ಬ್ರೇಕಿಂಗ್ ನ್ಯೂಸ್
03-05-21 02:47 pm Source: FILMIBEAT Shruthi Gk ಸಿನಿಮಾ
ಕೊರೊನಾ ಸೋಂಕಿತರು ಆಕ್ಸಿಜನ್, ಆಸ್ಪತ್ರೆ, ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಸಾವಿರಾರು ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ದಿನದಿಂದ ದಿನಕ್ಕೆ ಸಾವಿನ ಸಂಖ್ಯೆಯು ಹೆಚ್ಚಾಗುತ್ತಿದ್ದೆ. ಕೊರೊನಾ ಭೀಕರ ಸ್ಥಿತಿಗೆ ಇಡೀ ದೇಶ ನಲುಗಿ ಹೋಗಿದೆ.
ಈ ಸಂಕಷ್ಟದ ಸ್ಥಿತಿಯಲ್ಲಿ ಅನೇಕರು ಮುಂದೆ ಬಂದು ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್ ವ್ಯವಸ್ಥೆ ಮಾಡಿಸುತ್ತಿದ್ದಾರೆ. ಅನೇಕ ಸಿನಿಸೆಲೆಬ್ರಿಟಿಗಳು ಸಹ ಕಷ್ಟದಲ್ಲಿ ಇರೋರಿಗೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಖ್ಯಾತ ನಟ ಹರ್ಷವರ್ಧನ್ ರಾಣೆ ಕೂಡ ಕೋವಿಡ್ ರೋಗಿಗಳ ಸಹಾಯ ನಿಂತಿದ್ದಾರೆ.
ಆಮ್ಲಜನಕ ಕೊರತೆ ನೀಗಿಸಲು ಹರ್ಷವರ್ಧನ್ ತನ್ನ ಪ್ರೀತಿಯ ಬೈಕ್ ಅನ್ನೇ ಮಾರಾಟಕ್ಕೆ ಇಟ್ಟಿದ್ದಾರೆ. ಈ ಬಗ್ಗೆ ಹರ್ಷವರ್ಧನ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತನ್ನ ನೆಚ್ಚಿನ ಬೈಕ್ ಫೋಟೋಗಳನ್ನು ಹಂಚಿಕೊಳ್ಳುವ ಜೊತೆಗೆ 'ಆಗತ್ಯ ಇರುವವರಿಗೆ ಆಮ್ಲಜನಕ ಸಾಂದ್ರಕಗಳನ್ನು ಖರೀದಿಸಲು ನನ್ನ ಬೈಕ್ ಮಾರಾಟ ಮಾಡುತ್ತಿದ್ದೇನೆ. ಹೈದರಾಬಾದ್ ನಲ್ಲಿ ಉತ್ತಮ ಆಕ್ಸಿಜನ್ ಸಾಂದ್ರಕ ಎಲ್ಲಿ ಸಿಗುತ್ತೆ ಹೇಳಿ' ಎಂದು ಪೋಸ್ಟ್ ಹಾಕಿದ್ದಾರೆ.
ಸನಮ್ ತೇರಿ ಕಸಮ್ ಸಿನಿಮಾ ಮೂಲಕ ಸಿನಿಪ್ರೇಕ್ಷಕರ ಹೃದಯ ಗೆದ್ದಿರುವ ತೆಲುಗು ನಟ ಹರ್ಷವರ್ಧನ್ ಅವರ ಮಾನವೀಯ ಕೆಲಸಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂದಹಾಗೆ ಹರ್ಷವರ್ಧನ್ ಬಳಿ ಉತ್ತಮ ಬೈಕ್ ಮತ್ತು ಕಾರ್ ಕಲೆಕ್ಷನ್ ಗಳಿವೆ. ಹರ್ಷವರ್ಧನ್ ಬೈಕ್ ಕ್ರೇಜ್ ಬಗ್ಗೆ ಅವರ ಅಭಿಮಾನಿಗಳಿಗೆ ಗೊತ್ತಿರುವ ವಿಚಾರ. ಇದೀಗ ಕೊರೊನಾ ರೋಗಿಗಳಿಗೆ ಸಹಾಯ ಮಾಡಲು ತನ್ನ ನೆಚ್ಚಿನ ಬೈಕ್ ಅನ್ನೇ ಮಾರಾಟಕ್ಕೆ ಇಡುವ ಮೂಲಕ ರಿಯಲ್ ಹೀರೋ ಆಗಿದ್ದಾರೆ.
ಸಂಕಷ್ಟ ಸ್ಥಿತಿಯಲ್ಲಿ ಅನೇಕರು ಸಿನಿ ಸೆಲೆಬ್ರಿಟಿಗಳು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ, ಅಕ್ಷಯ್ ಕುಮಾರ್, ಅಜಯ್ ದೇವಗನ್, ಜಾನ್ ಅಬ್ರಹಾಂ, ಸಲ್ಮಾನ್ ಖಾನ್ ಇನ್ನು ಕನ್ನಡದ ನಟರಾದ ಅರ್ಜುನ್ ಗೌಡ, ಭುವನ್ ಪೊನ್ನಣ್ಣ ಸೇರಿದಂತೆ ಅನೇಕ ಸಿನಿತಾರೆಯರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.
This News Article Is A Copy Of FILMIBEAT
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm