ಬ್ರೇಕಿಂಗ್ ನ್ಯೂಸ್
30-06-21 01:54 pm Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ನಸೀರುದ್ದೀನ್ ಶಾ ಅನಾರೋಗ್ಯದಿಂದ ದಿಢೀರ್ ಆಸ್ಪತ್ರೆ ದಾಖಲಾಗಿದ್ದಾರೆ. ಈ ಸುದ್ದಿ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಹಿರಿಯ ನಟನಿಗೆ ನ್ಯುಮೋನಿಯಾ ಇದೆ ತಿಳಿದುಬಂದಿದೆ. ನಸಿರುದ್ಧೀನ್ ಶಾ ಆಸ್ಪತ್ರೆಗೆ ದಾಖಲಾದ ಮಾಹಿತಿಯನ್ನು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ.
"ಎರಡು ದಿನಗಳ ಹಿಂದೆಯೇ ನಸೀರುದ್ದೀನ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ" ಎಂದು ಮ್ಯಾನೇಜರ್ ಆಂಗ್ಲ ಪತ್ರಿಕೆಗಳಿಗೆ ಮಾಹಿತಿ ನೀಡಿದ್ದಾರೆ. "ನಸೀರುದ್ದೀನ್ ಶಾ ಅವರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ನಸೀರುದ್ದೀನ್ ಶಾ ಜೊತೆ ಪತ್ನಿ ರತ್ನ ಪಾಠಕ್ ಮತ್ತು ಅವರ ಮಕ್ಕಳು ಇದ್ದಾರೆ" ಎಂದು ಮ್ಯಾನೇಜರ್ ಹೇಳಿದ್ದಾರೆ.
ಕಳೆದ ವರ್ಷ ನಸೀರುದ್ದೀನ್ ಶಾ ಅನಾರೋಗ್ಯದ ಬಗ್ಗೆ ಸುದ್ದಿ ವೈರಲ್ ಆಗಿತ್ತು. ಬಳಿಕ ಅವರ ಪುತ್ರ ವಿವಾನ್ ಶಾ ಸುದ್ದಿ ತಳ್ಳಿ ಹಾಕಿದ್ದರು. "ಬಾಬಾ ಚೆನ್ನಾಗಿಟೇ ಇದ್ದಾರೆ. ಅವರ ಆರೋಗ್ಯದ ಬಗ್ಗೆ ಹರಿದಾಡುತ್ತಿರುವ ಎಲ್ಲಾ ವದಂತಿ ಸುಳ್ಳು. ಅವರು ಆರೋಗ್ಯವಾಗಿದ್ದಾರೆ" ಎಂದು ಪ್ರತಿಕ್ರಿಯೆ ನೀಡುವ ಮೂಲಕ ಸುಳ್ಳು ಸುದ್ದಿಗೆ ಬ್ರೇಕ್ ಹಾಕಿದ್ದರು.

ಭಾರತೀಯ ಸಿನಿಮಾರಂಗದ ಅತ್ಯಂತ ಪ್ರಸಿದ್ಧ ನಟರಲ್ಲಿ ನಸೀರುದ್ದೀನ್ ಶಾ ಕೂಡ ಒಬ್ಬರು. ಭಾರತ ಸರ್ಕಾರ ಅವರಿಗೆ ಪದ್ಮಶ್ರೀ ಮತ್ತು ಪದ್ಮ ಭೂಷಣ ನೀಡಿ ಗೌರವಿಸಿದೆ. ನಸೀರುದ್ದೀನ್ ಶಾ ಕೊನೆಯದಾಗಿ ಕಳೆದ ವರ್ಷ ಬಿಡುಗಡೆಯಾದ ಬಂದಿಶ್ ಬ್ಯಾಂಡಿಟ್ಸ್ ಮತ್ತು ಮೀ ರಕ್ಸಮ್ ಮೂಲಕ ಒಟಿಟಿ ಪ್ರೇಕ್ಷಕರನ್ನು ರಂಜಿಸಿದ್ದರು.
ನಸೀರುದ್ದೀನ್ ಶಾ ಹಿಂದಿ ಮಾತ್ರವಲ್ಲದೆ ದಕ್ಷಿಣ ಭಾರತೀಯ ಸಿನಿಮಾರಂಗದಲ್ಲೂ ನಟಿಸಿದ್ದಾರೆ. ವಿಶೇಷ ಎಂದರೆ ಕನ್ನಡದ ಒಂದು ಸಿನಿಮಾದಲ್ಲೂ ನಟಿಸಿದ್ದಾರೆ. ಗಿರೀಶ್ ಕಾಸರವಳ್ಳಿ ನಿರ್ದೇಶನದ 'ಮನೆ' ಸಿನಿಮಾದಲ್ಲಿ ನಟಿಸಿದ್ದಾರೆ.
(Kannada Copy of Filmbeat Kannada)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am