ಬ್ರೇಕಿಂಗ್ ನ್ಯೂಸ್
10-04-21 06:57 pm Source: FILMIBEAT ಸಿನಿಮಾ
ಬಾಲಿವುಡ್ ನಟ ಅಜಯ್ ದೇವಗನ್ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಮೇಡೇ' ಸಿನಿಮಾದ ಚಿತ್ರೀಕರಣ ಮುಂದೂಡಿಕೆಯಾಗಿದೆ. ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನಿಗದಿಯಾಗಿದ್ದ ಶೂಟಿಂಗ್ ತಾತ್ಕಾಲಿಕವಾಗಿ ಮುಂದಕ್ಕೆ ಹಾಕಲಾಗಿದೆ. 2020ರ ಡಿಸೆಂಬರ್ ತಿಂಗಳಲ್ಲಿ ಸೆಟ್ಟೇರಿದ್ದ 'ಮೇಡೇ' ಸಿನಿಮಾ ಅದಾಗಲೇ ಕೆಲವು ದೃಶ್ಯಗಳ ಚಿತ್ರೀಕರಣ ಮಾಡಿದೆ. ಆದರೆ, ಕೋವಿಡ್ ಕಾರಣದಿಂದ ಶೂಟಿಂಗ್ ಸ್ಥಗಿತಗೊಂಡಿತ್ತು.
ಅಂದ್ಹಾಗೆ, ಏಪ್ರಿಲ್ ಕೊನೆಯಲ್ಲಿ ದೋಹಾದಲ್ಲಿ ಶೂಟಿಂಗ್ ಶುರು ಮಾಡಲು ಎಲ್ಲಾ ತಯಾರಿ ನಡೆದಿತ್ತು. ಈ ವೇಳೆ ಅಜಯ್ ದೇವಗನ್ ಜೊತೆ ಅಮಿತಾಭ್ ಬಚ್ಚನ್, ನಾಯಕಿ ನಟಿ ರಕುಲ್ ಪ್ರೀತ್ ಸಿಂಗ್ ಸಹ ಪಾಲ್ಗೊಳ್ಳಬೇಕಿತ್ತು.
ಸದ್ಯದ ಮಾಹಿತಿ ಪ್ರಕಾರ, ಮೇಡೇ ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣ ಮುಗಿದಿದೆ. ದೋಹಾದಲ್ಲಿ ಮೂರು ದಿನಗಳ ಶೂಟಿಂಗ್ ಹಾಗೂ ಕತಾರ್ನಲ್ಲಿ ಕೊನೆಯ ಹಂತದ ಚಿತ್ರೀಕರಣದ ಬಳಿಕ ಸಿನಿಮಾ ಮುಗಿಸುವ ಯೋಜನೆಯಲ್ಲಿದ್ದರು. ನಿರ್ದೇಶಕ ಅಜಯ್ ದೇವಗನ್ ಕಡಿಮೆ ಸಿಬ್ಬಂದಿ ಜೊತೆ ಕತಾರ್ಗೆ ತೆರಳಿ ಕೊನೆಯ ಚಿತ್ರೀಕರಣ ಮಾಡಲು ನಿರ್ಧರಿಸಿದ್ದರು. ಆದ್ರೀಗ, ಆ ಯೋಜನೆಗೆ ಕೊರೊನಾ ಅಡ್ಡಿಯಾಗಿದೆ. ಈ ಹಿಂದೆ ಅಮಿತಾಭ್ ಬಚ್ಚನ್ ಮತ್ತು ರಕುಲ್ ಪ್ರೀತ್ ಸಿಂಗ್ ಇಬ್ಬರಿಗೂ ಕೊರೊನಾ ವೈರಸ್ ತಗುಲಿತ್ತು.
ಆ ಸಂದರ್ಭದಲ್ಲಿ ಬಿಗ್ ಬಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದುಕೊಂಡಿದ್ದರು. ರಕುಲ್ ತಮ್ಮ ಮನೆಯಲ್ಲಿ ಹೋಮ್ ಕ್ವಾರಂಟೈನ್ ಆಗಿದ್ದರು. ಒಂದು ವಾರದ ವಿಶ್ರಾಂತಿ ಬಳಿಕ ನೆಗೆಟಿವ್ ಫಲಿತಾಂಶ ಬಂದಿತ್ತು.
ಅಂದ್ಹಾಗೆ, ಮೇಡೇ ಸಿನಿಮಾ ನೈಜ ಘಟನೆಗಳ ಆಧರಿಸಿ ಸಿದ್ದವಾಗುತ್ತಿರುವ ಚಿತ್ರ. 2015ರಲ್ಲಿ ನಡೆದ ಕೆಲವು ಘಟನೆಗಳನ್ನು ಚಿತ್ರಕಥೆ ಮಾಡಿ ಸಿನಿಮಾ ರೂಪ ನೀಡಲಾಗುತ್ತಿದೆ. ದೋಹಾ ಮತ್ತು ಕೊಚ್ಚಿ ವಿಮಾನದ ಸಂಘರ್ಷದ ವೇಳೆ ನಡೆದ ಘಟನೆಯ ಸುತ್ತಮುತ್ತಾ ಕಥೆ ಮಾಡಲಾಗಿದೆ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm