ಬ್ರೇಕಿಂಗ್ ನ್ಯೂಸ್
14-06-21 12:36 pm Filmbeat : Bharath Kumar K ಸಿನಿಮಾ
ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಭರಿಸುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಷಯ ತಿಳಿದು ಬಂದಿದೆ. ಇಂದು ಬೆಳಗ್ಗೆ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಭರಿಸುತ್ತದೆ ಎಂದು ಭರವಸೆ ನೀಡಿದರು.
ವಿಜಯ್ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.

ಶನಿವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಚಾರಿ ವಿಜಯ್, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ಗಂಭೀರವಾದ ಗಾಯಗಳಾಗಿದ್ದು, ಶನಿವಾರ ರಾತ್ರಿಯೇ ಶಸ್ತ್ರ ಚಿಕಿತ್ಸೆ ಆಗಿದೆ. ಸದ್ಯಕ್ಕೆ ವಿಜಯ್ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಬಂದಾಗಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಆಪರೇಷನ್ ಮುಗಿದ ಮೇಲೂ ಪ್ರಜ್ಞೆ ಬಂದಿಲ್ಲ. ಹಾಗಾಗಿ ಪ್ರಜ್ಞೆ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ ಅರುಣ್ ನಾಯಕ್ ಹೇಳಿದ್ದರು.
(Kannada Copy of Filmbeat Kannada)
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am