ಬ್ರೇಕಿಂಗ್ ನ್ಯೂಸ್
09-06-21 04:25 pm Filmbeat : Bharath Kumar K ಸಿನಿಮಾ
ಕೋವಿಡ್ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸೆಲೆಬ್ರಿಟಿಗಳು ಹಲವು ರೀತಿಯಲ್ಲಿ ಸಹಾಯ ಹಸ್ತ ಚಾಚಿದ್ದಾರೆ. ದಿನಸಿ ಕಿಟ್, ಆಕ್ಸಿಜನ್, ವೆಂಟಿಲೇಟರ್, ಆಂಬುಲೆನ್ಸ್ ಹೀಗೆ ಅನೇಕ ರೀತಿಯಲ್ಲಿ ನೆರವು ನೀಡಿದ್ದಾರೆ.
ಇದೀಗ, ಚೆಸ್ ಆಟಕ್ಕೆ ಸಂಬಂಧಿಸಿದ ಸಮುದಾಯಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಚೆಸ್.ಕಾಮ್ ಸಂಸ್ಥೆ 'ಚೆಕ್ಮೆಟ್ ಕೋವಿಡ್' ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದು, ಇದರಲ್ಲಿ ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ ಎಂಬ ವಿಚಾರ ತಿಳಿದಿದೆ.
ಜೂನ್ 13 ರಂದು ಆ ಕಾಂಪಿಟೇಶನ್ ನಡೆಯಲಿದ್ದು, ಐದು ಬಾರಿ ವಿಶ್ವ ಚಾಂಪಿಯನ್ ಆಗಿದ್ದ ಭಾರತ ಚೆಸ್ ಮಾಸ್ಟರ್ ವಿಶ್ವನಾಥ್ ಆನಂದ್ ಎದುರು ಸೆಲೆಬ್ರಿಟಿಗಳು ಚೆಸ್ ಆಡಲಿದ್ದಾರೆ.

ಚೆಸ್.ಕಾಮ್ ವಿಶ್ವನಾಥ್ ಆನಂದ್ ಎದುರು ಆಡಲಿರುವ ಮೊದಲ ಸೆಲೆಬ್ರಿಟಿ ಹೆಸರು ಬಹಿರಂಗಗೊಂಡಿದೆ. ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಚೆಸ್ ಮಾಸ್ಟರ್ ವಿ ಆನಂದ್ ಜೊತೆ ಪ್ರದರ್ಶಕ ಪಂದ್ಯವನ್ನಾಡಲಿದ್ದಾರೆ ಎಂದು ಪ್ರಕಟಿಸಿದೆ. ಅಂದ್ಹಾಗೆ, ಈ ಹಿಂದೆಯೇ ವಿಶ್ವನಾಥ್ ಆನಂದ್ ಜೊತೆ ಅಮೀರ್ ಖಾನ್ ಚೆಸ್ ಆಡಿದ್ದಾರೆ. ಚೆಸ್ ಆಟದಲ್ಲಿ ಅಮೀರ್ ಖಾನ್ ಹೆಚ್ಚು ಆಸಕ್ತಿ ಹೊಂದಿದ್ದು, ಚಿತ್ರೀಕರಣದ ಬಿಡುವಿನ ಸಮಯದಲ್ಲೂ ಅಮೀರ್ ಚೆಸ್ ಆಡ್ತಾರೆ ಎಂದು ಸಹಕಲಾವಿದರು ಹೇಳಿಕೊಂಡಿದ್ದಾರೆ.



ಅಮೀರ್ ಖಾನ್ ಮತ್ತು ವಿಶ್ವನಾಥ್ ಅನಂದ್ ಪಂದ್ಯವನ್ನು ಹಿಂದಿ ಚಿತ್ರರಂಗದ ಮತ್ತೊಬ್ಬ ಖ್ಯಾತ ನಟ ಹೃತಿಕ್ ರೋಷನ್ ಪ್ರಚಾರ ಮಾಡುವುದರ ಮೂಲಕ ಚೆಸ್.ಕಾಮ್ ಪ್ರಯತ್ನಕ್ಕೆ ಬೆಂಬಲ ಸೂಚಿಸಿದ್ದಾರೆ.
ಜೂನ್ 13 ರಂದು ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಸೆಲೆಬ್ರಿಟಿ ಎಡಿಷನ್ ನಡೆಯಲಿದ್ದು, ಆ ಪಂದ್ಯಗಳ ನೇರ ಪ್ರಸಾರ ಚೆಸ್.ಕಾಮ್ ಯೂಟ್ಯೂಬ್ ಚಾನಲ್ನಲ್ಲಿ ಪ್ರಸಾರವಾಗಲಿದೆ.
(Kannada Copy of Filmbeat Kannada)
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm