ಬ್ರೇಕಿಂಗ್ ನ್ಯೂಸ್
04-05-21 11:05 am Source: FILMIBEAT Shruthi Gk ಸಿನಿಮಾ
ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ. ದಿನಕ್ಕೆ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿರುವ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದಾರೆ. ಕೊರೊನಾಗೆ ಅನೇಕ ಸಿನಿಮಾ ಮಂದಿ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿನ ತೀವ್ರತೆ ಬಗ್ಗೆ ಗೂಗ್ಲಿ ಸುಂದರಿ ಕೃತಿ ಕರಬಂದ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ. 48 ಗಂಟೆಗಳು ತನ್ನ ಕುಟುಂಬಕ್ಕೆ ತೀರಾ ಸಂಕಷ್ಟದ ಸಮಯವಾಗಿತ್ತು ಎಂದು ಹೇಳಿದ್ದಾರೆ. ಕಷ್ಟದ ಸಮಯ ಎದುರಿಸಿದ ಕೃತಿ ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.
'ಕಳೆದ 48 ಗಂಟೆಗಳು ನನಗೂ ನನ್ನ ಕುಟುಂಬಕ್ಕೂ ತೀರಾ ಸಂಕಟದ ಸಮಯವಾಗಿತ್ತು. ಅದು ಮನೆಗೆ ಬರುವವರೆಗೂ ಎಷ್ಟು ಭಯಾನಕ ಎನ್ನುವುದು ಗೊತ್ತಾಗಲ್ಲ. ದಯವಿಟ್ಟು ಮನೆಯಲ್ಲೇ ಇರಿ. ಮನೆಯಿಂದ ಹೊರಹೋಗಲು ನಿರ್ಧರಿಸಿದರೆ ಒಂದು ಹೆಜ್ಜೆ ಹಿಂದಕ್ಕೆ ಇಡಿ. ನಿಮ್ಮ ಪ್ರಾಣವನ್ನು ಪಣಕ್ಕಿಡುವುದು ಸರಿಯೇ ಎಂದು ಯೋಚಿಸಿ' ಎಂದು ಹೇಳಿದ್ದಾರೆ.
ಕೊರೊನಾ ಸಂಕಷ್ಟದಲ್ಲಿ ಅನುಭವಿಸಿದ ಕಷ್ಟವನ್ನು ವಿವರಿಸುವ ಮೂಲಕ ಎಲ್ಲರೂ ಸುರಕ್ಷಿತವಾಗಿ ಇರುವಂತೆ ಹೇಳಿದ್ದಾರೆ. ಕೃತಿ ಕರಬಂದ ಸದ್ಯ ಮುಂಬೈನಲ್ಲಿ ನೆಲೆಸಿದ್ದಾರೆ. ಕನ್ನಡದ ಗೂಗ್ಲಿ ಸಿನಿಮಾ ಮೂಲಕ ಪ್ರಖ್ಯಾತಿಗಳಿಸಿದ ಕೃತಿ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗಲಾಟೆ, ಸೂಪರ್ ರಂಗ, ಬೆಳ್ಳಿ, ದಳಪತಿ ಸೇರಿದಂತೆ ಕೆಲವು ಕನ್ನಡದ ಸಿನಿಮಾಗಳಲ್ಲಿ ಕೃತಿ ಮಿಂಚಿದ್ದಾರೆ. ಸದ್ಯ ಹಿಂದಿಯಲ್ಲಿ ಬ್ಯುಸಿಯಾಗಿರುವ ಕೃತಿ ಮುಂಬೈನಲ್ಲೇ ನೆಲೆಸಿದ್ದಾರೆ. ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಕೊರೊನಾ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಈ ಸಂಕಷ್ಟದ ಸಮಯದಲ್ಲಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್, ಆಸ್ಪತ್ರೆ ವ್ಯವಸ್ಥೆ ಮಾಡಿಸಿಕೊಡುತ್ತಿದ್ದಾರೆ.
This News Article Is A Copy Of FILMIBEAT
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm