ಬ್ರೇಕಿಂಗ್ ನ್ಯೂಸ್
31-05-21 02:05 pm Filmbeat : Manjunath C ಸಿನಿಮಾ
ಕನ್ನಡತಿ, ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಗುಟ್ಟಾಗಿ ವಿವಾಹವಾಗಿದ್ದಾರೆ. ಪ್ರಣಿತಾ ವಿವಾಹದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಟಿ ಪ್ರಣಿತಾ ಸುಭಾಷ್ ಇತ್ತೀಚೆಗಷ್ಟೆ ಕನಕಪುರ ರಸ್ತೆಯ ರೆಸಾರ್ಟ್ ಒಂದರಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉದ್ಯಮಿಯೊಬ್ಬರೊಂದಿಗೆ ವಿವಾಹವಾಗಿದ್ದಾರೆ.
ಪ್ರಣಿತಾ ಮದುವೆಯಾಗಿರುವ ವ್ಯಕ್ತಿಯ ಹೆಸರು ನಿತಿನ್ ರಾಜು ಎನ್ನಲಾಗಿದ್ದು, ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್ ಹೊಂದಿದ್ದು ಇತರೆ ಬ್ಯುಸಿನೆಸ್ಗಳನ್ನು ಸಹ ಅವರು ಹೊಂದಿದ್ದಾರೆ. ಕೆಲವು ದಿನಗಳ ಹಿಂದೆಯೇ ಪ್ರಣಿತಾ ಮದುವೆ ಸುದ್ದಿ ವೈರಲ್ ಆಗಿತ್ತು, ಆಗ ತಮ್ಮನ್ನು ಸಂಪರ್ಕಿಸಿದ್ದ ಮಾಧ್ಯಮದವರಿಗೆ 'ನಾನು ಮದುವೆ ಆಗಿಲ್ಲ. ಹಾಗೇನಾದರೂ ಮದುವೆ ಆದರೆ ಖಂಡಿತ ಎಲ್ಲರಿಗೂ ತಿಳಿಸಿಯೇ ಆಗುತ್ತೇನೆ' ಎಂದಿದ್ದರು. ಆದರೆ ಈಗ ಪ್ರಣಿತಾ ಮದುವೆ ಆಗಿರುವುದು ಖಾತ್ರಿಯಾಗಿದೆ. ಈ ಬಗ್ಗೆ ಪ್ರಣಿತಾ ಸಹ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ತಮ್ಮ ಮದುವೆ ವಿಷಯವನ್ನು ಬಹಳ ಗುಟ್ಟಾಗಿ ಇಡಬೇಕೆಂದು ಪ್ರಣಿತಾ ಯತ್ನಿಸಿದ್ದರು. ಆದರೆ ಮದುವೆಗೆ ಹಾಜರಾಗಿದ್ದ ಕುಟುಂಬ ಸದಸ್ಯರೊಬ್ಬರು ಮದುವೆಯ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆ ಮೂಲಕ ಗುಟ್ಟು ಬಹಿರಂಗವಾಗಿದೆ. ಕನ್ನಡದ 'ಪೊರ್ಕಿ' ಸಿನಿಮಾದಿಂದ ನಟನೆ ಆರಂಭಿಸಿದ ಪ್ರಣಿತಾ ಸುಭಾಷ್ ಕನ್ನಡ, ತೆಲುಗು, ತಮಿಳು ಈಗ ಹಿಂದಿ ಸಿನಿಮಾಗಳಲ್ಲಿ ಸಹ ನಟಿಸುತ್ತಿದ್ದಾರೆ. ಅಜಯ್ ದೇವಗನ್ ನಟನೆಯ ಭುಜ್ ಹಾಗೂ ಪರೇಶ್ ರಾವಲ್, ಶಿಲ್ಪಾ ಶೆಟ್ಟಿ ನಟನೆ 'ಹಂಗಾಮಾ 2' ಸಿನಿಮಾದಲ್ಲಿ ಪ್ರಣಿತಾ ನಟಿಸಿದ್ದಾರೆ.
(Kannada Copy of Film beat Kannada)
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm