ಬ್ರೇಕಿಂಗ್ ನ್ಯೂಸ್
10-04-21 06:57 pm Source: FILMIBEAT ಸಿನಿಮಾ
ಬಾಲಿವುಡ್ ನಟ ಅಜಯ್ ದೇವಗನ್ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ಮೇಡೇ' ಸಿನಿಮಾದ ಚಿತ್ರೀಕರಣ ಮುಂದೂಡಿಕೆಯಾಗಿದೆ. ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ನಿಗದಿಯಾಗಿದ್ದ ಶೂಟಿಂಗ್ ತಾತ್ಕಾಲಿಕವಾಗಿ ಮುಂದಕ್ಕೆ ಹಾಕಲಾಗಿದೆ. 2020ರ ಡಿಸೆಂಬರ್ ತಿಂಗಳಲ್ಲಿ ಸೆಟ್ಟೇರಿದ್ದ 'ಮೇಡೇ' ಸಿನಿಮಾ ಅದಾಗಲೇ ಕೆಲವು ದೃಶ್ಯಗಳ ಚಿತ್ರೀಕರಣ ಮಾಡಿದೆ. ಆದರೆ, ಕೋವಿಡ್ ಕಾರಣದಿಂದ ಶೂಟಿಂಗ್ ಸ್ಥಗಿತಗೊಂಡಿತ್ತು.
ಅಂದ್ಹಾಗೆ, ಏಪ್ರಿಲ್ ಕೊನೆಯಲ್ಲಿ ದೋಹಾದಲ್ಲಿ ಶೂಟಿಂಗ್ ಶುರು ಮಾಡಲು ಎಲ್ಲಾ ತಯಾರಿ ನಡೆದಿತ್ತು. ಈ ವೇಳೆ ಅಜಯ್ ದೇವಗನ್ ಜೊತೆ ಅಮಿತಾಭ್ ಬಚ್ಚನ್, ನಾಯಕಿ ನಟಿ ರಕುಲ್ ಪ್ರೀತ್ ಸಿಂಗ್ ಸಹ ಪಾಲ್ಗೊಳ್ಳಬೇಕಿತ್ತು.
ಸದ್ಯದ ಮಾಹಿತಿ ಪ್ರಕಾರ, ಮೇಡೇ ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣ ಮುಗಿದಿದೆ. ದೋಹಾದಲ್ಲಿ ಮೂರು ದಿನಗಳ ಶೂಟಿಂಗ್ ಹಾಗೂ ಕತಾರ್ನಲ್ಲಿ ಕೊನೆಯ ಹಂತದ ಚಿತ್ರೀಕರಣದ ಬಳಿಕ ಸಿನಿಮಾ ಮುಗಿಸುವ ಯೋಜನೆಯಲ್ಲಿದ್ದರು. ನಿರ್ದೇಶಕ ಅಜಯ್ ದೇವಗನ್ ಕಡಿಮೆ ಸಿಬ್ಬಂದಿ ಜೊತೆ ಕತಾರ್ಗೆ ತೆರಳಿ ಕೊನೆಯ ಚಿತ್ರೀಕರಣ ಮಾಡಲು ನಿರ್ಧರಿಸಿದ್ದರು. ಆದ್ರೀಗ, ಆ ಯೋಜನೆಗೆ ಕೊರೊನಾ ಅಡ್ಡಿಯಾಗಿದೆ. ಈ ಹಿಂದೆ ಅಮಿತಾಭ್ ಬಚ್ಚನ್ ಮತ್ತು ರಕುಲ್ ಪ್ರೀತ್ ಸಿಂಗ್ ಇಬ್ಬರಿಗೂ ಕೊರೊನಾ ವೈರಸ್ ತಗುಲಿತ್ತು.
ಆ ಸಂದರ್ಭದಲ್ಲಿ ಬಿಗ್ ಬಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದುಕೊಂಡಿದ್ದರು. ರಕುಲ್ ತಮ್ಮ ಮನೆಯಲ್ಲಿ ಹೋಮ್ ಕ್ವಾರಂಟೈನ್ ಆಗಿದ್ದರು. ಒಂದು ವಾರದ ವಿಶ್ರಾಂತಿ ಬಳಿಕ ನೆಗೆಟಿವ್ ಫಲಿತಾಂಶ ಬಂದಿತ್ತು.
ಅಂದ್ಹಾಗೆ, ಮೇಡೇ ಸಿನಿಮಾ ನೈಜ ಘಟನೆಗಳ ಆಧರಿಸಿ ಸಿದ್ದವಾಗುತ್ತಿರುವ ಚಿತ್ರ. 2015ರಲ್ಲಿ ನಡೆದ ಕೆಲವು ಘಟನೆಗಳನ್ನು ಚಿತ್ರಕಥೆ ಮಾಡಿ ಸಿನಿಮಾ ರೂಪ ನೀಡಲಾಗುತ್ತಿದೆ. ದೋಹಾ ಮತ್ತು ಕೊಚ್ಚಿ ವಿಮಾನದ ಸಂಘರ್ಷದ ವೇಳೆ ನಡೆದ ಘಟನೆಯ ಸುತ್ತಮುತ್ತಾ ಕಥೆ ಮಾಡಲಾಗಿದೆ.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm