ಬ್ರೇಕಿಂಗ್ ನ್ಯೂಸ್
22-04-21 08:39 pm Source: FILMIBEAT ಸಿನಿಮಾ
ಕೊರೊನಾ ಪಾಸಿಟಿವ್ ಆಗಿರುವ ನಟಿ ಅನು ಪ್ರಭಾಕರ್ ಮುಖರ್ಜಿ ಅವರು ಸರ್ಕಾರವು ಕೊರೊನಾ ಪ್ರಕರಣಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡುತ್ತಿಲ್ಲದಿರುವ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡುತ್ತಿದ್ದಾರೆ.
ನಟಿ ಅನು ಪ್ರಭಾಕರ್ ಅವರಿಗೆ ಏಪ್ರಿಲ್ 17 ರಂದು ಕೊರೊನಾ ಪಾಸಿಟಿವ್ ಆಗಿತ್ತು. ಅವರಿಗೆ ಸ್ಯಾಂಪಲ್ ರೆಫರಸ್ ಫಾರ್ಮ್ ನಂಬರ್ ಸಹ ದೊರಕಿತ್ತು. ಆದರೆ ಅದಾಗಿ ನಾಲ್ಕು ದಿನವಾದರೂ ಅನು ಪ್ರಭಾಕರ್ ಅವರ ದಾಖಲೆಗಳು ಕೋವಿಡ್ ವಾರ್ ವೆಬ್ಸೈಟ್ಗೆ ಅಪ್ಲೋಡ್ ಆಗಿರಲಿಲ್ಲ. ಈ ಬಗ್ಗೆ ಸಚಿವ ಸುಧಾಕರ್ ಅವರಿಗೆ ಟ್ವೀಟ್ ಮಾಡಿದ್ದ ಅನು ಪ್ರಭಾಕರ್, ನನಗೆ ಈ ವರೆಗೆ ಬಿಯು ನಂಬರ್ ಸಹ ದೊರೆತಿಲ್ಲ ಹಾಗೂ ಬಿಬಿಎಂಪಿಯಿಂದ ಕರೆ ಸಹ ಬಂದಿಲ್ಲ' ಎಂದಿದ್ದರು.
ಇದೀಗ ಅನುಪ್ರಭಾಕರ್ ಅವರು ಅವರ ಮನೆಯಲ್ಲಿಯೇ ಐಸೋಲೇಷನ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕಿರು ವಿಡಿಯೋಗಳನ್ನು ಪ್ರಕಟಿಸುವ ಮೂಲಕ ಜನರಿಗೆ ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡುತ್ತಿದ್ದಾರೆ.
ಅನು ಪ್ರಭಾಕರ್ ಅವರಿಗೆ ಪಾಸಿಟಿವ್ ಬಂದಿದೆಯಾದರೂ ಅವರ ಕುಟುಂಬದವರಿಗೆ ನೆಗೆಟಿವ್ ಬಂದಿದೆ. ಇದು ಹೇಗೆ ಸಾಧ್ಯವಾಯಿತು ಎಂಬುದರ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿರುವ ಅನು ಪ್ರಭಾಕರ್, 'ನನಗೆ ಕಳೆದ ವಾರವೇ ರುಚಿ ಮತ್ತು ವಾಸನೆ ಗ್ರಹಿಕೆ ನಿಧಾನಕ್ಕೆ ಕಡಿಮೆಯಾಗುತ್ತಾ ಬಂತು. ಕೂಡಲೇ ನಾನು ವೈದ್ಯೆ ಆಗಿರುವ ನನ್ನ ಸಹೋದರಿಗೆ ಕರೆ ಮಾಡಿದೆ, ಆಕೆಯ ಸಲಹೆಯಂತೆ ಪರೀಕ್ಷೆಗೆ ಒಳಪಟ್ಟೆ ಹಾಗೂ ವರದಿಗಾಗಿ ಕಾಯದೆ ನನ್ನ ಕುಟುಂಬದವರಿಂದ ಪ್ರತ್ಯೇಕವಾಗಿ ಇದ್ದು ಐಸೋಲೇಶನ್ಗೆ ಒಳಪಟ್ಟೆ.
ಬಹುಷಃ ಹಾಗಾಗಿ ನನ್ನ ಕುಟುಂಬದವರಿಗೆ ನೆಗೆಟಿವ್ ಬಂತು' ಎಂದಿದ್ದಾರೆ. 'ಯಾರಿಗೇ ಆಗಲಿ ರೋಗ ಲಕ್ಷಣಗಳು ಬಂದ ಕೂಡಲೇ ಪರೀಕ್ಷೆಗೆ ಒಳಪಡಿ ಮತ್ತು ವರದಿಗಾಗಿ ಕಾಯದೆ ಮೊದಲು ಐಸೋಲೇಷನ್ ಆಗಿ' ಎಂದು ಮನವಿ ಮಾಡಿದ್ದಾರೆ ಅನು ಪ್ರಭಾಕರ್. ನಟಿಯ ಈ ಜಾಗೃತಿ ವಿಡಿಯೋವನ್ನು ಕರ್ನಾಟಕ ಆರೋಗ್ಯ ಇಲಾಖೆ ಸಹ ರೀಟ್ವೀಟ್ ಮಾಡಿದೆ.
This News Article Is A Copy Of FILMIBEAT
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm