ಬ್ರೇಕಿಂಗ್ ನ್ಯೂಸ್
29-04-21 05:56 pm Source: FILMIBEAT ಸಿನಿಮಾ
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ. ಅದರಲ್ಲಿಯೂ ಬಾಲಿವುಡ್ ನಟ-ನಟಿಯರ ಮೇಲಂತೂ ಆರೋಪ ಹೆಚ್ಚಿಗೇ ಇದೆ. ಕೆಲವಾರು ನಟರು ಈ ಸಂಕಷ್ಟದ ಸಮಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.
ಸೋನು ಸೂದ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಇನ್ನೂ ಕೆಲವು ನಟರು ಆಮ್ಲಜನಕ ಪೂರೈಕೆ, ಬೆಡ್ ಪೂರೈಕೆ, ಉಚಿತ ಆಹಾರ ಪೂರೈಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ನಟರು ಕೊರೊನಾ ಸಂಕಷ್ಟಕ್ಕೆ ಸ್ಪಂದಿಸಿರುವುದು ಹೆಚ್ಚಾಗಿ ಸದ್ದಿಯಾಗಿಲ್ಲ. ತಮಿಳಿನ ಖ್ಯಾತ ನಟ ವಿಜಯ್ ಅವರ ಅಭಿಮಾನಿಗಳು ಮಾತ್ರ ಕೊರೊನಾ ರೋಗಿಗಳ ನೆರವಿಗೆ ನಿಂತಿರುವುದು ಪ್ರಶಂಸೆಗೆ ಗುರಿಯಾಗಿದೆ.
ತಮಿಳುನಾಡಿನ ವಿರುಧಾಚಲಮ್ನ ವಿಜಯ್ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟದಲ್ಲಿರುವವರಿಗಾಗಿ 10 ಆಮ್ಲಜನಕ ಸಿಲಿಂಡರ್ಗಳು, ಹಲವು ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ವಿಜಯ್ ಅಭಿಮಾನಿಗಳು ನೆರವಿನ ಹಸ್ತ ಚಾಚಿರುವುದು ಇದು ಮೊದಲೇನಲ್ಲ. ಚೆನ್ನೈ ಹಾಗೂ ಕೇರಳ ಪ್ರವಾಹದ ಸಂದರ್ಭದಲ್ಲಿ, ಕಳೆದ ವರ್ಷ ಕೊರೊನಾ ಸಮಯದಲ್ಲಿ ದೊಡ್ಡ ಮಟ್ಟದ ಸಹಾಯವನ್ನು ವಿಜಯ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಗಿತ್ತು.
ಸ್ವತಃ ನಟ ವಿಜಯ್ ಸಹ ಹಲವಾರು ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳಿಗೆ, ಅಭಿಮಾನಿಗಳ ಸಂಕಷ್ಟಕ್ಕೆ, ಕೊರೊನಾ ಸಮಯದಲ್ಲಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದರು. ಕಳೆದ ವರ್ಷ ಕೊರೊನಾ ಸಮಯದಲ್ಲಿ 1.30 ಕೋಟಿಯನ್ನು ಸರ್ಕಾರಕ್ಕೆ ದೇಣಿಗೆ ನೀಡಿದ್ದರು.
This News Article Is A Copy Of FILMIBEAT
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm