ಬ್ರೇಕಿಂಗ್ ನ್ಯೂಸ್
04-05-21 11:05 am Source: FILMIBEAT Shruthi Gk ಸಿನಿಮಾ
ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ. ದಿನಕ್ಕೆ ಸಾವಿರಾರು ಮಂದಿಯನ್ನು ಬಲಿ ಪಡೆಯುತ್ತಿರುವ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಸೋಂಕಿತರು ಆಸ್ಪತ್ರೆ, ಬೆಡ್, ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದಾರೆ. ಕೊರೊನಾಗೆ ಅನೇಕ ಸಿನಿಮಾ ಮಂದಿ ಬಲಿಯಾಗಿದ್ದಾರೆ. ಕೋವಿಡ್ ಸೋಂಕಿನ ತೀವ್ರತೆ ಬಗ್ಗೆ ಗೂಗ್ಲಿ ಸುಂದರಿ ಕೃತಿ ಕರಬಂದ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿದ್ದಾರೆ. 48 ಗಂಟೆಗಳು ತನ್ನ ಕುಟುಂಬಕ್ಕೆ ತೀರಾ ಸಂಕಷ್ಟದ ಸಮಯವಾಗಿತ್ತು ಎಂದು ಹೇಳಿದ್ದಾರೆ. ಕಷ್ಟದ ಸಮಯ ಎದುರಿಸಿದ ಕೃತಿ ದಯವಿಟ್ಟು ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.
'ಕಳೆದ 48 ಗಂಟೆಗಳು ನನಗೂ ನನ್ನ ಕುಟುಂಬಕ್ಕೂ ತೀರಾ ಸಂಕಟದ ಸಮಯವಾಗಿತ್ತು. ಅದು ಮನೆಗೆ ಬರುವವರೆಗೂ ಎಷ್ಟು ಭಯಾನಕ ಎನ್ನುವುದು ಗೊತ್ತಾಗಲ್ಲ. ದಯವಿಟ್ಟು ಮನೆಯಲ್ಲೇ ಇರಿ. ಮನೆಯಿಂದ ಹೊರಹೋಗಲು ನಿರ್ಧರಿಸಿದರೆ ಒಂದು ಹೆಜ್ಜೆ ಹಿಂದಕ್ಕೆ ಇಡಿ. ನಿಮ್ಮ ಪ್ರಾಣವನ್ನು ಪಣಕ್ಕಿಡುವುದು ಸರಿಯೇ ಎಂದು ಯೋಚಿಸಿ' ಎಂದು ಹೇಳಿದ್ದಾರೆ.
ಕೊರೊನಾ ಸಂಕಷ್ಟದಲ್ಲಿ ಅನುಭವಿಸಿದ ಕಷ್ಟವನ್ನು ವಿವರಿಸುವ ಮೂಲಕ ಎಲ್ಲರೂ ಸುರಕ್ಷಿತವಾಗಿ ಇರುವಂತೆ ಹೇಳಿದ್ದಾರೆ. ಕೃತಿ ಕರಬಂದ ಸದ್ಯ ಮುಂಬೈನಲ್ಲಿ ನೆಲೆಸಿದ್ದಾರೆ. ಕನ್ನಡದ ಗೂಗ್ಲಿ ಸಿನಿಮಾ ಮೂಲಕ ಪ್ರಖ್ಯಾತಿಗಳಿಸಿದ ಕೃತಿ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗಲಾಟೆ, ಸೂಪರ್ ರಂಗ, ಬೆಳ್ಳಿ, ದಳಪತಿ ಸೇರಿದಂತೆ ಕೆಲವು ಕನ್ನಡದ ಸಿನಿಮಾಗಳಲ್ಲಿ ಕೃತಿ ಮಿಂಚಿದ್ದಾರೆ. ಸದ್ಯ ಹಿಂದಿಯಲ್ಲಿ ಬ್ಯುಸಿಯಾಗಿರುವ ಕೃತಿ ಮುಂಬೈನಲ್ಲೇ ನೆಲೆಸಿದ್ದಾರೆ. ಸಾಕಷ್ಟು ಮಂದಿ ಸೆಲೆಬ್ರಿಟಿಗಳು ಕೊರೊನಾ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಈ ಸಂಕಷ್ಟದ ಸಮಯದಲ್ಲಿ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಅಗತ್ಯ ಇರುವವರಿಗೆ ಆಕ್ಸಿಜನ್, ಆಸ್ಪತ್ರೆ ವ್ಯವಸ್ಥೆ ಮಾಡಿಸಿಕೊಡುತ್ತಿದ್ದಾರೆ.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am