ಬ್ರೇಕಿಂಗ್ ನ್ಯೂಸ್
22-04-21 08:39 pm Source: FILMIBEAT ಸಿನಿಮಾ
ಕೊರೊನಾ ಪಾಸಿಟಿವ್ ಆಗಿರುವ ನಟಿ ಅನು ಪ್ರಭಾಕರ್ ಮುಖರ್ಜಿ ಅವರು ಸರ್ಕಾರವು ಕೊರೊನಾ ಪ್ರಕರಣಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುತ್ತಿಲ್ಲದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ನಟಿ ಅನು ಪ್ರಭಾಕರ್ ಅವರಿಗೆ ಏಪ್ರಿಲ್ 17 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಅವರಿಗೆ ಸ್ಯಾಂಪಲ್ ರೆಫರಸ್ ಫಾರ್ಮ್ ನಂಬರ್ ಸಹ ದೊರಕಿತ್ತು. ಆದರೆ ಅದಾಗಿ ನಾಲ್ಕು ದಿನವಾದರೂ ಅನು ಪ್ರಭಾಕರ್ ಅವರ ದಾಖಲೆಗಳು ಕೋವಿಡ್ ವಾರ್ ವೆಬ್ಸೈಟ್ಗೆ ಅಪ್ಲೋಡ್ ಆಗಿರಲಿಲ್ಲ. ಈ ಬಗ್ಗೆ ಸಚಿವ ಸುಧಾಕರ್ ಅವರಿಗೆ ಟ್ವೀಟ್ ಮಾಡಿದ್ದ ಅನು ಪ್ರಭಾಕರ್, ನನಗೆ ಈ ವರೆಗೆ ಬಿಯು ನಂಬರ್ ಸಹ ದೊರೆತಿಲ್ಲ ಹಾಗೂ ಬಿಬಿಎಂಪಿಯಿಂದ ಕರೆ ಸಹ ಬಂದಿಲ್ಲ' ಎಂದಿದ್ದರು.
ಇದೀಗ ಅನುಪ್ರಭಾಕರ್ ಅವರು ಅವರ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿರು ವಿಡಿಯೋಗಳನ್ನು ಪ್ರಕಟಿಸುವ ಮೂಲಕ ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.
ಅನು ಪ್ರಭಾಕರ್ ಅವರಿಗೆ ಪಾಸಿಟಿವ್ ಬಂದಿದೆಯಾದರೂ ಅವರ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ಇದು ಹೇಗೆ ಸಾಧ್ಯವಾಯಿತು ಎಂಬುದರ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿರುವ ಅನು ಪ್ರಭಾಕರ್, 'ನನಗೆ ಕಳೆದ ವಾರವೇ ರುಚಿ ಮತ್ತು ವಾಸನೆ ಗ್ರಹಿಕೆ ನಿಧಾನಕ್ಕೆ ಕಡಿಮೆಯಾಗುತ್ತಾ ಬಂತು. ಕೂಡಲೇ ನಾನು ವೈದ್ಯೆ ಆಗಿರುವ ನನ್ನ ಸಹೋದರಿಗೆ ಕರೆ ಮಾಡಿದೆ, ಆಕೆಯ ಸಲಹೆಯಂತೆ ಪರೀಕ್ಷೆಗೆ ಒಳಪಟ್ಟೆ ಹಾಗೂ ವರದಿಗಾಗಿ ಕಾಯದೆ ನನ್ನ ಕುಟುಂಬದವರಿಂದ ಪ್ರತ್ಯೇಕವಾಗಿ ಇದ್ದು ಐಸೋಲೇಶನ್ಗೆ ಒಳಪಟ್ಟೆ.
ಬಹುಷಃ ಹಾಗಾಗಿ ನನ್ನ ಕುಟುಂಬದವರಿಗೆ ನೆಗೆಟಿವ್ ಬಂತು' ಎಂದಿದ್ದಾರೆ. 'ಯಾರಿಗೇ ಆಗಲಿ ರೋಗ ಲಕ್ಷಣಗಳು ಬಂದ ಕೂಡಲೇ ಪರೀಕ್ಷೆಗೆ ಒಳಪಡಿ ಮತ್ತು ವರದಿಗಾಗಿ ಕಾಯದೆ ಮೊದಲು ಐಸೋಲೇಷನ್ ಆಗಿ' ಎಂದು ಮನವಿ ಮಾಡಿದ್ದಾರೆ ಅನು ಪ್ರಭಾಕರ್. ನಟಿಯ ಈ ಜಾಗೃತಿ ವಿಡಿಯೋವನ್ನು ಕರ್ನಾಟಕ ಆರೋಗ್ಯ ಇಲಾಖೆ ಸಹ ರೀಟ್ವೀಟ್ ಮಾಡಿದೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am