ಬ್ರೇಕಿಂಗ್ ನ್ಯೂಸ್
10-07-21 04:04 pm Filmbeat : Bharath Kumar K ಸಿನಿಮಾ
ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರ ಹರ್ಭಜನ್ ಸಿಂಗ್ ಮತ್ತು ನಟಿ ಗೀತಾ ಬಸ್ರಾ ದಂಪತಿ ಎರಡನೇ ಮಗುವನ್ನು ಸ್ವಾಗತಿಸಿದ್ದಾರೆ. ಶನಿವಾರ ಮಧ್ಯಾಹ್ನ ಗೀತಾ ಬಸ್ರಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಹರ್ಭಜನ್ ಸಿಂಗ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, 'ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ' ಎಂದು ತಿಳಿಸಿದ್ದಾರೆ.
ಎರಡನೇ ಬಾರಿ ತಂದೆಯಾದ ಸಂತಸವನ್ನು ಹಂಚಿಕೊಂಡಿರುವ ಹರ್ಭಜನ್, ''ಅದ್ಭುತ ಉಡುಗೊರೆ, ಇದು ಬಹಳ ವಿಶೇಷವಾದ ಕ್ಷಣ. ನಮ್ಮ ಜೀವನ ಸಂಪೂರ್ಣವಾಗಿದೆ, ನಾವು ಸಂತೋಷ ಸಾಗರದಲ್ಲಿ ಮುಳುಗಿದ್ದೇವೆ. ನಮ್ಮ ಕ್ಷೇಮ ಹಾಗು ಸಂತಸಕ್ಕಾಗಿ ಶುಭಕೋರಿದ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು'' ಎಂದು ಪೋಸ್ಟ್ ಮಾಡಿದ್ದಾರೆ.
ಹರ್ಭಜನ್ ಸಿಂಗ್ ಹಾಗೂ ನಟಿ ಗೀತಾ ಬಸ್ರಾ ಅವರ ವಿವಾಹ ಅಕ್ಟೋಬರ್ 29, 2015 ರಲ್ಲಿ ಪಂಜಾಬ್ನ ಜಲಂಧರ್ನಲ್ಲಿ ನಡೆದಿತ್ತು. ಅದಾಗಲೇ ಹರ್ಭಜನ್ ಸಿಂಗ್-ಗೀತಾ ದಂಪತಿಗೆ ಹೆಣ್ಣು ಮಗುವಿದೆ. 2016ರಲ್ಲಿ ಮೊದಲ ಮಗು ಜನಿಸಿತ್ತು.


ಅಂದ್ಹಾಗೆ, ಗೀತಾ ಬಸ್ರಾ ಅವರ ಕುಟುಂಬ ಯುಕೆಯಲ್ಲಿ ನೆಲೆಸಿದೆ. 2006 ರಲ್ಲಿ ಇಮ್ರಾನ್ ಹಶ್ಮಿ ಅಭಿನಯದ "ದಿಲ್ ದಿಯಾ ಹೈ" ಚಿತ್ರದ ಮೂಲಕ ಗೀತಾ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ್ದರು. ಈಗ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ.
ಜಾನ್ ಪೌಲ್ ರಾಜ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಫ್ರೆಂಡ್ಷಿಪ್ ಸಿನಿಮಾದಲ್ಲಿ ಹರ್ಭಜನ್ ಸಿಂಗ್ ನಟಿಸುತ್ತಿದ್ದಾರೆ. ಹರ್ಭಜನ್ ಜೊತೆ ಅರ್ಜುನ್ ಸರ್ಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮುಂಚೆ ಹಿಂದಿಯ ಆಲ್ಬಮ್ ಸಾಂಗ್ ಕೆಲವು ಸಿನಿಮಾದಲ್ಲಿ ಅತಿಥಿ ಪಾತ್ರ ನಿರ್ವಹಿಸಿದ್ದರು.
(Kannada Copy of Filmbeat Kannada)
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am