ಬ್ರೇಕಿಂಗ್ ನ್ಯೂಸ್
09-06-21 11:16 am Shruthi, Filmbeat ಸಿನಿಮಾ
ಮರಾಠಿಯ ಖ್ಯಾತ ಸಿನಿಮಾ ನಿರ್ಮಾಪಕಿ ಸ್ವಪ್ನಾ ಪಾಟ್ಕರ್ ನಕಲಿ ಪಿಎಚ್.ಡಿ ಪದವಿ ಪಡೆದ ಆರೋಪದಲ್ಲಿ ಜೈಲು ಸೇರಿದ್ದಾರೆ. ಕ್ಲಿನಿಕಲ್ ಸೈಕೋಲಾಜಿಯಲ್ಲಿ ನಕಲಿ ಪಿಎಚ್.ಡಿ ಪದವಿ ಪಡೆದು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನುವ ಆರೋಪದ ಮೇಲೆ ಸ್ವಪ್ನ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
39 ವರ್ಷದ ನಿರ್ಮಾಪಕಿ ಸ್ವಪ್ನಾ 2015ರಲ್ಲಿ ಮರಾಠಿಯಲ್ಲಿ ಬಿಡುಗಡೆಯಾಗಿದ್ದ ಶಿವಸೇನೆ ಸಂಸ್ಥಾಪಕ ಬಾಲ್ ಠಾಕ್ರೆ ಅವರ ಬಯೋಪಿಕ್ ಬಾಲ್ಕಡು ಸಿನಿಮಾ ಮಾಡಿ ಹೆಚ್ಚು ಖ್ಯಾತಿಗಳಿಸಿದ್ದರು.
ಮೇ 26ರಂದು ಮುಂಬೈನ ಬಾಂದ್ರಾ ಪೊಲೀಸರು ಠಾಣೆಯಲ್ಲಿ FIR ದಾಖಲಾದ ಬಳಿಕ ಸ್ವಪ್ನಾರನ್ನು ಬಂಧಿಸಲಾಗಿದೆ. 2016ರಲ್ಲಿ ಬಾಂದ್ರಾದಲ್ಲಿರುವ ಪ್ರಮುಖ ಆಸ್ಪತ್ರೆಯಲ್ಲಿ ಕ್ಲಿನಿಕಲ್ ಸೈಕೋಲಾಜಿ ಮಾಡುತ್ತಿರುವುದಾಗಿ ಸ್ವಪ್ನಾ ಹೇಳಿದ್ದರು.
ಸಮಾಜ ಸೇವಕ ಗುರ್ದೀಪ್ ಸಿಂಗ್ ಮೇ 26ರಂದು ಸ್ವಪ್ನಾ ವಿರುದ್ಧ ಬಾಂದ್ರಾ ಪೊಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಿಸಿದ್ದರು. ಅನಾಮದೇಯ ವ್ಯಕ್ತಿಯಿಂದ ಈ ಬಗ್ಗೆ ದಾಖಲೆ ಪಡೆದ ನಂತರ ಗುರ್ದೀಪ್ ದೂರು ನೀಡಿದ್ದರು. ದೂರಿನಲ್ಲಿ ನಿರ್ಮಾಪಕಿ ಸ್ವಪ್ನಾ ಛತ್ರಪತಿ ಶಾಹುಜಿ ಮಹಾರಾಜ್ ವಿಶ್ವವಿದ್ಯಾಲಯವು ಸ್ವಪ್ನಾ ಪಾಟ್ಕರ್ ಗೆ ನೀಡಿದ ಪಿಎಚ್.ಡಿ ಪ್ರಮಾಣ ಪತ್ರ ನಕಲಿ ಎಂದು ಹೇಳಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಅಧಿಕಾರಿ, ನಕಲಿ ಪದವಿಯನ್ನು ಬಳಿಸಿ, ಸ್ವಪ್ನಾ ಆಸ್ಪತ್ರೆಯಲ್ಲಿ ಕೆಲಸ ಪಡೆಯಲು ಯಶಸ್ವಿಯಾಗಿದ್ದು, ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ಜನರಿಗೆ ಚಿಕಿತ್ಸೆ ನೀಡುತ್ತಿದ್ದರು ಎಂದು ಹೇಳಿದ್ದಾರೆ.
(Kannada Copy of Filmbeat Kannada)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am