ಬ್ರೇಕಿಂಗ್ ನ್ಯೂಸ್
29-04-21 05:56 pm Source: FILMIBEAT ಸಿನಿಮಾ
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ. ಅದರಲ್ಲಿಯೂ ಬಾಲಿವುಡ್ ನಟ-ನಟಿಯರ ಮೇಲಂತೂ ಆರೋಪ ಹೆಚ್ಚಿಗೇ ಇದೆ. ಕೆಲವಾರು ನಟರು ಈ ಸಂಕಷ್ಟದ ಸಮಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.
ಸೋನು ಸೂದ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಇನ್ನೂ ಕೆಲವು ನಟರು ಆಮ್ಲಜನಕ ಪೂರೈಕೆ, ಬೆಡ್ ಪೂರೈಕೆ, ಉಚಿತ ಆಹಾರ ಪೂರೈಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ನಟರು ಕೊರೊನಾ ಸಂಕಷ್ಟಕ್ಕೆ ಸ್ಪಂದಿಸಿರುವುದು ಹೆಚ್ಚಾಗಿ ಸದ್ದಿಯಾಗಿಲ್ಲ. ತಮಿಳಿನ ಖ್ಯಾತ ನಟ ವಿಜಯ್ ಅವರ ಅಭಿಮಾನಿಗಳು ಮಾತ್ರ ಕೊರೊನಾ ರೋಗಿಗಳ ನೆರವಿಗೆ ನಿಂತಿರುವುದು ಪ್ರಶಂಸೆಗೆ ಗುರಿಯಾಗಿದೆ.
ತಮಿಳುನಾಡಿನ ವಿರುಧಾಚಲಮ್ನ ವಿಜಯ್ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟದಲ್ಲಿರುವವರಿಗಾಗಿ 10 ಆಮ್ಲಜನಕ ಸಿಲಿಂಡರ್ಗಳು, ಹಲವು ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ವಿಜಯ್ ಅಭಿಮಾನಿಗಳು ನೆರವಿನ ಹಸ್ತ ಚಾಚಿರುವುದು ಇದು ಮೊದಲೇನಲ್ಲ. ಚೆನ್ನೈ ಹಾಗೂ ಕೇರಳ ಪ್ರವಾಹದ ಸಂದರ್ಭದಲ್ಲಿ, ಕಳೆದ ವರ್ಷ ಕೊರೊನಾ ಸಮಯದಲ್ಲಿ ದೊಡ್ಡ ಮಟ್ಟದ ಸಹಾಯವನ್ನು ವಿಜಯ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಗಿತ್ತು.
ಸ್ವತಃ ನಟ ವಿಜಯ್ ಸಹ ಹಲವಾರು ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳಿಗೆ, ಅಭಿಮಾನಿಗಳ ಸಂಕಷ್ಟಕ್ಕೆ, ಕೊರೊನಾ ಸಮಯದಲ್ಲಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದರು. ಕಳೆದ ವರ್ಷ ಕೊರೊನಾ ಸಮಯದಲ್ಲಿ 1.30 ಕೋಟಿಯನ್ನು ಸರ್ಕಾರಕ್ಕೆ ದೇಣಿಗೆ ನೀಡಿದ್ದರು.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am