ ಭರ್ಜರಿ ಸ್ಟೆಪ್ ಹಾಕಿದ ನಟಿಯರು ಬಳಿಕ ಕಷ್ಟದ ದಿನಗಳನ್ನು ನೆನೆದು ಭಾವುಕರಾಗಿದ್ದಾರೆ. ವೇದಿಕೆ ಮೇಲೆ ಮಾತನಾಡಿದ ನಟಿ ರಾಗಿಣಿ, 'ಇಡೀ ಪ್ರಪಂಚದ ವಿರುದ್ಧ ನಿಂತು ಫೈಟ್ ಮಾಡಬಹುದು, ನನಗೇನಿಲ್ಲ. ಆದರೆ ಅಪ್ಪ-ಅಮ್ಮನ ಕಣ್ಣಲ್ಲಿ ನೀರು ನೋಡಿದ್ರೆ ಪ್ರಾಣ ಹೋದಾಗೆ ಆಗುತ್ತೆ. ಅದು ನನಗೆ ತುಂಬಾ ಕಷ್ಟವಾದ ಸಮಯ' ಎಂದಿದ್ದಾರೆ.

ನಮ್ಮವರು ಅಂತ ಯಾರು ಇಲ್ಲ
ಇದೇ ವೇದಿಕೆಯಲ್ಲಿ ಮಾತನಾಡಿದ ಸಂಜನಾ, 'ಇವತ್ತು ನೋಡಿದ್ರೆ ತುಂಬಾ ಭಾವುಕ ಆಗುತ್ತೆ. ಆ ರೀತಿಯ ವಿವಾದದಲ್ಲಿ ಬಿದ್ದು, ಮನರಂಜನೆ ಆಗೋದು ಅಲ್ಲ. ನಮ್ಮವರು ಅಂತ ಯಾರು ಇಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದೀನಿ ಜೀವನದಲ್ಲಿ. ತಂದೆ-ತಾಯಿ ಆಶೀರ್ವಾದದಿಂದನೇ ಬದುಕಿದ್ದೀನಿ. ಯಾರು ಬಂದಿಲ್ಲ, ತುಂಬಾ ಬೇಜಾರು ಆಯ್ತು' ಎಂದು ಕಣ್ಣೀರಾಕಿದ್ದಾರೆ.

ಕರ್ವ-3 ಸಿನಿಮಾದಲ್ಲಿ ಬ್ಯುಸಿ ಇರುವ ರಾಗಿಣಿ
ಈ ಕಾರ್ಯಕ್ರಮ ಇದೇ ಭಾನುವಾರ ಸಂಜೆ ಪ್ರಸಾರವಾಗುತ್ತಿದೆ. ಇನ್ನು ರಾಗಿಣಿ ಜೈಲಿನಿಂದ ಬಂದ ಬಳಿಕ ಹೊಸ ಸಿನಿಮಾಗೆ ಸಹಿ ಮಾಡಿದ್ದಾರೆ. ಕರ್ವ-3 ಚಿತ್ರದಲ್ಲಿ ರಾಗಿಣಿ ನಟಿಸುತ್ತಿದ್ದಾರೆ. ಗಾಂಧಿಗಿರಿ ಸಿನಿಮಾ ಕೊನೆಯ ಹಂತದಲ್ಲಿದೆ. ಈ ಚಿತ್ರದಲ್ಲಿ ನಟ ಪ್ರೇಮ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ನಾನೆ ನೆಕ್ಸ್ಟ್ ಸಿಎಂ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm