ಬ್ರೇಕಿಂಗ್ ನ್ಯೂಸ್
17-04-21 10:30 am Headline Karnataka News Network ಸಿನಿಮಾ
ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ವಿವೇಕ್ (59) ಶನಿವಾರ ಬೆಳಗ್ಗೆ 5 ಗಂಟೆಗೆ ನಿಧನರಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಶುಕ್ರವಾರ ಮಧ್ಯಾಹ್ನ ನಟ ವಿವೇಕ್ ಎಸ್ಇಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯಾಘಾತ ಸಂಭವಿಸಿದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದರು. ವಿವೇಕ್ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದ ಹಿನ್ನೆಲೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ, ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಇಂದು (ಏಪ್ರಿಲ್ 17) ಮುಂಜಾನೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯಿಂದ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.

ನಟ ವಿವೇಕ್ ತಮ್ಮ ಪತ್ನಿ ಹಾಗೂ ಮಗಳನ್ನು ಬಿಟ್ಟು ಅಗಲಿದ್ದಾರೆ. ವಿವೇಕ್ ಅವರ ನಿಧನಕ್ಕೆ ದಕ್ಷಿಣ ಚಿತ್ರರಂಗ ಸಂತಾಪ ಸೂಚಿಸಿದೆ. ಹಾಸ್ಯನಟನ ಸಾವಿನ ಸುದ್ದಿ ಬೆಳ್ಳಂಬೆಳಗ್ಗೆ ಆಘಾತ ತಂದಿದ್ದು, ಹಲವರು ಈ ಸುದ್ದಿಯಿಂದ ತೀರಾ ಬೇಸರಗೊಂಡಿದ್ದಾರೆ.
ಅಂದ್ಹಾಗೆ, ನಟ ವಿವೇಕ್ ಗುರುವಾರ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ಕೊರೊನಾ ವೈರಸ್ ಲಸಿಕೆ ಪಡೆದ ಮರುದಿನವೇ ಹೃದಯಾಘಾತಕ್ಕೆ ಒಳಗಾಗಿದ್ದ ಅನುಮಾನ ಮೂಡಿಸಿತ್ತು. ಬಳಿಕ ವೈದ್ಯರು ಈ ಕುರಿತು ಸ್ಪಷ್ಟನೆ ನೀಡಿದ್ದರು. ಕೋವಿಡ್ ಲಸಿಕೆ ಪಡೆದುದ್ದರಿಂದ ಹೃದಯಾಘಾತ ಸಂಭವಿಸಿಲ್ಲ ಎಂದು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದರು.

ತಮಿಳು ಇಂಡಸ್ಟ್ರಿಯಲ್ಲಿ ಸಿನಿ ಜರ್ನಿ ಆರಂಭಿಸಿದ್ದ ವಿವೇಕ್ ಕಳೆದ ಮೂರುವರೆ ದಶಕದಿಂದ ಸಕ್ರಿಯರಾಗಿದ್ದಾರೆ. ಕೆ ಬಾಲಚಂದಿರ್ ಅವರು ವಿವೇಕ್ ಅವರನ್ನು ಚಿತ್ರರಂಗಕ್ಕೆ ಪರಿಚಿಯಿಸಿದ್ದರು. ತಮಿಳಿನ ಜೊತೆಗೆ ತೆಲುಗು ಹಾಗೂ ಕನ್ನಡದ (ಚಂದ್ರ) ಒಂದು ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರರಂಗಕ್ಕೆ ವಿವೇಕ್ ನೀಡಿರುವ ಕೊಡುಗೆ ಗೌರವಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿತ್ತು. ಅದಲ್ಲದೇ ಫಿಲಂ ಫೇರ್ ಪ್ರಶಸ್ತಿ, ತಮಿಳು ರಾಜ್ಯ ಚಲಚನಚಿತ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
Popular Tamil actor and comedian Vivekh died this morning in the hospital hours after he was admitted after a cardiac arrest. The 59-year-old was reportedly critical in a Chennai hospital after a cardiac arrest on Thursday morning.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am