ಬ್ರೇಕಿಂಗ್ ನ್ಯೂಸ್
09-06-21 04:25 pm Filmbeat : Bharath Kumar K ಸಿನಿಮಾ
ಕೋವಿಡ್ ಎರಡನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸೆಲೆಬ್ರಿಟಿಗಳು ಹಲವು ರೀತಿಯಲ್ಲಿ ಸಹಾಯ ಹಸ್ತ ಚಾಚಿದ್ದಾರೆ. ದಿನಸಿ ಕಿಟ್, ಆಕ್ಸಿಜನ್, ವೆಂಟಿಲೇಟರ್, ಆಂಬುಲೆನ್ಸ್ ಹೀಗೆ ಅನೇಕ ರೀತಿಯಲ್ಲಿ ನೆರವು ನೀಡಿದ್ದಾರೆ.
ಇದೀಗ, ಚೆಸ್ ಆಟಕ್ಕೆ ಸಂಬಂಧಿಸಿದ ಸಮುದಾಯಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಚೆಸ್.ಕಾಮ್ ಸಂಸ್ಥೆ 'ಚೆಕ್ಮೆಟ್ ಕೋವಿಡ್' ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದು, ಇದರಲ್ಲಿ ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ ಎಂಬ ವಿಚಾರ ತಿಳಿದಿದೆ.
ಜೂನ್ 13 ರಂದು ಆ ಕಾಂಪಿಟೇಶನ್ ನಡೆಯಲಿದ್ದು, ಐದು ಬಾರಿ ವಿಶ್ವ ಚಾಂಪಿಯನ್ ಆಗಿದ್ದ ಭಾರತ ಚೆಸ್ ಮಾಸ್ಟರ್ ವಿಶ್ವನಾಥ್ ಆನಂದ್ ಎದುರು ಸೆಲೆಬ್ರಿಟಿಗಳು ಚೆಸ್ ಆಡಲಿದ್ದಾರೆ.

ಚೆಸ್.ಕಾಮ್ ವಿಶ್ವನಾಥ್ ಆನಂದ್ ಎದುರು ಆಡಲಿರುವ ಮೊದಲ ಸೆಲೆಬ್ರಿಟಿ ಹೆಸರು ಬಹಿರಂಗಗೊಂಡಿದೆ. ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ ಚೆಸ್ ಮಾಸ್ಟರ್ ವಿ ಆನಂದ್ ಜೊತೆ ಪ್ರದರ್ಶಕ ಪಂದ್ಯವನ್ನಾಡಲಿದ್ದಾರೆ ಎಂದು ಪ್ರಕಟಿಸಿದೆ. ಅಂದ್ಹಾಗೆ, ಈ ಹಿಂದೆಯೇ ವಿಶ್ವನಾಥ್ ಆನಂದ್ ಜೊತೆ ಅಮೀರ್ ಖಾನ್ ಚೆಸ್ ಆಡಿದ್ದಾರೆ. ಚೆಸ್ ಆಟದಲ್ಲಿ ಅಮೀರ್ ಖಾನ್ ಹೆಚ್ಚು ಆಸಕ್ತಿ ಹೊಂದಿದ್ದು, ಚಿತ್ರೀಕರಣದ ಬಿಡುವಿನ ಸಮಯದಲ್ಲೂ ಅಮೀರ್ ಚೆಸ್ ಆಡ್ತಾರೆ ಎಂದು ಸಹಕಲಾವಿದರು ಹೇಳಿಕೊಂಡಿದ್ದಾರೆ.



ಅಮೀರ್ ಖಾನ್ ಮತ್ತು ವಿಶ್ವನಾಥ್ ಅನಂದ್ ಪಂದ್ಯವನ್ನು ಹಿಂದಿ ಚಿತ್ರರಂಗದ ಮತ್ತೊಬ್ಬ ಖ್ಯಾತ ನಟ ಹೃತಿಕ್ ರೋಷನ್ ಪ್ರಚಾರ ಮಾಡುವುದರ ಮೂಲಕ ಚೆಸ್.ಕಾಮ್ ಪ್ರಯತ್ನಕ್ಕೆ ಬೆಂಬಲ ಸೂಚಿಸಿದ್ದಾರೆ.
ಜೂನ್ 13 ರಂದು ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೂ ಸೆಲೆಬ್ರಿಟಿ ಎಡಿಷನ್ ನಡೆಯಲಿದ್ದು, ಆ ಪಂದ್ಯಗಳ ನೇರ ಪ್ರಸಾರ ಚೆಸ್.ಕಾಮ್ ಯೂಟ್ಯೂಬ್ ಚಾನಲ್ನಲ್ಲಿ ಪ್ರಸಾರವಾಗಲಿದೆ.
(Kannada Copy of Filmbeat Kannada)
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am