ಬ್ರೇಕಿಂಗ್ ನ್ಯೂಸ್
30-06-21 01:54 pm Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ನಸೀರುದ್ದೀನ್ ಶಾ ಅನಾರೋಗ್ಯದಿಂದ ದಿಢೀರ್ ಆಸ್ಪತ್ರೆ ದಾಖಲಾಗಿದ್ದಾರೆ. ಈ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹಿರಿಯ ನಟನಿಗೆ ನ್ಯುಮೋನಿಯಾ ಇದೆ ತಿಳಿದುಬಂದಿದೆ. ನಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.
"ಎರಡು ದಿನಗಳ ಹಿಂದೆಯೇ ನಸೀರುದ್ದೀನ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಮ್ಯಾನೇಜರ್ ಆಂಗ್ಲ ಪತ್ರಿಕೆಗಳಿಗೆ ಮಾಹಿತಿ ನೀಡಿದ್ದಾರೆ. "ನಸೀರುದ್ದೀನ್ ಶಾ ಅವರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಸೀರುದ್ದೀನ್ ಶಾ ಜೊತೆ ಪತ್ನಿ ರತ್ನ ಪಾಠಕ್ ಮತ್ತು ಅವರ ಮಕ್ಕಳು ಇದ್ದಾರೆ" ಎಂದು ಮ್ಯಾನೇಜರ್ ಹೇಳಿದ್ದಾರೆ.
ಕಳೆದ ವರ್ಷ ನಸೀರುದ್ದೀನ್ ಶಾ ಅನಾರೋಗ್ಯದ ಬಗ್ಗೆ ಸುದ್ದಿ ವೈರಲ್ ಆಗಿತ್ತು. ಬಳಿಕ ಅವರ ಪುತ್ರ ವಿವಾನ್ ಶಾ ಸುದ್ದಿ ತಳ್ಳಿ ಹಾಕಿದ್ದರು. "ಬಾಬಾ ಚೆನ್ನಾಗಿಟೇ ಇದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಎಲ್ಲಾ ವದಂತಿ ಸುಳ್ಳು. ಅವರು ಆರೋಗ್ಯವಾಗಿದ್ದಾರೆ" ಎಂದು ಪ್ರತಿಕ್ರಿಯೆ ನೀಡುವ ಮೂಲಕ ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ್ದರು.

ಭಾರತೀಯ ಸಿನಿಮಾರಂಗದ ಅತ್ಯಂತ ಪ್ರಸಿದ್ಧ ನಟರಲ್ಲಿ ನಸೀರುದ್ದೀನ್ ಶಾ ಕೂಡ ಒಬ್ಬರು. ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ ನೀಡಿ ಗೌರವಿಸಿದೆ. ನಸೀರುದ್ದೀನ್ ಶಾ ಕೊನೆಯದಾಗಿ ಕಳೆದ ವರ್ಷ ಬಿಡುಗಡೆಯಾದ ಬಂದಿಶ್ ಬ್ಯಾಂಡಿಟ್ಸ್ ಮತ್ತು ಮೀ ರಕ್ಸಮ್ ಮೂಲಕ ಒಟಿಟಿ ಪ್ರೇಕ್ಷಕರನ್ನು ರಂಜಿಸಿದ್ದರು.
ನಸೀರುದ್ದೀನ್ ಶಾ ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲೂ ನಟಿಸಿದ್ದಾರೆ. ವಿಶೇಷ ಎಂದರೆ ಕನ್ನಡದ ಒಂದು ಸಿನಿಮಾದಲ್ಲೂ ನಟಿಸಿದ್ದಾರೆ. ಗಿರೀಶ್ ಕಾಸರವಳ್ಳಿ ನಿರ್ದೇಶನದ 'ಮನೆ' ಸಿನಿಮಾದಲ್ಲಿ ನಟಿಸಿದ್ದಾರೆ.
(Kannada Copy of Filmbeat Kannada)
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am