ಬ್ರೇಕಿಂಗ್ ನ್ಯೂಸ್
01-07-21 10:55 am Filmbeat ಸಿನಿಮಾ
ಬಾಲಿವುಡ್ ಖ್ಯಾತ ನಟಿ ಮಂದಿರ ಬೇಡಿ ಪತಿ ಹಾಗೂ ಚಲನಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ರಾಜ್ ಕೌಶಲ್ ಹಠಾತ್ ನಿಧನ ಇಡೀ ಬಾಲಿವುಡ್ ಗೆ ಶಾಕ್ ನೀಡಿದೆ. 49 ವರ್ಷದ ರಾಜ್ ಕೌಶಲ್ ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾದರು.
ರಾಜ್ ಕೌಶಲ್ ನಿಧನದ ಶಾಕ್ ನಲ್ಲೇ ಬಾಲಿವುಡ್ ನ ಅನೇಕ ಮಂದಿ ಟ್ವಿಟರ್ ಮೂಲಕ ಸಂತಾಪ ಸೂಚಿಸಿದರು. ಇನ್ನು ಕೆಲವರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಪತಿಯನ್ನು ಕಳೆದುಕೊಂಡು ಬಿಕ್ಕಿ ಬಿಕ್ಕಿ ಅಳುತ್ತಿದ್ದ ನಟಿ, ರಾಜ್ ಕೌಶಲ್ ಪತ್ನಿ ಮಂದಿರಾ ಬೇಡಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

ಪತಿಯ ಶವದ ಮುಂದೆ ಕಣ್ಣೀರಿಡುತ್ತಿದ್ದ ಮಂದಿರಾ ಬೇಡಿಯನ್ನು ನಟ ರೋಹಿತ್ ರಾಯ್ ಸಮಾಧಾನ ಪಡಿಸಿದರು. ರಾಜ್ ಕೌಶಲ್ ಅಂತ್ಯಕ್ರಿಯೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅತ್ಯಂತ ಸ್ಟ್ರಾಂಗ್ ಮತ್ತು ಬೋಲ್ಡ್ ನಟಿ ಮಂದಿರ ಬೇಡಿ ಸಂಪ್ರದಾಯ ಮೀರಿ ಪತಿಯ ಅಂತ್ಯಸಂಸ್ಕಾರ ಮಾಡಿದ್ದಾರೆ.
ಹಿಂದೂ ಸಂಪ್ರದಾಯದ ಪ್ರಕಾರ ಪುರುಷರು ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಮಾಡುತ್ತಾರೆ. ಶವದ ಮಂದೆ ಹೊತ್ತು ಸಾಗುವ ಮಡಿಕೆಯನ್ನು ಮಹಿಳೆಯರು ಸ್ಪರ್ಶಿಸುವುದಿಲ್ಲ. ಆದರೆ ಮಂದಿರಾ ಬೇಡಿ ಸಂಪ್ರದಾಯ ಮೀರಿ ತಾವೆ ಮಡಿಕೆ ಹೊತ್ತು ಸಾಗುವ ಮೂಲಕ ಪತಿಯ ಅಂತಿಮ ವಿಧಿವಿಧಾನಗಳನ್ನು ಮಾಡಿದ್ದಾರೆ. ಅಂತ್ಯಕ್ರಿಯೆ ವೇಳೆ ಬಾಲಿವುಡ್ ಗಣ್ಯರಾದ ಅನೀಶ್ ಚೌಧರಿ, ರೋಹಿತಿ ರಾಯ್, ಅಪೂರ್ವ ಅಗ್ನಿಹೋತ್ರ, ಹುಮಾ ಖುರೇಷಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಎಲ್ಲರೂ ಮಂದಿರ ಬೇಡಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.

1999ರಲ್ಲಿ ಮಂದಿರಾ ಬೇಡಿ, ರಾಜ್ ಕೌಶಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮಂದಿರ 2011ರಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದರು. ನಂತರ ಎರಡನೇ ಮಗುವನ್ನು ದತ್ತು ಪಡೆದರು.
ರಾಜ್ ಕೌಶಲ್ 90 ಮತ್ತು 2000 ದಶಕದಲ್ಲಿ ಹೆಚ್ಚು ಸಕ್ರಿಯರಾಗಿದ್ದರು. 'ಶಾದಿ ಕಾ ಲಡ್ಡೂ' (2004) ಮತ್ತು 'ಪ್ಯಾರ್ ಮೇ ಕಭಿ ಕಭಿ' (1999) ಚಿತ್ರಗಳನ್ನು ನಿರ್ದೇಶಿಸಿ ನಿರ್ಮಿಸಿದ್ದರು. ಕೌಶಲ್ ಕೊನೆಯ ನಿರ್ದೇಶನದ ಸಿನಿಮಾ 2006 ರಲ್ಲಿ ಬಿಡುಗಡೆಯಾದ 'ಆಂಥೋನಿ ಕೌನ್ ಹೈ'. ಈ ಚಿತ್ರದಲ್ಲಿ ಅರ್ಷದ್ ವಾರ್ಸಿ ಮತ್ತು ಸಂಜಯ್ ದತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.
(Kannada Copy of Filmbeat Kannada)
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm