ಬ್ರೇಕಿಂಗ್ ನ್ಯೂಸ್
22-04-21 08:39 pm Source: FILMIBEAT ಸಿನಿಮಾ
ಕೊರೊನಾ ಪಾಸಿಟಿವ್ ಆಗಿರುವ ನಟಿ ಅನು ಪ್ರಭಾಕರ್ ಮುಖರ್ಜಿ ಅವರು ಸರ್ಕಾರವು ಕೊರೊನಾ ಪ್ರಕರಣಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುತ್ತಿಲ್ಲದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ನಟಿ ಅನು ಪ್ರಭಾಕರ್ ಅವರಿಗೆ ಏಪ್ರಿಲ್ 17 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಅವರಿಗೆ ಸ್ಯಾಂಪಲ್ ರೆಫರಸ್ ಫಾರ್ಮ್ ನಂಬರ್ ಸಹ ದೊರಕಿತ್ತು. ಆದರೆ ಅದಾಗಿ ನಾಲ್ಕು ದಿನವಾದರೂ ಅನು ಪ್ರಭಾಕರ್ ಅವರ ದಾಖಲೆಗಳು ಕೋವಿಡ್ ವಾರ್ ವೆಬ್ಸೈಟ್ಗೆ ಅಪ್ಲೋಡ್ ಆಗಿರಲಿಲ್ಲ. ಈ ಬಗ್ಗೆ ಸಚಿವ ಸುಧಾಕರ್ ಅವರಿಗೆ ಟ್ವೀಟ್ ಮಾಡಿದ್ದ ಅನು ಪ್ರಭಾಕರ್, ನನಗೆ ಈ ವರೆಗೆ ಬಿಯು ನಂಬರ್ ಸಹ ದೊರೆತಿಲ್ಲ ಹಾಗೂ ಬಿಬಿಎಂಪಿಯಿಂದ ಕರೆ ಸಹ ಬಂದಿಲ್ಲ' ಎಂದಿದ್ದರು.
ಇದೀಗ ಅನುಪ್ರಭಾಕರ್ ಅವರು ಅವರ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿರು ವಿಡಿಯೋಗಳನ್ನು ಪ್ರಕಟಿಸುವ ಮೂಲಕ ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.
ಅನು ಪ್ರಭಾಕರ್ ಅವರಿಗೆ ಪಾಸಿಟಿವ್ ಬಂದಿದೆಯಾದರೂ ಅವರ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ಇದು ಹೇಗೆ ಸಾಧ್ಯವಾಯಿತು ಎಂಬುದರ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿರುವ ಅನು ಪ್ರಭಾಕರ್, 'ನನಗೆ ಕಳೆದ ವಾರವೇ ರುಚಿ ಮತ್ತು ವಾಸನೆ ಗ್ರಹಿಕೆ ನಿಧಾನಕ್ಕೆ ಕಡಿಮೆಯಾಗುತ್ತಾ ಬಂತು. ಕೂಡಲೇ ನಾನು ವೈದ್ಯೆ ಆಗಿರುವ ನನ್ನ ಸಹೋದರಿಗೆ ಕರೆ ಮಾಡಿದೆ, ಆಕೆಯ ಸಲಹೆಯಂತೆ ಪರೀಕ್ಷೆಗೆ ಒಳಪಟ್ಟೆ ಹಾಗೂ ವರದಿಗಾಗಿ ಕಾಯದೆ ನನ್ನ ಕುಟುಂಬದವರಿಂದ ಪ್ರತ್ಯೇಕವಾಗಿ ಇದ್ದು ಐಸೋಲೇಶನ್ಗೆ ಒಳಪಟ್ಟೆ.
ಬಹುಷಃ ಹಾಗಾಗಿ ನನ್ನ ಕುಟುಂಬದವರಿಗೆ ನೆಗೆಟಿವ್ ಬಂತು' ಎಂದಿದ್ದಾರೆ. 'ಯಾರಿಗೇ ಆಗಲಿ ರೋಗ ಲಕ್ಷಣಗಳು ಬಂದ ಕೂಡಲೇ ಪರೀಕ್ಷೆಗೆ ಒಳಪಡಿ ಮತ್ತು ವರದಿಗಾಗಿ ಕಾಯದೆ ಮೊದಲು ಐಸೋಲೇಷನ್ ಆಗಿ' ಎಂದು ಮನವಿ ಮಾಡಿದ್ದಾರೆ ಅನು ಪ್ರಭಾಕರ್. ನಟಿಯ ಈ ಜಾಗೃತಿ ವಿಡಿಯೋವನ್ನು ಕರ್ನಾಟಕ ಆರೋಗ್ಯ ಇಲಾಖೆ ಸಹ ರೀಟ್ವೀಟ್ ಮಾಡಿದೆ.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am