ಬ್ರೇಕಿಂಗ್ ನ್ಯೂಸ್
16-04-21 02:35 pm Headline Karnataka News Network ಸಿನಿಮಾ
ಬೆಂಗಳೂರು, ಎ.17: ಡ್ರಗ್ಸ್ ನಂಟಿನಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರು ಅನ್ನೋ ಗುಲ್ಲು ಹಬ್ಬಿತ್ತು. ನಿಶ್ಚಿತಾರ್ಥ ಆಗಿರುವ ಫೋಟೊ ಕೂಡ ವೈರಲ್ ಆಗಿತ್ತಲ್ಲದೆ, ಈ ನಡುವೆ ಮದುವೆಗಾಗಿ ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಇದೀಗ ಜೈಲಿನಿಂದ ಹೊರಬಂದಿರುವ ಸಂಜನಾ ತಾನು ಮತಾಂತರ ಆಗಿರುವುದನ್ನು ಸ್ವತಃ ಹೇಳಿಕೊಂಡಿದ್ದಾರೆ. ಅಲ್ಲದೆ, ಖುರಾನ್ ಕಲಿತು ನಮಾಜ್ ಓದಲು ಕಲಿಯುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿನ 'ಯುಗಾದಿ ಸಂಭ್ರಮ' ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಜನಾ ಗಲ್ರಾನಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ಆಧ್ಯಾತ್ಮದತ್ತ ವಾಲುತ್ತಿದ್ದೇನೆ. ಕೆಲ ತಿಂಗಳುಗಳಿಂದ ನಮಾಜ್ ಓದುವುದನ್ನು ರೂಢಿ ಮಾಡಿಕೊಳ್ಳುತ್ತಿದ್ದೇನೆ. ಕರ್ಮ, ದೇವರಲ್ಲಿ ನನಗೆ ನಂಬಿಕೆ ಇಟ್ಟಿದ್ದೇನೆ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗೋದು ನನ್ನ ವೈಯಕ್ತಿಕ ಆಯ್ಕೆಯಾಗಿತ್ತು. ಆ ಜೀವನದಿಂದ ನಾನು ಆಕರ್ಷಿತಳಾಗಿದ್ದೇನೆ. ನನ್ನ ನಿರ್ಧಾರ ರಾಜಕೀಯ ಪ್ರೇರಿತ ಅಲ್ಲ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.

ಫಿಟ್ನೆಸ್ ಪ್ಲಾನಿಂಗ್ ಬಗ್ಗೆ ಹೇಳಿಕೊಂಡ ಅವರು, ಈ ತಿಂಗಳು ನನ್ನ ನಿದ್ದೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಕೆಲಸ, ದಿನಚರಿಯಲ್ಲಿ ಬದಲಾವಣೆ ಆಗಬೇಕು. ಉಪವಾಸ ಮಾಡುತ್ತಿದ್ದೇನೆ. ನಾನು ಮತ್ತೆ ಫಿಟ್ನೆಸ್ ಬೆಳೆಸಿಕೊಳ್ಳಬೇಕು, ಸಂಜೆ ವರ್ಕೌಟ್ ಆರಂಭಿಸುತ್ತೇನೆ. ರಾತ್ರಿ 9 ಗಂಟೆಗೆ ಉಪವಾಸ ಮುಗಿಸುತ್ತೇನೆ. ರಮ್ಜಾನ್ ಉಪವಾಸವನ್ನು ಚೆನ್ನಾಗಿಯೇ ಮಾಡುತ್ತೇನೆ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.
It was my own choice for conversion to Islam says sandalwood actor aanjana galrani who was arrested in drugs case in Bangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am