ಬ್ರೇಕಿಂಗ್ ನ್ಯೂಸ್
18-04-21 11:33 am Mangaluru Correspondent ಸಿನಿಮಾ
ಮಂಗಳೂರು, ಎ.18: ತುಳು ಮತ್ತು ಕನ್ನಡ ಚಿತ್ರರಂಗದಲ್ಲಿ ಉದಯೋನ್ಮುಖ ನಿರ್ದೇಶಕರಾಗಿ ಹೆಸರು ಮಾಡಿದ್ದ ರಘು ಶೆಟ್ಟಿ (39) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯಾಘಾತ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರಘು ಶೆಟ್ಟಿ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಸಂಜೆ ಕೊನೆಯುಸಿರೆಳೆದಿದ್ದಾರೆ.
ರಘು ಶೆಟ್ಟಿ ಮೂಲತಃ ಮೂಡುಬಿದ್ರೆಯವರು. ಅವರ ತಂದೆ ಹುಬ್ಬಳ್ಳಿಯಲ್ಲಿ ಬಿಸಿನೆಸ್ ಹೊಂದಿದ್ದರಿಂದ ಪ್ರಾಥಮಿಕ ಶಿಕ್ಷಣವನ್ನು ಅಲ್ಲಿಯೇ ಪೂರೈಸಿದ್ದರು. ಬಳಿಕ ಮೂಡುಬಿದ್ರೆಯ ಮಹಾವೀರ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದರು. ಯುವಕನಾಗಿದ್ದಾಗಲೇ ಫಿಲ್ಮ್ ಬಗ್ಗೆ ಆಸಕ್ತಿ ಹೊಂದಿದ್ದಲ್ಲದೆ ಬೆಂಗಳೂರಿನಲ್ಲಿದ್ದುಕೊಂಡು ಕನ್ನಡ ಚಿತ್ರರಂಗದಲ್ಲಿ ನೆಲೆಯೂರಿದ್ದರು. ಸ್ವಂತ ನಿರ್ದೇಶನದಲ್ಲಿ ಮೊದಲಿಗೆ ತುಳು ಚಿತ್ರವನ್ನು ತಯಾರಿಸಿದ್ದರು.
ತಮ್ಮ ಮೊದಲ ಸಿನಿಮಾ ‘ಅರ್ಜುನ್ ವೆಡ್ಸ್ ಅಮೃತಾ’ ಮೂಲಕ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದ ತುಳು ಮತ್ತು ಕನ್ನಡ ಚಿತ್ರರಂಗದಲ್ಲಿ ನೆಲೆಯೂರಲು ಆಸಕ್ತಿ ತೋರಿದ್ದರು. ಫ್ಯಾಮಿಲಿ ಹಿಟ್ ಸಿನಿಮಾವಾಗಿ ಗಮನ ಸೆಳೆದಿದ್ದ ಅರ್ಜುನ್ ವೆಡ್ಸ್ ಅಮೃತಾ ಸಿನಿಮಾದ ನಿರ್ದೇಶನಕ್ಕಾಗಿ ರಘು ಶೆಟ್ಟಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯೂ ಲಭಿಸಿತ್ತು.

ಈ ಹಿಂದೆ ಉದಯ ಟಿವಿ ಸೇರಿದಂತೆ ಹಲವು ಸುದ್ದಿ ವಾಹಿನಿಗಳಲ್ಲಿ ಉದ್ಯೋಗದಲ್ಲಿದ್ದ ರಘು ಶೆಟ್ಟಿ ಸುದ್ದಿ ವಾಹಿನಿಗಳು ಎರಡು ಮೂರು ವರ್ಷಗಳ ಹಿಂದೆ ತೀವ್ರ ಸಂಚಲನಕ್ಕೀಡಾದ ಬಳಿಕ ತುಳು ಸಿನಿಮಾದತ್ತ ಆಸಕ್ತಿ ಬೆಳೆಸಿದ್ದರು. ಈ ನಡುವೆ ಬೆಂಗಳೂರಿನಲ್ಲಿ ಹೊಟೇಲ್ ಉದ್ಯಮವನ್ನೂ ನಡೆಸಿದ್ದರು. ಅರ್ಜುನ್ ವೆಡ್ಸ್ ಚಿತ್ರ ಹಿಟ್ ಆಗಿದ್ದರಿಂದ ಕನ್ನಡ ಸಿನಿಮಾ ನಿರ್ದೇಶನಕ್ಕೂ ಕೈಹಾಕಿದ್ದರು. ನಟ ಕೋಮಲ್ ಜೊತೆ ಕನ್ನಡ ಸಿನಿಮಾ ತಯಾರಿಯಲ್ಲಿದ್ದ ರಘು ಶೆಟ್ಟಿ, ಇನ್ನೇನು ಸಿನಿಮಾ ಚಿತ್ರೀಕರಣ ನಡೆಸುವವರಿದ್ದರು. ಆದರೆ, ಅಷ್ಟರಲ್ಲೇ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ತುಳು ಸಿನಿಮಾ ರಂಗದಲ್ಲಿ ಹೆಜ್ಜೆ ಇಡುತ್ತಿದ್ದಾಗಲೇ ಇನ್ನಿಲ್ಲವಾದ ರಘು ಶೆಟ್ಟಿಯವರ ನಿಧನದ ತುಳು ಸಿನಿಮಾ ರಂಗದ ಕಲಾವಿದರು ಶೋಕ ವ್ಯಕ್ತಪಡಿಸಿದ್ದಾರೆ.
Renowned Tulu cinema director Raghu Shetty succumbed to heart attack on Saturday April 17 evening. He was 42.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am