ಬ್ರೇಕಿಂಗ್ ನ್ಯೂಸ್
29-06-21 05:36 pm Filmbeat : Bharath Kumar K ಸಿನಿಮಾ
ದಿವಂಗತ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ವಿಶೇಷವಾಗಿ ಗೌರವಿಸಿದೆ.
ಬೈಕ್ ಅಪಘಾತದಲ್ಲಿ ನಿಧನರಾಗಿದ್ದ ಕನ್ನಡ ಚಲನಚಿತ್ರ ನಟ ಸಂಚಾರಿ ವಿಜಯ್ ಸ್ಮರಣಾರ್ಥವಾಗಿ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ತನ್ನ ಥಿಯೇಟರ್ ಬೋರ್ಡ್ ಮೇಲೆ ವಿಜಯ್ ಕುರಿತಾದ ಸಂದೇಶವೊಂದನ್ನು ಪ್ರಕಟಿಸಿದೆ.
24 ಗಂಟೆಗಳ ಕಾಲ ಈ ಸಂದೇಶವನ್ನು ಥಿಯೇಟರ್ ಬೋರ್ಡ್ನಲ್ಲಿ ಪ್ರದರ್ಶಿಸಲಾಗಿದೆ. ಈ ಬಗ್ಗೆ 'ನಾನು ಅವನಲ್ಲ ಅವಳು' ಸಿನಿಮಾದ ನಿರ್ದೇಶಕ ಲಿಂಗದೇವರು ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

''ಅಮೇರಿಕಾದ ಫ್ರಾಂಕ್ಲಿನ್ ಥಿಯೇಟರ್ನವರು ವಿಜಯ್ ನೆನಪಲ್ಲಿ ಇಂದು 'Always in our Heart , Sanchari Vijay, Gone Yet Not Forgotten' ಎಂಬ ಮೆಸೇಜ್ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಕಾರಣಕರ್ತರಾದ ರವಿ ಕಶ್ಯಪ್ ರವರಿಗೆ ವಂದನೆಗಳು'' ಎಂದು ಲಿಂಗದೇವರು ಪೋಸ್ಟ್ ಹಾಕಿದ್ದಾರೆ. ಜೂನ್ 15 ರಂದು ಸಂಚಾರಿ ನಿಧನ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ವಿಜಯ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಮೆದುಳಿನ ಬಲ ಭಾಗ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾಗಿ ಕೊನೆಯುಸಿರೆಳೆದರು.
ಸಾವಿನ ಬಳಿಕವೂ ಸಾರ್ಥಕತೆ ಮೆರೆದ ನಟ ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡಿದರು. ಕಣ್ಣು, ಕಿಡ್ನಿ, ಲಿವರ್, ಹಾರ್ಟ್ ವ್ಯಾಲ್ಸ್ ದಾನ ಮಾಡುವ ಮೂಲಕ ಏಳು ಜನರ ಬದುಕಲ್ಲಿ ಬೆಳಕಾದರು.
ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಇದೇ ಸಿನಿಮಾಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಲಭಿಸಿತ್ತು.
Kannada Copy of Filmbeat Kannada)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am