ಬ್ರೇಕಿಂಗ್ ನ್ಯೂಸ್
14-06-21 12:36 pm Filmbeat : Bharath Kumar K ಸಿನಿಮಾ
ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಉಪಮುಖ್ಯಮಂತ್ರಿ ಡಾ ಅಶ್ವಥ್ ನಾರಾಯಣ ಭರಿಸುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಷಯ ತಿಳಿದು ಬಂದಿದೆ. ಇಂದು ಬೆಳಗ್ಗೆ ಅಪೋಲೋ ಆಸ್ಪತ್ರೆಯ ಆಡಳಿತ ವರ್ಗದ ಮುಖ್ಯಸ್ಥರಿಗೆ ಖುದ್ದಾಗಿ ಕರೆ ಮಾಡಿ ವಿಜಯ್ ಅವರ ಯೋಗ-ಕ್ಷೇಮ ವಿಚಾರಿಸಿದ ಡಿಸಿಎಂ, ಅವರ ಚಿಕಿತ್ಸೆ ಆಗುವ ಸಂಪೂರ್ಣ ವೆಚ್ಚವನ್ನು ತಮ್ಮ ನೇತೃತ್ವದ ಡಾ. ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ಭರಿಸುತ್ತದೆ ಎಂದು ಭರವಸೆ ನೀಡಿದರು.
ವಿಜಯ್ ಅವರ ಚಿಕಿತ್ಸೆಗೆ ಸಂಬಂಧಿಸಿದಂತೆ ಅವರ ಸಂಬಂಧಿಗಳಿಂದಾಗಲೀ ಅಥವಾ ಬೇರೆ ಯಾರಿಂದಲೂ ಹಣ ಪಾವತಿಸಿಕೊಳ್ಳದಂತೆ ಅವರು ಆಸ್ಪತ್ರೆ ಆಡಳಿತ ವರ್ಗಕ್ಕೆ ಸೂಚಿಸಿದ್ದಾರೆ.

ಶನಿವಾರ ರಾತ್ರಿ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಸಂಚಾರಿ ವಿಜಯ್, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ಗಂಭೀರವಾದ ಗಾಯಗಳಾಗಿದ್ದು, ಶನಿವಾರ ರಾತ್ರಿಯೇ ಶಸ್ತ್ರ ಚಿಕಿತ್ಸೆ ಆಗಿದೆ. ಸದ್ಯಕ್ಕೆ ವಿಜಯ್ ಆರೋಗ್ಯ ಸ್ಥಿತಿ ಬಹಳ ಗಂಭೀರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಗೆ ಬಂದಾಗಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಆಪರೇಷನ್ ಮುಗಿದ ಮೇಲೂ ಪ್ರಜ್ಞೆ ಬಂದಿಲ್ಲ. ಹಾಗಾಗಿ ಪ್ರಜ್ಞೆ ಬರುವವರೆಗೂ ಏನು ಹೇಳಲು ಸಾಧ್ಯವಿಲ್ಲ ಎಂದು ಅಪೋಲೋ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ ಅರುಣ್ ನಾಯಕ್ ಹೇಳಿದ್ದರು.
(Kannada Copy of Filmbeat Kannada)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am