ಬ್ರೇಕಿಂಗ್ ನ್ಯೂಸ್
21-05-21 05:27 pm Filmbeat : Bharath Kumar K ಸಿನಿಮಾ
ದಕ್ಷಿಣ ಚಿತ್ರರಂಗದಲ್ಲಿ ತಮ್ಮ ವಿಶಿಷ್ಠ ಮತ್ತು ವಿಭಿನ್ನ ಅಭಿನಯದ ಮೂಲಕ ಖ್ಯಾತಿ ಗಳಿಸಿಕೊಂಡಿದ್ದ ಪೊನ್ನಂಬಲಂ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಿಡ್ನಿ ವೈಫಲ್ಯವಾಗಿದ್ದು, ತೀವ್ರವಾಗಿ ನೊಂದಿದ್ದರು. ಚಿಕಿತ್ಸೆಗಾಗಿ ಆರ್ಥಿಕ ಸಹಾಯ ಬೇಕಿದೆ ಎಂದು ಆಸ್ಪತ್ರೆಯ ಬೆಡ್ನಿಂದಲೇ ವಿಡಿಯೋ ಮಾಡಿ ವಿನಂತಿಸಿದ್ದರು.
ಇದೀಗ, ಪೊನ್ನಂಬಲಂ ಕಿಡ್ನಿ ಆಪರೇಷನ್ಗೆ ಮೆಗಾಸ್ಟಾರ್ ಚಿರಂಜೀವಿ ನೆರವು ನೀಡಿರುವುದು ತಿಳಿದು ಬಂದಿದೆ. ಸ್ವತಃ ಪೊನ್ನಂಬಲಂ ಅವರೇ ಮೆಗಾಸ್ಟಾರ್ ಸಹಾಯವನ್ನು ನೆನೆದು ಧನ್ಯವಾದ ತಿಳಿಸಿದ್ದಾರೆ. ವಿಡಿಯೋ ಮಾಡುವ ಮೂಲಕ ಚಿರಂಜೀವಿ ಧನಸಹಾಯ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.
2 ಲಕ್ಷ ನೆರವು ನೀಡಿದ ಚಿರಂಜೀವಿ
ನಟ ಪೊನ್ನಂಬಲಂ ಕಿಡ್ನಿ ಆಪರೇಷನ್ಗೆ ಮೆಗಾಸ್ಟಾರ್ ಚಿರಂಜೀವಿ ಎರಡು ಲಕ್ಷ ಧನ ಸಹಾಯ ಮಾಡಿದ್ದಾರೆ. ವಿಡಿಯೋ ಮೂಲಕ ಧನ್ಯವಾದ ತಿಳಿಸಿರುವ ಪೊನ್ನಂಬಲಂ ''ಚಿರಂಜೀವಿ ಅಣ್ಣನಿಗೆ ನಮಸ್ತೆ, ನನ್ನ ಕಿಡ್ನಿ ಆಪರೇಷನ್ಗಾಗಿ ನೀವು ಕೊಟ್ಟ 2 ಲಕ್ಷದಿಂದ ಬಹಳ ದೊಡ್ಡ ಸಹಾಯವಾಗಿದೆ. ಜೀವನಪೂರ್ತಿ ಈ ಸಹಾಯವನ್ನು ನಾನು ಮರೆಯಲ್ಲ. ಆ ದೇವರು ನಿಮಗೆ ಸದಾ ಒಳ್ಳೆಯದು ಮಾಡಲಿ'' ಎಂದು ವಿನಂತಿಸಿದ್ದಾರೆ.
ರಜನಿಕಾಂತ್, ಕಮಲ್ ಹಾಸನ್ ನೆರವು
ಈ ಹಿಂದೆ ಪೊನ್ನಂಬಲಂ ಅನಾರೋಗ್ಯ ವಿಚಾರ ತಿಳಿದಾಗ ಸೂಪರ್ ಸ್ಟಾರ್ ರಜನಿಕಾಂತ್ ಅಭಯಹಸ್ತ ಚಾಚಿದ್ದರು. ಪೊನ್ನಂಬಲಂ ಆರೋಗ್ಯ ವಿಚಾರಿಸಿದ್ದ ತಲೈವಾ, ಆರ್ಥಿಕವಾಗಿ ಸಹಾಯ ಮಾಡಿದ್ದರು. ಕಮಲ್ ಹಾಸನ್ ಪೊನ್ನಂಬಲಂ ಮಕ್ಕಳಿಗೆ ಶಿಕ್ಷಣ ಕೊಡಿಸುವ ಭರವಸೆ ಕೊಟ್ಟಿದ್ದರು. ರಜನಿ-ಕಮಲ್ ಮಾತ್ರವಲ್ಲ ತಮಿಳು ಇಂಡಸ್ಟ್ರಿಯ ಅನೇಕರು ಪೊನ್ನಂಬಲಂಗೆ ನೆರವು ನೀಡಿದ್ದರು.
ಮೆಗಾಸ್ಟಾರ್ ಜೊತೆ ಹೆಚ್ಚು ಸಿನಿಮಾ
ಸ್ಟಂಟ್ ಮ್ಯಾನ್ ಸಿನಿ ಜರ್ನಿ ಆರಂಭಿಸಿದ್ದ ಪೊನ್ನಂಬಲಂ ತಮಿಳಿನಲ್ಲಿ ಹೆಚ್ಚು ಸಿನಿಮಾ ಮಾಡಿದ್ದಾರೆ. 'ಘರಾನ ಮೊಗಡು' ಚಿತ್ರದ ಮೂಲಕ ತೆಲುಗು ಇಂಡಸ್ಟ್ರಿ ಪ್ರವೇಶಿಸಿದ ಪೊನ್ನಂಬಲಂ, ಅಲ್ಲರಿ ಪ್ರಿಯಡು, ಮೆಕಾನಿಕ್ ಅಲ್ಲುಡು, ಮುಗ್ಗರು ಮೊನಗಾಳ್ಳು, ಹಿಟ್ಲರ್, ಪವಿತ್ರ ಪ್ರೇಮ, ನುವ್ವು ವಸ್ತಾವನಿ, ಎದುರುಲೇನಿ ಮುನುಷಿ, ಚೆನ್ನಕೇಶವ ರೆಡ್ಡಿ, ಗುಡುಂಬಾ ಶಂಕರ್, ಅನ್ನಾವರಂ ಸೇರಿದಂತೆ ಅನೇಕ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ.
ಕನ್ನಡದಲ್ಲೂ ನಟಿಸಿದ್ದಾರೆ ಪೊನ್ನಂಬಲಂ
ತಮಿಳು, ತೆಲುಗು ಜೊತೆ ಕನ್ನಡದಲ್ಲೂ ಪೊನ್ನಂಬಲಂ ನಟಿಸಿದ್ದಾರೆ. ರವಿಚಂದ್ರನ್ ಅಭಿನಯದ ಚಿನ್ನ, ಲೇಡಿ ಕಮಿಷನರ್, ಕಿಚ್ಚ, ಗುನ್ನಾ, ಮಸ್ತಿ, ಪೊಲೀಸ್ ಸ್ಟೋರಿ 2, ಚೆನ್ನ ಅಂತಹ ಸಿನಿಮಾಗಳಲ್ಲಿ ನಟಿಸಿದ್ದಾರೆ.
(Kannada Copy of Film Beat Kannada)
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 03:01 pm
Mangalore Correspondent
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm