ಬ್ರೇಕಿಂಗ್ ನ್ಯೂಸ್
16-04-21 02:35 pm Headline Karnataka News Network ಸಿನಿಮಾ
ಬೆಂಗಳೂರು, ಎ.17: ಡ್ರಗ್ಸ್ ನಂಟಿನಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರು ಅನ್ನೋ ಗುಲ್ಲು ಹಬ್ಬಿತ್ತು. ನಿಶ್ಚಿತಾರ್ಥ ಆಗಿರುವ ಫೋಟೊ ಕೂಡ ವೈರಲ್ ಆಗಿತ್ತಲ್ಲದೆ, ಈ ನಡುವೆ ಮದುವೆಗಾಗಿ ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಇದೀಗ ಜೈಲಿನಿಂದ ಹೊರಬಂದಿರುವ ಸಂಜನಾ ತಾನು ಮತಾಂತರ ಆಗಿರುವುದನ್ನು ಸ್ವತಃ ಹೇಳಿಕೊಂಡಿದ್ದಾರೆ. ಅಲ್ಲದೆ, ಖುರಾನ್ ಕಲಿತು ನಮಾಜ್ ಓದಲು ಕಲಿಯುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿನ 'ಯುಗಾದಿ ಸಂಭ್ರಮ' ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಜನಾ ಗಲ್ರಾನಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ಆಧ್ಯಾತ್ಮದತ್ತ ವಾಲುತ್ತಿದ್ದೇನೆ. ಕೆಲ ತಿಂಗಳುಗಳಿಂದ ನಮಾಜ್ ಓದುವುದನ್ನು ರೂಢಿ ಮಾಡಿಕೊಳ್ಳುತ್ತಿದ್ದೇನೆ. ಕರ್ಮ, ದೇವರಲ್ಲಿ ನನಗೆ ನಂಬಿಕೆ ಇಟ್ಟಿದ್ದೇನೆ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗೋದು ನನ್ನ ವೈಯಕ್ತಿಕ ಆಯ್ಕೆಯಾಗಿತ್ತು. ಆ ಜೀವನದಿಂದ ನಾನು ಆಕರ್ಷಿತಳಾಗಿದ್ದೇನೆ. ನನ್ನ ನಿರ್ಧಾರ ರಾಜಕೀಯ ಪ್ರೇರಿತ ಅಲ್ಲ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.

ಫಿಟ್ನೆಸ್ ಪ್ಲಾನಿಂಗ್ ಬಗ್ಗೆ ಹೇಳಿಕೊಂಡ ಅವರು, ಈ ತಿಂಗಳು ನನ್ನ ನಿದ್ದೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಕೆಲಸ, ದಿನಚರಿಯಲ್ಲಿ ಬದಲಾವಣೆ ಆಗಬೇಕು. ಉಪವಾಸ ಮಾಡುತ್ತಿದ್ದೇನೆ. ನಾನು ಮತ್ತೆ ಫಿಟ್ನೆಸ್ ಬೆಳೆಸಿಕೊಳ್ಳಬೇಕು, ಸಂಜೆ ವರ್ಕೌಟ್ ಆರಂಭಿಸುತ್ತೇನೆ. ರಾತ್ರಿ 9 ಗಂಟೆಗೆ ಉಪವಾಸ ಮುಗಿಸುತ್ತೇನೆ. ರಮ್ಜಾನ್ ಉಪವಾಸವನ್ನು ಚೆನ್ನಾಗಿಯೇ ಮಾಡುತ್ತೇನೆ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.
It was my own choice for conversion to Islam says sandalwood actor aanjana galrani who was arrested in drugs case in Bangalore.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm