ಬ್ರೇಕಿಂಗ್ ನ್ಯೂಸ್
22-04-21 08:39 pm Source: FILMIBEAT ಸಿನಿಮಾ
ಕೊರೊನಾ ಪಾಸಿಟಿವ್ ಆಗಿರುವ ನಟಿ ಅನು ಪ್ರಭಾಕರ್ ಮುಖರ್ಜಿ ಅವರು ಸರ್ಕಾರವು ಕೊರೊನಾ ಪ್ರಕರಣಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುತ್ತಿಲ್ಲದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ನಟಿ ಅನು ಪ್ರಭಾಕರ್ ಅವರಿಗೆ ಏಪ್ರಿಲ್ 17 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಅವರಿಗೆ ಸ್ಯಾಂಪಲ್ ರೆಫರಸ್ ಫಾರ್ಮ್ ನಂಬರ್ ಸಹ ದೊರಕಿತ್ತು. ಆದರೆ ಅದಾಗಿ ನಾಲ್ಕು ದಿನವಾದರೂ ಅನು ಪ್ರಭಾಕರ್ ಅವರ ದಾಖಲೆಗಳು ಕೋವಿಡ್ ವಾರ್ ವೆಬ್ಸೈಟ್ಗೆ ಅಪ್ಲೋಡ್ ಆಗಿರಲಿಲ್ಲ. ಈ ಬಗ್ಗೆ ಸಚಿವ ಸುಧಾಕರ್ ಅವರಿಗೆ ಟ್ವೀಟ್ ಮಾಡಿದ್ದ ಅನು ಪ್ರಭಾಕರ್, ನನಗೆ ಈ ವರೆಗೆ ಬಿಯು ನಂಬರ್ ಸಹ ದೊರೆತಿಲ್ಲ ಹಾಗೂ ಬಿಬಿಎಂಪಿಯಿಂದ ಕರೆ ಸಹ ಬಂದಿಲ್ಲ' ಎಂದಿದ್ದರು.
ಇದೀಗ ಅನುಪ್ರಭಾಕರ್ ಅವರು ಅವರ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿರು ವಿಡಿಯೋಗಳನ್ನು ಪ್ರಕಟಿಸುವ ಮೂಲಕ ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.
ಅನು ಪ್ರಭಾಕರ್ ಅವರಿಗೆ ಪಾಸಿಟಿವ್ ಬಂದಿದೆಯಾದರೂ ಅವರ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ಇದು ಹೇಗೆ ಸಾಧ್ಯವಾಯಿತು ಎಂಬುದರ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿರುವ ಅನು ಪ್ರಭಾಕರ್, 'ನನಗೆ ಕಳೆದ ವಾರವೇ ರುಚಿ ಮತ್ತು ವಾಸನೆ ಗ್ರಹಿಕೆ ನಿಧಾನಕ್ಕೆ ಕಡಿಮೆಯಾಗುತ್ತಾ ಬಂತು. ಕೂಡಲೇ ನಾನು ವೈದ್ಯೆ ಆಗಿರುವ ನನ್ನ ಸಹೋದರಿಗೆ ಕರೆ ಮಾಡಿದೆ, ಆಕೆಯ ಸಲಹೆಯಂತೆ ಪರೀಕ್ಷೆಗೆ ಒಳಪಟ್ಟೆ ಹಾಗೂ ವರದಿಗಾಗಿ ಕಾಯದೆ ನನ್ನ ಕುಟುಂಬದವರಿಂದ ಪ್ರತ್ಯೇಕವಾಗಿ ಇದ್ದು ಐಸೋಲೇಶನ್ಗೆ ಒಳಪಟ್ಟೆ.
ಬಹುಷಃ ಹಾಗಾಗಿ ನನ್ನ ಕುಟುಂಬದವರಿಗೆ ನೆಗೆಟಿವ್ ಬಂತು' ಎಂದಿದ್ದಾರೆ. 'ಯಾರಿಗೇ ಆಗಲಿ ರೋಗ ಲಕ್ಷಣಗಳು ಬಂದ ಕೂಡಲೇ ಪರೀಕ್ಷೆಗೆ ಒಳಪಡಿ ಮತ್ತು ವರದಿಗಾಗಿ ಕಾಯದೆ ಮೊದಲು ಐಸೋಲೇಷನ್ ಆಗಿ' ಎಂದು ಮನವಿ ಮಾಡಿದ್ದಾರೆ ಅನು ಪ್ರಭಾಕರ್. ನಟಿಯ ಈ ಜಾಗೃತಿ ವಿಡಿಯೋವನ್ನು ಕರ್ನಾಟಕ ಆರೋಗ್ಯ ಇಲಾಖೆ ಸಹ ರೀಟ್ವೀಟ್ ಮಾಡಿದೆ.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm