ಬ್ರೇಕಿಂಗ್ ನ್ಯೂಸ್
06-05-21 11:43 am Source: FILMIBEAT Shruthi Gk ಸಿನಿಮಾ
ಕನ್ನಡದ ಹಲವು ಸಿನಿಮಾ ಸೆಲೆಬ್ರಿಟಿಗಳು ಇತ್ತೀಚಿನ ದಿನಗಳಲ್ಲಿ ಕೊರೊನಾ ಕಾರಣಕ್ಕೆ ನಿಧನ ಹೊಂದಿದ್ದಾರೆ. ಆ ಸಾಲಿಗೆ ಇಂದು ಮತ್ತೊಂದು ಸೇರ್ಪಡೆಯಾಗಿದೆ. ಕನ್ನಡಕ್ಕೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ಖ್ಯಾತ ನಿರ್ದೇಶಕ ರೇಣುಕಾ ಶರ್ಮಾ ಅವರು ಕೊರೊನಾದಿಂದಾಗಿ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
'ಕವಿರತ್ನ ಕಾಳಿದಾಸ', 'ಅಂಜದ ಗಂಡು', 'ಕಿಂದರ ಜೋಗಿ' ಸೇರಿದಂತೆ ಹಲವು ಸಿನಿಮಾಗಳನ್ನು ರೇಣುಕಾ ಶರ್ಮಾ ನಿರ್ದೇಶನ ಮಾಡಿದ್ದರು.
ಎರಡು ದಿನಗಳ ಹಿಂದಷ್ಟೆ ರೇಣುಕಾ ಶರ್ಮಾ ಅವರನ್ನು ಕೊರೊನಾ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರೇಣುಕಾ ಶರ್ಮಾ ನಿಧನ ಹೊಂದಿದ್ದಾರೆ. ಮೈಸೂರಿನ ಟಿ.ನರಸೀಪುರದವರಾದ ರೇಣುಕಾ ಶರ್ಮಾ ಅವರು 1960 ರಲ್ಲಿ ಚಿತ್ರರಂಗ ಪ್ರವೇಶಿಸಿದವರು.

ಸಿನಿಮಾ ನಟ ಆಗಲೇಬೇಕೆಂಬ ಕನಸು ಹೊತ್ತು ಮದ್ರಾಸಿಗೆ ಹೋಗಿ ಮೊದಲ ಬಾರಿಗೆ 'ಸರ್ವಜ್ಞ ಮೂರ್ತಿ' ಸಿನಿಮಾಕ್ಕೆ ಸಹಾಯಕನಾಗಿ ಕೆಲಸ ಮಾಡಿ ಅಲ್ಲಿಂದ ಸಿನಿಮಾ ಪಯಣ ಆರಂಭಿಸಿದರು. 20 ವರ್ಷಗಳ ಬಳಿಕ 1980 ರಲ್ಲಿ ಮೊದಲ ಬಾರಿಗೆ ಸ್ವಂತವಾಗಿ ನಿರ್ದೇಶನ ಮಾಡಿದರು.
ರೇಣುಕಾ ಶರ್ಮಾ ಮೊದಲ ಸಿನಿಮಾ 'ಅನುಪಮಾ'. ತೆಲುಗು, ತಮಿಳಿನಲ್ಲಿಯೂ ಕೆಲಸ ಮಾಡಿರುವ ರೇಣುಕಾ ಶರ್ಮಾ ಜಯಲಲಿತಾ, ಎಎನ್ಆರ್ ಅವರ ಸಿನಿಮಾಗಳಿಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಚಂದನವನದ ಹಲವು ಮಂದಿ ಸೆಲೆಬ್ರಿಟಿಗಳು ಕೆಲವೇ ದಿನಗಳಲ್ಲಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಚಂದನವನದ ಯುವ ನಿರ್ಮಾಪಕ ರಾಜಶೇಖರ್, ಖ್ಯಾತ ನಿರ್ಮಾಪಕ ರಾಮು, ನಿರ್ಮಾಪಕ ಚಂದ್ರಶೇಖರ್, ಮೇಕಪ್ಮ್ಯಾನ್ ಸೀನ, ಪುಟ್ಟಣ ಕಣಗಾಲ್ ಪುತ್ರ, ಡಿಸೈನರ್ ಮಸ್ತಾನ್ ಇವರೆಲ್ಲರುಗಳು ಕೆಲವೇ ದಿನಗಳ ಅಂತರದಲ್ಲಿ ಕೊರೊನಾಕ್ಕೆ ಬಲಿ ಆಗಿದ್ದಾರೆ. ನಿನ್ನೆಯಷ್ಟೆ ಯುವ ನಿರ್ದೇಶಕ ಸಂತೋಶ್ ಕೋವಿಡ್ನಿಂದ ಸಾವನ್ನಪ್ಪಿದ್ದರು.
This News Article Is A Copy Of FILMIBEAT
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm