ಬ್ರೇಕಿಂಗ್ ನ್ಯೂಸ್
10-07-21 04:04 pm Filmbeat : Bharath Kumar K ಸಿನಿಮಾ
ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರ ಹರ್ಭಜನ್ ಸಿಂಗ್ ಮತ್ತು ನಟಿ ಗೀತಾ ಬಸ್ರಾ ದಂಪತಿ ಎರಡನೇ ಮಗುವನ್ನು ಸ್ವಾಗತಿಸಿದ್ದಾರೆ. ಶನಿವಾರ ಮಧ್ಯಾಹ್ನ ಗೀತಾ ಬಸ್ರಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಹರ್ಭಜನ್ ಸಿಂಗ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, 'ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ' ಎಂದು ತಿಳಿಸಿದ್ದಾರೆ.
ಎರಡನೇ ಬಾರಿ ತಂದೆಯಾದ ಸಂತಸವನ್ನು ಹಂಚಿಕೊಂಡಿರುವ ಹರ್ಭಜನ್, ''ಅದ್ಭುತ ಉಡುಗೊರೆ, ಇದು ಬಹಳ ವಿಶೇಷವಾದ ಕ್ಷಣ. ನಮ್ಮ ಜೀವನ ಸಂಪೂರ್ಣವಾಗಿದೆ, ನಾವು ಸಂತೋಷ ಸಾಗರದಲ್ಲಿ ಮುಳುಗಿದ್ದೇವೆ. ನಮ್ಮ ಕ್ಷೇಮ ಹಾಗು ಸಂತಸಕ್ಕಾಗಿ ಶುಭಕೋರಿದ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು'' ಎಂದು ಪೋಸ್ಟ್ ಮಾಡಿದ್ದಾರೆ.
ಹರ್ಭಜನ್ ಸಿಂಗ್ ಹಾಗೂ ನಟಿ ಗೀತಾ ಬಸ್ರಾ ಅವರ ವಿವಾಹ ಅಕ್ಟೋಬರ್ 29, 2015 ರಲ್ಲಿ ಪಂಜಾಬ್ನ ಜಲಂಧರ್ನಲ್ಲಿ ನಡೆದಿತ್ತು. ಅದಾಗಲೇ ಹರ್ಭಜನ್ ಸಿಂಗ್-ಗೀತಾ ದಂಪತಿಗೆ ಹೆಣ್ಣು ಮಗುವಿದೆ. 2016ರಲ್ಲಿ ಮೊದಲ ಮಗು ಜನಿಸಿತ್ತು.
ಅಂದ್ಹಾಗೆ, ಗೀತಾ ಬಸ್ರಾ ಅವರ ಕುಟುಂಬ ಯುಕೆಯಲ್ಲಿ ನೆಲೆಸಿದೆ. 2006 ರಲ್ಲಿ ಇಮ್ರಾನ್ ಹಶ್ಮಿ ಅಭಿನಯದ "ದಿಲ್ ದಿಯಾ ಹೈ" ಚಿತ್ರದ ಮೂಲಕ ಗೀತಾ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ್ದರು. ಈಗ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ.
ಜಾನ್ ಪೌಲ್ ರಾಜ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಫ್ರೆಂಡ್ಷಿಪ್ ಸಿನಿಮಾದಲ್ಲಿ ಹರ್ಭಜನ್ ಸಿಂಗ್ ನಟಿಸುತ್ತಿದ್ದಾರೆ. ಹರ್ಭಜನ್ ಜೊತೆ ಅರ್ಜುನ್ ಸರ್ಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮುಂಚೆ ಹಿಂದಿಯ ಆಲ್ಬಮ್ ಸಾಂಗ್ ಕೆಲವು ಸಿನಿಮಾದಲ್ಲಿ ಅತಿಥಿ ಪಾತ್ರ ನಿರ್ವಹಿಸಿದ್ದರು.
(Kannada Copy of Filmbeat Kannada)
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm