ಬ್ರೇಕಿಂಗ್ ನ್ಯೂಸ್
09-06-21 04:25 pm Filmbeat : Bharath Kumar K ಸಿನಿಮಾ
ಕೋವಿಡ್ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸೆಲೆಬ್ರಿಟಿಗಳು ಹಲವು ರೀತಿಯಲ್ಲಿ ಸಹಾಯ ಹಸ್ತ ಚಾಚಿದ್ದಾರೆ. ದಿನಸಿ ಕಿಟ್, ಆಕ್ಸಿಜನ್, ವೆಂಟಿಲೇಟರ್, ಆಂಬುಲೆನ್ಸ್ ಹೀಗೆ ಅನೇಕ ರೀತಿಯಲ್ಲಿ ನೆರವು ನೀಡಿದ್ದಾರೆ.
ಇದೀಗ, ಚೆಸ್ ಆಟಕ್ಕೆ ಸಂಬಂಧಿಸಿದ ಸಮುದಾಯಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಚೆಸ್.ಕಾಮ್ ಸಂಸ್ಥೆ 'ಚೆಕ್ಮೆಟ್ ಕೋವಿಡ್' ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದು, ಇದರಲ್ಲಿ ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ ಎಂಬ ವಿಚಾರ ತಿಳಿದಿದೆ.
ಜೂನ್ 13 ರಂದು ಆ ಕಾಂಪಿಟೇಶನ್ ನಡೆಯಲಿದ್ದು, ಐದು ಬಾರಿ ವಿಶ್ವ ಚಾಂಪಿಯನ್ ಆಗಿದ್ದ ಭಾರತ ಚೆಸ್ ಮಾಸ್ಟರ್ ವಿಶ್ವನಾಥ್ ಆನಂದ್ ಎದುರು ಸೆಲೆಬ್ರಿಟಿಗಳು ಚೆಸ್ ಆಡಲಿದ್ದಾರೆ.

ಚೆಸ್.ಕಾಮ್ ವಿಶ್ವನಾಥ್ ಆನಂದ್ ಎದುರು ಆಡಲಿರುವ ಮೊದಲ ಸೆಲೆಬ್ರಿಟಿ ಹೆಸರು ಬಹಿರಂಗಗೊಂಡಿದೆ. ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಚೆಸ್ ಮಾಸ್ಟರ್ ವಿ ಆನಂದ್ ಜೊತೆ ಪ್ರದರ್ಶಕ ಪಂದ್ಯವನ್ನಾಡಲಿದ್ದಾರೆ ಎಂದು ಪ್ರಕಟಿಸಿದೆ. ಅಂದ್ಹಾಗೆ, ಈ ಹಿಂದೆಯೇ ವಿಶ್ವನಾಥ್ ಆನಂದ್ ಜೊತೆ ಅಮೀರ್ ಖಾನ್ ಚೆಸ್ ಆಡಿದ್ದಾರೆ. ಚೆಸ್ ಆಟದಲ್ಲಿ ಅಮೀರ್ ಖಾನ್ ಹೆಚ್ಚು ಆಸಕ್ತಿ ಹೊಂದಿದ್ದು, ಚಿತ್ರೀಕರಣದ ಬಿಡುವಿನ ಸಮಯದಲ್ಲೂ ಅಮೀರ್ ಚೆಸ್ ಆಡ್ತಾರೆ ಎಂದು ಸಹಕಲಾವಿದರು ಹೇಳಿಕೊಂಡಿದ್ದಾರೆ.



ಅಮೀರ್ ಖಾನ್ ಮತ್ತು ವಿಶ್ವನಾಥ್ ಅನಂದ್ ಪಂದ್ಯವನ್ನು ಹಿಂದಿ ಚಿತ್ರರಂಗದ ಮತ್ತೊಬ್ಬ ಖ್ಯಾತ ನಟ ಹೃತಿಕ್ ರೋಷನ್ ಪ್ರಚಾರ ಮಾಡುವುದರ ಮೂಲಕ ಚೆಸ್.ಕಾಮ್ ಪ್ರಯತ್ನಕ್ಕೆ ಬೆಂಬಲ ಸೂಚಿಸಿದ್ದಾರೆ.
ಜೂನ್ 13 ರಂದು ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಸೆಲೆಬ್ರಿಟಿ ಎಡಿಷನ್ ನಡೆಯಲಿದ್ದು, ಆ ಪಂದ್ಯಗಳ ನೇರ ಪ್ರಸಾರ ಚೆಸ್.ಕಾಮ್ ಯೂಟ್ಯೂಬ್ ಚಾನಲ್ನಲ್ಲಿ ಪ್ರಸಾರವಾಗಲಿದೆ.
(Kannada Copy of Filmbeat Kannada)
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm