ಬ್ರೇಕಿಂಗ್ ನ್ಯೂಸ್
19-04-21 01:37 pm Headline Karnataka News Network ಸಿನಿಮಾ
ಬೆಂಗಳೂರು,ಎ.19: ಮಠ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಆಗಿದೆ. ಸೋಶಿಯಲ್ ಮೀಡಿಯಾ ಮೂಲಕ ಈ ವಿಚಾರವನ್ನು ಖಚಿತಪಡಿಸಿರುವ ಅವರು, ಅನೇಕರ ವಿರುದ್ಧ ಹರಿಹಾಯ್ದಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಬಿ.ವೈ. ರಾಘವೇಂದ್ರ, ಆರೋಗ್ಯ ಸಚಿವ ಸುಧಾಕರ್, ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಒಂದು ವೇಳೆ ತಾವು ನಿಧನರಾದರೆ ಅದಕ್ಕೆ ಯಡಿಯೂರಪ್ಪ, ರಾಘವೇಂದ್ರ, ಸುಧಾಕರ್ ಮುಂತಾದ ರಾಜಕಾರಣಿಗಳೇ ಕಾರಣ ಎಂದು ಗುರು ಪ್ರಸಾದ್ ಹೇಳಿದ್ದಾರೆ.


ಕೊನೇ ಕ್ಷಣಗಳ ಕೊನೇ ಮಾತುಗಳು. ಕೊರೊನಾ ಪಾಸಿಟಿವ್ ಬಂದಿದೆ. ನಮ್ಮ ಮನೆಯವರೆಗೂ ಕೊರೊನಾ ತಂದುಕೊಟ್ಟಂತಹ ಯಡಿಯೂರಪ್ಪ, ವಿಜಯೇಂದ್ರ ಇವರಿಗೆಲ್ಲ ಧನ್ಯವಾದಗಳು. ನಮ್ಮ ಸಾವಿಗೆ ಮುನ್ನುಡಿ ಬರೆದಿದ್ದೀರಿ. ಕೊರೊನಾ ಪಾಸಿಟಿವ್ ಆಗಿದ್ದಕ್ಕೆ ನೋವಿನಲ್ಲಿ ಮಾತನಾಡುತ್ತಿದ್ದೇನೆ. ನಾನು ಸತ್ತರೂ ಕೂಡ ಕೊನೇ ಕ್ಷಣದವರೆಗೂ ನನ್ನ ಈ ಶಾಪ ನೋವು ಕೊಡಬೇಕು ಎಂದು ಈ ಮಾತು ಹೇಳುತ್ತಿದ್ದೇನೆ. ಒಂದೂವರೆ ವರ್ಷ ಟೈಮ್ ತಗೊಂಡು, ಮೂರು-ನಾಲ್ಕು ತಿಂಗಳು ಲಾಕ್ಡೌನ್ ಮಾಡಿದ್ರಲ್ಲ’ ಎನ್ನುವ ಮೂಲಕ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ವಿಫಲವಾಗಿದೆ ಎಂದಿದ್ದಾರೆ ಗುರುಪ್ರಸಾದ್.

ಮೋದಿ ಪ್ರಾಮಾಣಿಕ. ಆದರೆ ಬಿಜಿಪಿಯವರೆಲ್ಲ ಪ್ರಾಮಾಣಿಕರಲ್ಲ. ಜೆಡಿಎಸ್, ಕಾಂಗ್ರೆಸ್ನವರೆಲ್ಲ ಪ್ರಾಮಾಣಿಕರಲ್ಲ. ಒಂದು ವೈರಸ್ ನಿಮ್ಮನ್ನು ಆಡಿಸುತ್ತಿದೆ. ವಿಜ್ಞಾನದ ಹಿನ್ನೆಲೆ ಇದ್ದರೆ ಡಾ. ಸುಧಾಕರ್ ಬೆಂಗಳೂರಿನಲ್ಲಿ ಒಂದು ಲಕ್ಷ ವಾರ್ಫೇರ್ ಟೆಂಟ್ ಹಾಕಿಸಿ. ಅದರ ಬದಲು ಯಾವುದೇ ಬ್ಯುಸಿನೆಸ್ ನಿಲ್ಲಿಸ ಬೇಡಿ. ಒಂದೊಂದು ರೂಪಾಯಿ ದುಡಿಯಲು ಎಲ್ಲರೂ ಕಷ್ಟ ಪಡುತ್ತಿದ್ದಾರೆ. ಒಂದೂವರೆ ವರ್ಷ ಸಮಯ ತೆಗೆದುಕೊಂಡು ಪ್ರತಿಮನೆಗೂ ವೈರಸ್ ಕಳಿಸಿದ್ದೀರಲ್ಲ.. ಬಿಜೆಪಿ ಸರ್ಕಾರಕ್ಕೆ ಧನ್ಯವಾದಗಳು. ನನಗೆ ಕೊರೊನಾ ಬಂದಿದೆ. ಅಕಸ್ಮಾತ್ ಸತ್ತು ಹೋದರೆ ಇದನ್ನೆಲ್ಲ ಹೇಳೋಕೆ ಆಗಲ್ಲ’ ಎಂದು ಗುರುಪ್ರಸಾದ್ ಹೇಳಿದ್ದಾರೆ.
ಚಿತ್ರರಂಗದ ಅನೇಕ ಜನರನ್ನು ಸಾಯಿಸಿದ್ದೀರಿ. ನಾನು ಕೂಡ ಹಾರ್ಟ್ ಅಟ್ಯಾಕ್ ಆಗಿ ಸಾಯಬಹುದು. ಮನೆಮನೆಗೂ ವೈರಸ್ ಬಂದಿದೆ. ಸಿನಿಮಾ ಪ್ರಚಾರಕ್ಕಾಗಿ ಇದನ್ನೆಲ್ಲ ನಾನು ಮಾಡುತ್ತಿಲ್ಲ. ನಾನು ಬದುಕಿದ್ದರೆ ತಾನೇ ಅದೆಲ್ಲ. ಪ್ರತಿಯೊಬ್ಬರು ಬದುಕುವುದು ಕೂಡ ಮುಖ್ಯ. ಕರ್ನಾಟಕದಲ್ಲಿ ಕೊರೊನಾದಿಂದಾದ ಪ್ರತಿ ಸಾವಿಗೆ ಡಾ. ಸುಧಾಕರ್ ಕಾರಣ. ಡಿ.ಕೆ. ಶಿವಕುಮಾರ್. ಎಚ್.ಡಿ. ಕುಮಾರಸ್ವಾಮಿ ಸಾಚಾ ಎಂದು ನಾನು ಹೇಳುತ್ತಿಲ್ಲ. ಎಲ್ಲರೂ ನಮ್ಮನ್ನು ಕೊಲ್ಲುತ್ತಿದ್ದೀರಿ. ಇದು ನನ್ನ ಡೆತ್ ನೋಟ್. ನನ್ನ ಸಾವಿಗೆ ನೀವೆಲ್ಲರೂ ಕಾರಣ’ ಎಂದು ಗುರುಪ್ರಸಾದ್ ಹೇಳಿರುವ ವಿಡಿಯೋ ವೈರಲ್ ಆಗುತ್ತಿದೆ.
Director Guruprasad mata tested covid positive. Alleges Karnataka ministers CM and Dr Sudhakar will be responsible for my death on Facebook live video.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am