ಬ್ರೇಕಿಂಗ್ ನ್ಯೂಸ್
06-05-21 11:43 am Source: FILMIBEAT Shruthi Gk ಸಿನಿಮಾ
ಕನ್ನಡದ ಹಲವು ಸಿನಿಮಾ ಸೆಲೆಬ್ರಿಟಿಗಳು ಇತ್ತೀಚಿನ ದಿನಗಳಲ್ಲಿ ಕೊರೊನಾ ಕಾರಣಕ್ಕೆ ನಿಧನ ಹೊಂದಿದ್ದಾರೆ. ಆ ಸಾಲಿಗೆ ಇಂದು ಮತ್ತೊಂದು ಸೇರ್ಪಡೆಯಾಗಿದೆ. ಕನ್ನಡಕ್ಕೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ಖ್ಯಾತ ನಿರ್ದೇಶಕ ರೇಣುಕಾ ಶರ್ಮಾ ಅವರು ಕೊರೊನಾದಿಂದಾಗಿ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
'ಕವಿರತ್ನ ಕಾಳಿದಾಸ', 'ಅಂಜದ ಗಂಡು', 'ಕಿಂದರ ಜೋಗಿ' ಸೇರಿದಂತೆ ಹಲವು ಸಿನಿಮಾಗಳನ್ನು ರೇಣುಕಾ ಶರ್ಮಾ ನಿರ್ದೇಶನ ಮಾಡಿದ್ದರು.
ಎರಡು ದಿನಗಳ ಹಿಂದಷ್ಟೆ ರೇಣುಕಾ ಶರ್ಮಾ ಅವರನ್ನು ಕೊರೊನಾ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರೇಣುಕಾ ಶರ್ಮಾ ನಿಧನ ಹೊಂದಿದ್ದಾರೆ. ಮೈಸೂರಿನ ಟಿ.ನರಸೀಪುರದವರಾದ ರೇಣುಕಾ ಶರ್ಮಾ ಅವರು 1960 ರಲ್ಲಿ ಚಿತ್ರರಂಗ ಪ್ರವೇಶಿಸಿದವರು.
ಸಿನಿಮಾ ನಟ ಆಗಲೇಬೇಕೆಂಬ ಕನಸು ಹೊತ್ತು ಮದ್ರಾಸಿಗೆ ಹೋಗಿ ಮೊದಲ ಬಾರಿಗೆ 'ಸರ್ವಜ್ಞ ಮೂರ್ತಿ' ಸಿನಿಮಾಕ್ಕೆ ಸಹಾಯಕನಾಗಿ ಕೆಲಸ ಮಾಡಿ ಅಲ್ಲಿಂದ ಸಿನಿಮಾ ಪಯಣ ಆರಂಭಿಸಿದರು. 20 ವರ್ಷಗಳ ಬಳಿಕ 1980 ರಲ್ಲಿ ಮೊದಲ ಬಾರಿಗೆ ಸ್ವಂತವಾಗಿ ನಿರ್ದೇಶನ ಮಾಡಿದರು.
ರೇಣುಕಾ ಶರ್ಮಾ ಮೊದಲ ಸಿನಿಮಾ 'ಅನುಪಮಾ'. ತೆಲುಗು, ತಮಿಳಿನಲ್ಲಿಯೂ ಕೆಲಸ ಮಾಡಿರುವ ರೇಣುಕಾ ಶರ್ಮಾ ಜಯಲಲಿತಾ, ಎಎನ್ಆರ್ ಅವರ ಸಿನಿಮಾಗಳಿಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಚಂದನವನದ ಹಲವು ಮಂದಿ ಸೆಲೆಬ್ರಿಟಿಗಳು ಕೆಲವೇ ದಿನಗಳಲ್ಲಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಚಂದನವನದ ಯುವ ನಿರ್ಮಾಪಕ ರಾಜಶೇಖರ್, ಖ್ಯಾತ ನಿರ್ಮಾಪಕ ರಾಮು, ನಿರ್ಮಾಪಕ ಚಂದ್ರಶೇಖರ್, ಮೇಕಪ್ಮ್ಯಾನ್ ಸೀನ, ಪುಟ್ಟಣ ಕಣಗಾಲ್ ಪುತ್ರ, ಡಿಸೈನರ್ ಮಸ್ತಾನ್ ಇವರೆಲ್ಲರುಗಳು ಕೆಲವೇ ದಿನಗಳ ಅಂತರದಲ್ಲಿ ಕೊರೊನಾಕ್ಕೆ ಬಲಿ ಆಗಿದ್ದಾರೆ. ನಿನ್ನೆಯಷ್ಟೆ ಯುವ ನಿರ್ದೇಶಕ ಸಂತೋಶ್ ಕೋವಿಡ್ನಿಂದ ಸಾವನ್ನಪ್ಪಿದ್ದರು.
This News Article Is A Copy Of FILMIBEAT
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm