ಬ್ರೇಕಿಂಗ್ ನ್ಯೂಸ್
06-05-21 11:43 am Source: FILMIBEAT Shruthi Gk ಸಿನಿಮಾ
ಕನ್ನಡದ ಹಲವು ಸಿನಿಮಾ ಸೆಲೆಬ್ರಿಟಿಗಳು ಇತ್ತೀಚಿನ ದಿನಗಳಲ್ಲಿ ಕೊರೊನಾ ಕಾರಣಕ್ಕೆ ನಿಧನ ಹೊಂದಿದ್ದಾರೆ. ಆ ಸಾಲಿಗೆ ಇಂದು ಮತ್ತೊಂದು ಸೇರ್ಪಡೆಯಾಗಿದೆ. ಕನ್ನಡಕ್ಕೆ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದ ಖ್ಯಾತ ನಿರ್ದೇಶಕ ರೇಣುಕಾ ಶರ್ಮಾ ಅವರು ಕೊರೊನಾದಿಂದಾಗಿ ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.
'ಕವಿರತ್ನ ಕಾಳಿದಾಸ', 'ಅಂಜದ ಗಂಡು', 'ಕಿಂದರ ಜೋಗಿ' ಸೇರಿದಂತೆ ಹಲವು ಸಿನಿಮಾಗಳನ್ನು ರೇಣುಕಾ ಶರ್ಮಾ ನಿರ್ದೇಶನ ಮಾಡಿದ್ದರು.
ಎರಡು ದಿನಗಳ ಹಿಂದಷ್ಟೆ ರೇಣುಕಾ ಶರ್ಮಾ ಅವರನ್ನು ಕೊರೊನಾ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರೇಣುಕಾ ಶರ್ಮಾ ನಿಧನ ಹೊಂದಿದ್ದಾರೆ. ಮೈಸೂರಿನ ಟಿ.ನರಸೀಪುರದವರಾದ ರೇಣುಕಾ ಶರ್ಮಾ ಅವರು 1960 ರಲ್ಲಿ ಚಿತ್ರರಂಗ ಪ್ರವೇಶಿಸಿದವರು.
ಸಿನಿಮಾ ನಟ ಆಗಲೇಬೇಕೆಂಬ ಕನಸು ಹೊತ್ತು ಮದ್ರಾಸಿಗೆ ಹೋಗಿ ಮೊದಲ ಬಾರಿಗೆ 'ಸರ್ವಜ್ಞ ಮೂರ್ತಿ' ಸಿನಿಮಾಕ್ಕೆ ಸಹಾಯಕನಾಗಿ ಕೆಲಸ ಮಾಡಿ ಅಲ್ಲಿಂದ ಸಿನಿಮಾ ಪಯಣ ಆರಂಭಿಸಿದರು. 20 ವರ್ಷಗಳ ಬಳಿಕ 1980 ರಲ್ಲಿ ಮೊದಲ ಬಾರಿಗೆ ಸ್ವಂತವಾಗಿ ನಿರ್ದೇಶನ ಮಾಡಿದರು.
ರೇಣುಕಾ ಶರ್ಮಾ ಮೊದಲ ಸಿನಿಮಾ 'ಅನುಪಮಾ'. ತೆಲುಗು, ತಮಿಳಿನಲ್ಲಿಯೂ ಕೆಲಸ ಮಾಡಿರುವ ರೇಣುಕಾ ಶರ್ಮಾ ಜಯಲಲಿತಾ, ಎಎನ್ಆರ್ ಅವರ ಸಿನಿಮಾಗಳಿಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಚಂದನವನದ ಹಲವು ಮಂದಿ ಸೆಲೆಬ್ರಿಟಿಗಳು ಕೆಲವೇ ದಿನಗಳಲ್ಲಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಚಂದನವನದ ಯುವ ನಿರ್ಮಾಪಕ ರಾಜಶೇಖರ್, ಖ್ಯಾತ ನಿರ್ಮಾಪಕ ರಾಮು, ನಿರ್ಮಾಪಕ ಚಂದ್ರಶೇಖರ್, ಮೇಕಪ್ಮ್ಯಾನ್ ಸೀನ, ಪುಟ್ಟಣ ಕಣಗಾಲ್ ಪುತ್ರ, ಡಿಸೈನರ್ ಮಸ್ತಾನ್ ಇವರೆಲ್ಲರುಗಳು ಕೆಲವೇ ದಿನಗಳ ಅಂತರದಲ್ಲಿ ಕೊರೊನಾಕ್ಕೆ ಬಲಿ ಆಗಿದ್ದಾರೆ. ನಿನ್ನೆಯಷ್ಟೆ ಯುವ ನಿರ್ದೇಶಕ ಸಂತೋಶ್ ಕೋವಿಡ್ನಿಂದ ಸಾವನ್ನಪ್ಪಿದ್ದರು.
This News Article Is A Copy Of FILMIBEAT
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm