ಬ್ರೇಕಿಂಗ್ ನ್ಯೂಸ್
16-04-21 06:59 pm Source: FILMIBEAT ಸಿನಿಮಾ
ಸುಮಾರು 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ತೆಲುಗಿನ ಖ್ಯಾತ ಪೋಷಕ ನಟ, ಬರಹಗಾರ, ಕವಿ ತನಿಕೆಲ್ಲ ಭರಣಿ ಸಾಮಾಜಿಕ ಜಾಲತಾಣದಲ್ಲಿ ಕ್ಷಮಾಪಣೆ ಕೇಳಿದ್ದಾರೆ. 'ಕೈಮುಗಿದು ಕ್ಷಮೆ ಕೇಳುವೆ ಕ್ಷಮಿಸಿಬಿಡಿ' ಎಂದು ಮನವಿ ಮಾಡಿದ್ದಾರೆ. ಆಗಿದ್ದಿಷ್ಟು, ಉತ್ತಮ ಕವಿಯೂ ಆಗಿರುವ ತನಿಕೆಲ್ಲ ಭರಣಿ ಸಾಮಾಜಿಕ ಜಾಲತಾಣದಲ್ಲಿ ಸ್ವರಚಿತ ಕವನಗಳನ್ನು ಪ್ರಕಟಿಸುತ್ತಿರುತ್ತಾರೆ. ಅವರ ಕವಿತೆಗಳಿಗೆ ಸಾಕಷ್ಟು ಸಂಖ್ಯೆಯ ಓದುಗರಿದ್ದಾರೆ. ಇತ್ತೀಚೆಗೆ ಅವರೇ ವಾಚಿಸಿದ್ದ 'ನಾನ್ನ ಎಂದುಕೊ ಎನಕಬಡ್ಡಾಡು' ಕವಿತೆ ಭಾರಿ ವೈರಲ್ ಆಗಿತ್ತು. ಕನ್ನಡಕ್ಕೂ ಅನುವಾದಗೊಂಡಿತ್ತು.
'ಶಭಾಷ್ ರ ಶಂಕರ' ಹೆಸರಿನಲ್ಲಿ ದೇವರ ಕುರಿತು, ಅಧ್ಯಾತ್ಮ ಕುರಿತು ಕೆಲವು ಕವನಗಳನ್ನು ಹಂಚಿಕೊಂಡಿದ್ದರು ಭರಣಿ. ಅಂತೆಯೇ ಇತ್ತೀಚೆಗೆ ದೇವರನ್ನು ನಂಬದ ನಾಸ್ತಿಕರ ಬಗ್ಗೆ ಕವನ ಬರೆದು ಫೇಸ್ಬುಕ್ನಲ್ಲಿ ಪ್ರಕಟಿಸಿದ್ದರು. ಕವನದಲ್ಲಿ ನಾಸ್ತಿಕರನ್ನು ಕತ್ತೆಗೆ ಹೋಲಿಸಿ, ನಿಂದಾತ್ಮಕ ಸಾಲುಗಳನ್ನು ಬರೆದಿದ್ದರು ಭರಣಿ. ಇದು ವಿವಾದಕ್ಕೆ ಕಾರಣವಾಗಿತ್ತು.
ಸಾಮಾಜಿಕ ಜಾಲತಾಣದಲ್ಲಿ ಚರ್ಚೆ
ಭರಣಿ ಅವರ ಕವನದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗಳಾಗಿ, ದೇವರನ್ನು ನಂಬದಿರುವುದು ವ್ಯಕ್ತಿಯ ಆಯ್ಕೆಗೆ ಬಿಟ್ಟ ವಿಚಾರ. ದೇವರನ್ನು ನಂಬದವರು ಎಂದರೆ ಅನಾಚಾರಿಗಳು ಎಂದರ್ಥವಲ್ಲ ಎಂದು ಕೆಲ ವಿಚಾರವಾದಿಗಳು ವಾದ ಮಂಡಿಸಿದ್ದರು. ಚರ್ಚೆಯು ವಿವಾದದ ಸ್ವರೂಪ ತಾಳಿದ್ದನ್ನು ಗಮನಿಸಿದ ಭರಣಿ ಸಾಮಾಜಿಕ ಜಾಲತಾಣದಲ್ಲಿ ಕ್ಷಮಾಪಣೆ ಕೋರಿದ್ದಾರೆ.
ಕೈಮುಗಿದು ಕ್ಷಮೆ ಕೇಳುತ್ತಿದ್ದೇನೆ ಎಂದ ಭರಣಿ
ವಿಡಿಯೋ ಪ್ರಕಟಿಸಿರುವ ಭರಣಿ, 'ಕೆಲವು ದಿನಗಳಿಂದ ನಾನು ಫೇಸ್ಬುಕ್ನಲ್ಲಿ ಪ್ರಕಟಿಸುತ್ತಿರುವ 'ಶಭಾಷ್ ರ ಶಂಕರ' ಪದ್ಯಗಳಲ್ಲಿ ಒಂದು ಪದ್ಯದಲ್ಲಿನ ಕೆಲವು ಸಾಲುಗಳು ದುರಾದೃಷ್ಟವಶಾತ್ ಕೆಲವರ ಮನಸ್ಸನ್ನು ನೋಯಿಸಿವೆ. ಹಾಗಾಗಿ ನಾನು ಕೈಮುಗಿದು ಬೇಷರತ್ತು ಕ್ಷಮೆ ಕೇಳುತ್ತೇನೆ' ಎಂದಿದ್ದಾರೆ ಭರಣಿ.
ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದೇನೆ: ಭರಣಿ
'ನನಗೆ ವಿಚಾರವಾದಿಗಳೆಂದರೆ, ಮಾನವತಾವಾದಿಗಳೆಂದರೆ ಬಹಳ ಗೌರವ. ನಾನು ಬರೆದ ಸಾಲುಗಳಿಗೆ ನಾನು ವಿವರಣೆ ನೀಡುವುದಿಲ್ಲ, ಹಾಗೆ ಮಾಡಿದಲ್ಲಿ 'ಡಿಫೆಂಡ್' ಮಾಡಿಕೊಂಡಂತಾಗುತ್ತದೆ. ನಾನು ಬರೆದ ಆ ಕವಿತೆಯನ್ನು ಸಹ ಫೇಸ್ಬುಕ್ನಿಂದ ಡಿಲೀಟ್ ಮಾಡಿದ್ದೀನಿ' ಎಂದಿದ್ದಾರೆ ಭರಣಿ.
750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ
ಭರಣಿ ಅವರು ತೆಲುಗು ಚಿತ್ರರಂಗದ ಬಹು ಬೇಡಿಕೆಯ ಪೋಷಕ ನಟ. 1985 ರಿಂದಲೂ ಸಿನಿಮಾಗಳಲ್ಲಿ ನಟಿಸುತ್ತಿರುವ ಭರಣಿ ಈವರೆಗೆ 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವಾರು ಸಿನಿಮಾಗಳಿಗೆ ಸಂಭಾಷಣೆ, ಚಿತ್ರಕತೆ ಸಹ ಬರೆದಿರುವ ಭರಣಿ. ಎಸ್.ಪಿ.ಬಾಲಸುಬ್ರಹ್ಮಣ್ಯಂ-ಲಕ್ಷ್ಮಿ ನಟಿಸಿರುವ 'ಮಿಥುನಂ' ಸಿನಿಮಾವನ್ನು ನಿರ್ದೇಶನ ಸಹ ಮಾಡಿದ್ದಾರೆ.
This News Article Is A Copy Of FILMIBEAT
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm