ಬ್ರೇಕಿಂಗ್ ನ್ಯೂಸ್
15-06-21 10:32 am Filmbeat : Bharath Kumar K ಸಿನಿಮಾ
ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್ ದೇಹದ ಅಂಗಾಂಗಗಳನ್ನು ದಾನ ಮಾಡಿರುವುದು ತಿಳಿರುವುದು ವಿಚಾರ. ಈಗಾಗಲೇ ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗಳ ದಾನ ಪ್ರಕ್ರಿಯೆ ಪೂರ್ಣಗೊಂಡಿದೆ.
ವೈದ್ಯರು ನೀಡಿರುವ ಮಾಹಿತಿ ಪ್ರಕಾರ ವಿಜಯ್ ದೇಹದಿಂದ ಎರಡು ಕಿಡ್ನಿ, ಎರಡು ಕಣ್ಣು, ಲಿವರ್, ಹಾಗೂ ಹೃದಯ ವ್ಯಾಲ್ಸ್ ಪಡೆಯಲಾಗಿದೆ ಎಂದು ಜೀವ ಸಾರ್ಥಕತೆ ತಂಡದ ನೌಷಾದ್ ಪಾಷ ಹೇಳಿದ್ದಾರೆ. ವಿಜಯ್ ಅವರಿಂದು ಒಟ್ಟು ಏಳು ಜನರಿಗೆ ಹೊಸ ಜೀವನ ಸಿಗಲಿದೆ ಎಂದು ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.
ಇಬ್ಬರಿಗೆ ತಲಾ ಒಂದೊಂದು ಕಣ್ಣು, ಇಬ್ಬರಿಗೆ ತಲಾ ಒಂದೊಂದು ಕಿಡ್ನಿ, ಲಿವರ್ ಒಬ್ಬರಿಗೆ ಹಾಗೂ ಹೃದಯ ವ್ಯಾಲ್ಸ್ ಇಬ್ಬರಿಗೆ ಹಾಕಬಹುದು ಎಂದು ಜೀವ ಸಾರ್ಥಕತೆ ತಂಡ ನೌಷಾದ್ ಪಾಷ ಮಾಧ್ಯಮಗಳಿಗೆ ತಿಳಿಸಿದರು.


ರಾತ್ರಿ 9 ಗಂಟೆಗೆಯಿಂದ ದೇಹದ ಅಂಗಾಗ ದಾನದ ಪ್ರಕ್ರಿಯೆ ನಡೆದಿದ್ದು, ಮುಂಜಾನೆ 3.34ಕ್ಕೆ ಪೂರ್ಣಗೊಂಡಿದೆ. ಈ ಮೊದಲೇ ಅಂಗಾಂಗ ಕಸಿಗೂ ತಯಾರಿ ನಡೆಸಿದ್ದು, ವಿಜಯ್ ದೇಹದಿಂದ ತೆಗೆಯಲಾದ ಅಂಗಾಂಗಳನ್ನು ಇತರೆ ರೋಗಿಗಳಿಗೆ ಹಾಕುವ ಪ್ರಕ್ರಿಯೆ ಸಹ ನಡೆದಿದೆ ಎಂದು ತಿಳಿದು ಬಂದಿದೆ.
ಅಪೋಲೋ ಆಸ್ಪತ್ರೆಯಲ್ಲಿಯೇ ಮರಣೋತ್ತರ ಪರೀಕ್ಷೆ ಮುಗಿದಿದ್ದು, ಬೆಳಗ್ಗೆ 8 ರಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಮಧ್ಯಾಹ್ನ 12 ಗಂಟೆ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬ ತೀರ್ಮಾನಿಸಿದೆ.
(Kannada Copy of Filmbeat Kannada)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am