ಬ್ರೇಕಿಂಗ್ ನ್ಯೂಸ್
20-04-21 07:50 pm Source: FILMIBEAT ಸಿನಿಮಾ
ಹಿಂದಿ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ ಕಿಶೋರ್ ನಂದಲಸ್ಕರ್ (kishore nandlaskar) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಾಸ್ತವ್, ಸಿಂಗಮ್, ಸಿಂಬಾ ಸೇರಿದಂತೆ ಹಲವು ಚಿತ್ರಗಳಲ್ಲಿ ವಿಶೇಷ ಪಾತ್ರಗಳಲ್ಲಿ ನಟಿಸಿದ್ದ ಕಿಶೋರ್ ಅವರು ಮಂಗಳವಾರ ಮಧ್ಯಾಹ್ನ ಥಾಣೆಯಲ್ಲಿ ನಿಧನರಾದರು.
81 ವರ್ಷದ ಕಿಶೋರ್ ನಂದಲಸ್ಕರ್ ಅವರು ಕೊರೊನಾ ವೈರಸ್ನಿಂದ ಬಳಲುತ್ತಿದ್ದರು. ಕಿಶೋರ್ ಅವರ ಮೊಮ್ಮಗ ಅನಿಶ್ ತಮ್ಮ ತಾತನ ಕೋವಿಡ್ನಿಂದ ನಿಧನರಾಗಿರುವ ಸುದ್ದಿಯನ್ನು ಎಬಿಪಿಗೆ ತಿಳಿಸಿದ್ದಾರೆ.
''ನನ್ನ ಅಜ್ಜ ಕಳೆದ ವಾರ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಏಪ್ರಿಲ್ 14 ರಂದು ಥಾಣೆಯ ಕೋವಿಡ್ -19 ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಅವರು ಇಂದು ಮಧ್ಯಾಹ್ನ ಕೋವಿಡ್ ಕೇಂದ್ರದಲ್ಲಿ ಕೊನೆಯುಸಿರೆಳೆದರು" ಎಂದು ಹೇಳಿದರು. ''ಕೋವಿಡ್ ಕೇಂದ್ರಕ್ಕೆ ಪ್ರವೇಶ ಪಡೆಯುವ ಮೊದಲು ಉಸಿರಾಡಲು ಮತ್ತು ಮಾತನಾಡಲು ಕಷ್ಟ ಅನುಭವಿಸುತ್ತಿದ್ದರು. ಅವರ ಆಮ್ಲಜನಕದ ಮಟ್ಟವೂ ಗಮನಾರ್ಹವಾಗಿ ಕುಸಿದಿತ್ತು'' ಎಂದು ಮೊಮ್ಮಗ ಅನಿಶ್ ಮಾಹಿತಿ ನೀಡಿದ್ದಾರೆ.
ಕಿಶೋರ್ ನಂದಲಸ್ಕರ್ ಅವರು ಮರಾಠಿ ಚಿತ್ರರಂಗದಲ್ಲಿ ಪ್ರಸಿದ್ಧ ನಟ. 1989 ರಲ್ಲಿ ಬಿಡುಗಡೆಯಾದ 'ಇನಾ ಮಿನಾ ಡಿಕಾ' ಚಿತ್ರದ ಮೂಲಕ ಮರಾಠಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಖಾಕೀ (2004), ವಾಸ್ತವ್: ದಿ ರಿಯಾಲಿಟಿ (1999), ಸಿಂಗಮ್ (2011) ಮತ್ತು ಬಾಲಿವುಡ್ ಚಿತ್ರಗಳಲ್ಲಿಯೂ ಅವರು ಕಾಣಿಸಿಕೊಂಡಿದ್ದರು.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am