ಬ್ರೇಕಿಂಗ್ ನ್ಯೂಸ್
29-06-21 05:36 pm Filmbeat : Bharath Kumar K ಸಿನಿಮಾ
ದಿವಂಗತ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ವಿಶೇಷವಾಗಿ ಗೌರವಿಸಿದೆ.
ಬೈಕ್ ಅಪಘಾತದಲ್ಲಿ ನಿಧನರಾಗಿದ್ದ ಕನ್ನಡ ಚಲನಚಿತ್ರ ನಟ ಸಂಚಾರಿ ವಿಜಯ್ ಸ್ಮರಣಾರ್ಥವಾಗಿ ಅಮೆರಿಕಾದ ಫ್ರಾಂಕ್ಲಿನ್ ಚಿತ್ರಮಂದಿರ ತನ್ನ ಥಿಯೇಟರ್ ಬೋರ್ಡ್ ಮೇಲೆ ವಿಜಯ್ ಕುರಿತಾದ ಸಂದೇಶವೊಂದನ್ನು ಪ್ರಕಟಿಸಿದೆ.
24 ಗಂಟೆಗಳ ಕಾಲ ಈ ಸಂದೇಶವನ್ನು ಥಿಯೇಟರ್ ಬೋರ್ಡ್ನಲ್ಲಿ ಪ್ರದರ್ಶಿಸಲಾಗಿದೆ. ಈ ಬಗ್ಗೆ 'ನಾನು ಅವನಲ್ಲ ಅವಳು' ಸಿನಿಮಾದ ನಿರ್ದೇಶಕ ಲಿಂಗದೇವರು ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

''ಅಮೇರಿಕಾದ ಫ್ರಾಂಕ್ಲಿನ್ ಥಿಯೇಟರ್ನವರು ವಿಜಯ್ ನೆನಪಲ್ಲಿ ಇಂದು 'Always in our Heart , Sanchari Vijay, Gone Yet Not Forgotten' ಎಂಬ ಮೆಸೇಜ್ ಪ್ರದರ್ಶನ ಮಾಡುವ ಮೂಲಕ ಗೌರವ ಸೂಚಿಸಿದ್ದಾರೆ. ಅಗಲಿದ ಕನ್ನಡದ ಕಲಾವಿದನನ್ನು ಗುರುತಿಸಿದ ಫ್ರಾಂಕ್ಲಿನ್ ಥಿಯೇಟರ್ ಮತ್ತು ಕಾರಣಕರ್ತರಾದ ರವಿ ಕಶ್ಯಪ್ ರವರಿಗೆ ವಂದನೆಗಳು'' ಎಂದು ಲಿಂಗದೇವರು ಪೋಸ್ಟ್ ಹಾಕಿದ್ದಾರೆ. ಜೂನ್ 15 ರಂದು ಸಂಚಾರಿ ನಿಧನ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ವಿಜಯ್ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಮೆದುಳಿನ ಬಲ ಭಾಗ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾಗಿ ಕೊನೆಯುಸಿರೆಳೆದರು.
ಸಾವಿನ ಬಳಿಕವೂ ಸಾರ್ಥಕತೆ ಮೆರೆದ ನಟ ತನ್ನ ದೇಹದ ಅಂಗಾಂಗಗಳನ್ನು ದಾನ ಮಾಡಿದರು. ಕಣ್ಣು, ಕಿಡ್ನಿ, ಲಿವರ್, ಹಾರ್ಟ್ ವ್ಯಾಲ್ಸ್ ದಾನ ಮಾಡುವ ಮೂಲಕ ಏಳು ಜನರ ಬದುಕಲ್ಲಿ ಬೆಳಕಾದರು.
ಸಂಚಾರಿ ವಿಜಯ್ 'ನಾನು ಅವನಲ್ಲ ಅವಳು' ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಇದೇ ಸಿನಿಮಾಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯೂ ಲಭಿಸಿತ್ತು.
Kannada Copy of Filmbeat Kannada)
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm