ಬ್ರೇಕಿಂಗ್ ನ್ಯೂಸ್
26-08-20 01:25 am Headline Karnataka News Network ಸಿನಿಮಾ
ಬೆಂಗಳೂರು, ಆಗಸ್ಟ್ 25: ಬಿಗ್ಬಾಸ್ ಖ್ಯಾತಿಯ ರ್ಯಾಪರ್ ಚಂದನ್ ಶೆಟ್ಟಿ ಈಗ ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದು, ಮಲೆ ಮಹದೇಶ್ವರ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇತ್ತೀಚೆಗಷ್ಟೆ ಕೋಲು ಮಂಡೆ ಜಂಗಮ ದೇವರು ಎಂಬ ರ್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಬಿಡುಗಡೆ ಮಾಡಿದ್ದರು. ಈ ಹಾಡಿನ ವಿಡಿಯೋದಲ್ಲಿ ಶರಣೆ ಸಂಕಮ್ಮ ಅವರ ಪಾತ್ರವನ್ನು ಅಶ್ಲೀಲ ರೀತಿಯಲ್ಲಿ ಚಿತ್ರೀಕರಿಸಲಾಗಿದೆ ಎಂದು ಚಂದನ್ ಶೆಟ್ಟಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಇದೇ ತಿಂಗಳ 22 ರಂದ ಯೂಟ್ಯೂಬ್ನಲ್ಲಿ ಕೋಲು ಮಂಡೆ ಹಾಡು ಬಿಡುಗಡೆಯಾಗಿದ್ದು, ಅದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಾಡು ಬಿಡುಗಡೆಯಾದ ಮೂರು ದಿನಗಳಲ್ಲಿ 30 ಲಕ್ಷ ವೀಕ್ಷಣೆ ಪಡೆದುಕೊಂಡಿದೆ.
ಹೀಗಿರುವಾಗಲೇ, ಈ ಹಾಡು ಹಾಗೂ ಚಂದನ್ ಶೆಟ್ಟಿ ವಿರುದ್ಧ ಮಲೆ ಮಹದೇಶ್ವರ ಭಕ್ತರು ಸಿಟ್ಟಾಗಿದ್ದಾರೆ. ಮಹದೇಶ್ವರನ ಭಕ್ತೆ ಶಿವಶರಣೆ ಸಂಕಮ್ಮ ಅವರನ್ನು ಅಶ್ಲೀಲವಾಗಿ ಚಿತ್ರೀಕರಿಸಲಾಗಿದೆ ಮತ್ತು ಜಾನಪದಗೀತೆಯನ್ನು ಮೂಲ ದಾಟಿಗೆ ವಿರುದ್ದವಾಗಿ ಹಾಡಲಾಗಿದೆ ಎಂದು ಆರೋಪಿಸಲಾಗುತ್ತಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚಂದನ್ ಶೆಟ್ಟಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಶ್ರೀ ಮಲೆ ಮಹದೇಶ್ವರ ಸ್ವಾಮಿ ಗ್ರೂಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಚಂದನ್ ಶೆಟ್ಟಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಶರಣೆ ಸಂಕಮ್ಮಳನ್ನು ಕೆಟ್ಟ ರೀತಿಯಲ್ಲಿ ಚಿತ್ರೀಕರಿಸಿರುವ ಈ ಹಾಡನ್ನು ಯುಟ್ಯೂಬ್ ನಿಂದ ಕೂಡಲೇ ಡಿಲೀಟ್ ಮಾಡಬೇಕು ಹಾಗೂ ಕ್ಷಮೆ ಯಾಚಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.
ಚಂದನ್ ಶೆಟ್ಟಿ ಪ್ರತಿಕ್ರಿಯೆ ಈ ವಿವಾದದ ಕುರಿತಾಗಿ ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡಿರುವ ಚಂದನ್ ಶೆಟ್ಟಿ, ಮಲೆ ಮಹದೇಶ್ವರ ಭಕ್ತರಿಗೆ ಕ್ಷಮೆ ಯಾಚಿಸಿದ್ದಾರೆ. ಜೊತೆಗೆ ಹಾಡನ್ನು ಯೂಟ್ಯೂಬ್ನಿಂದ ಡಿಲೀಟ್ ಮಾಡಿಸಿದ್ದಾರೆ. ತಮ್ಮಿಂದ ತಪ್ಪಾಗಿದೆ, ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಕ್ಕೆ ಕ್ಷಮೆ ಇರಲಿ ಎಂದಿದ್ದಾರೆ ಗಾಯಕ.
ಯುವ ದಸರಾ ವೇದಿಕೆಯಲ್ಲಿ ನಿವೇದಿತಾ ಗೌಡ ಅವರಿಗೆ ತಮ್ಮ ಪ್ರೇಮ ನಿವೇದನೆ ಮಾಡುವ ಮೂಲಕ ಚಂದನ್ ಶೆಟ್ಡಿ ವಿವಾದಕ್ಕೀಡಾಗಿದ್ದರು. ಯುವ ದಸರಾ ವೇದಿಕೆಯನ್ನು ಚಂದನ್ ಶೆಟ್ಟಿ ವೈಯಕ್ತಿಕ ಕೆಲಸಕ್ಕಾಗಿ ದುರ್ಬಳಕೆ ಮಾಡಿಕೊಂಡರು ಎಂದೂ ಸಾಕಷ್ಟು ಮಂದಿ ಆಕ್ರೋಶ ವ್ಯಕ್ತಪಡಿಸಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm