ಬ್ರೇಕಿಂಗ್ ನ್ಯೂಸ್
15-04-21 07:01 pm Source: FILMIBEAT ಸಿನಿಮಾ
ಕೆಜಿಎಫ್' ಸಿನಿಮಾದಲ್ಲಿ ಅಮ್ಮನ ಪಾತ್ರದ ಮೂಲಕ ಗಮನ ಸೆಳೆದಿದ್ದ ನಟಿ ಅರ್ಚನಾ ಜೋಯಿಸ್, ಈಗ ಮತ್ತೊಮ್ಮೆ ತೆರೆಯ ಮೇಲೆ ಮಿಂಚಲು ತಯಾರಾಗಿದ್ದಾರೆ. 'ಮುಂಗಾರುಮಳೆ' ಹಾಗೂ 'ಮೊಗ್ಗಿನ ಮನಸು' ಸಿನಿಮಾಗಳಲ್ಲಿ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದ ಜಿ.ಗಂಗಾಧರ್ ಸಿನಿಮಾಕ್ಕೆ ಬಂಡವಾಳ ಹೂಡಿದ್ದಾರೆ. ಇ.ಕೆ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಗೊಳ್ಳುತ್ತಿದೆ.
'ಮುಂಗಾರುಮಳೆ 2' ಚಿತ್ರದಲ್ಲಿ ನಿರ್ದೇಶಕ ಶಶಾಂಕ್ ಅವರೊಂದಿಗೆ ಕೆಲಸ ಮಾಡಿದ್ದ ಪ್ರಶಾಂತ್ ಚಂದ್ರ ಅವರು ಸಿನಿಮಾವನ್ನು ನಿರ್ದೇಶನ ಮಾಡಿದ್ದು ಸಿನಿಮಾ ಸದ್ದಿಲ್ಲದೆ ಶೂಟಿಂಗ್ ಕೂಡ ಪೂರ್ಣಗೊಳಿಸಿದೆ. ಇನ್ನೇನು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಸಿನಿಮಾದ ಶೀರ್ಷಿಕೆಯನ್ನು ನಟ ರಿಷಿ ಬುಧವಾರ ಬಿಡುಗಡೆಗೊಳಿಸಿದ್ದಾರೆ.
ಶೀರ್ಷಿಕೆಯ ಕುರಿತ 40 ಸೆಕೆಂಡ್ ವಿಡಿಯೊವೊಂದನ್ನು ಚಿತ್ರತಂಡ ಯೂಟ್ಯೂಬ್ನಲ್ಲಿ ಹಂಚಿಕೊಂಡಿದೆ. ವಿಶೇಷವೆಂದರೆ ಈ ಸಿನಿಮಾದಲ್ಲಿ ತಮಿಳಿನ ಪ್ರಖ್ಯಾತ ನಟ ಆಡುಕಲಂ ನರೇನ್ ನಟಿಸಿದ್ದಾರೆ. ಸಿದ್ದಾರ್ಥ್ ಮಾಧ್ಯಮಿಕ ಕೂಡ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕತೆಯುಳ್ಳ ಸಿನಿಮಾ ಆಗಿರುವುದರಿಂದ ಪಾತ್ರಗಳ ಬಗ್ಗೆ ಹೆಚ್ಚಿನ ಗುಟ್ಟು ಬಿಟ್ಟುಕೊಟ್ಟಿಲ್ಲ ಚಿತ್ರತಂಡ. "ನಿರ್ದೇಶಕನಾಗಿ ಇದು ನನಗೆ ಚೊಚ್ಚಲ ಚಿತ್ರ.
ಸಿನಿಮಾದ ಕಥೆ ವಿಭಿನ್ನವಾಗಿದೆ. ಥ್ರಿಲ್ಲರ್ ಸಿನಿಮಾ ಆಗಿರುವುದರಿಂದ ಸಾಕಷ್ಟು ತಿರುವುಗಳು ನೋಡಲು ಸಿಗಲಿವೆ. ಚಿತ್ರದ ಒಂದೊಂದು ದೃಶ್ಯವನ್ನೂ ಬಹಳ ಕಾಳಜಿ ಹಾಗೂ ಸಂಯಮದಿಂದ ಚಿತ್ರೀಕರಿಸಲಾಗಿದೆ. ಆದ್ದರಿಂದ ಶೂಟಿಂಗ್ ಮುಗಿಯುವವರೆಗೂ ನಾವು ಸಿನಿಮಾ ಕುರಿತು ಯಾವುದೇ ಮಾಹಿತಿ ಹಂಚಿಕೊಂಡಿರಲಿಲ್ಲ. ಥ್ರಿಲ್ಲರ್ ಚಿತ್ರಗಳ ಸಾಲಿನಲ್ಲಿ ನಮ್ಮ ಸಿನಿಮಾ ಉದಾಹರಣೆಯಾಗಿ ನಿಲ್ಲುವ ನಂಬಿಕೆ ನಮ್ಮ ತಂಡಕ್ಕಿದೆ' ಎಂದು ನಿರ್ದೇಶಕ ಪ್ರಶಾಂತ್ ಚಂದ್ರ ಹೇಳಿದ್ದಾರೆ.
'''#ಮ್ಯೂಟ್' ಶೀರ್ಷಿಕೆಯ ಪೋಸ್ಟರ್ ಬಿಡುಗಡೆ ಮಾಡಲು ಖುಷಿಯಾಗುತ್ತಿದೆ. ಇದರಲ್ಲಿ ಅದ್ಬುತ ನಟರು ಅಭಿನಯಿಸಿದ್ದಾರೆ. ಪ್ರತಿಭಾವಂತ ಪ್ರಶಾಂತ್ ಚಂದ್ರ ಅವರ ನಿರ್ದೇಶನದ ಈ ಸಿನಿಮಾಗೆ ಯಶಸ್ಸು ಸಿಗಲಿ'' ಎಂದು ನಟ ರಿಷಿ ತಂಡಕ್ಕೆ ಹಾರೈಸಿದ್ದಾರೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am