ಬ್ರೇಕಿಂಗ್ ನ್ಯೂಸ್
16-07-21 01:11 pm Filmbeat : Shruthi K ಸಿನಿಮಾ
ರಾಷ್ಟ್ರಪ್ರಶಸ್ತಿ ಪುರಸ್ಕೃತ ಖ್ಯಾತ ನಟಿ ಸುರೇಖಾ ಸಿಕ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 75 ವರ್ಷದ ನಟಿ ಸುರೇಖಾ ಇಂದು (ಜುಲೈ 16) ಬೆಳಗ್ಗೆ ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ವರದಿಗಳ ಪ್ರಕಾರ ಸುರೇಖಾ 2018ರಲ್ಲಿ ಪಾರ್ಶ್ವವಾಯುಗೆ ತುತ್ತಾಗಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. 2020ರಲ್ಲಿ ಸುರೇಖಾಗೆ ಬ್ರೈನ್ ಸ್ಟ್ರೋಕ್ ಆಗಿದ್ದು, ತೀವ್ರ ಅಸ್ವಸ್ಥರಾಗಿದ್ದರು ಎನ್ನಲಾಗುತ್ತಿದೆ.
3 ಬಾರಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿರುವ ನಟಿ ಸುರೇಖಾ ಸಿಕ್ರಿ ಅನಾರೋಗ್ಯದ ಬಗ್ಗೆ ಕುಟುಂಬದವರು ಬಹಿರಂಗ ಪಡಿಸಿರಲಿಲ್ಲ. ಇದೀಗ ನಿಧನದ ಬಳಿಕ ಮಾಹಿತಿ ಹಂಚಿಕೊಂಡಿರುವ ಸುರೇಖಾ ಮ್ಯಾನೇಜರ್, "ಮೂರು ಬಾರಿ ರಾಷ್ಟ್ರಪ್ರಶಸ್ತಿ ವಿಜೇತ ನಟಿ ಸುರೇಖಾ ಸಿಕ್ರಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೋದಿದರು. ಬ್ರೈನ್ ಸ್ಟ್ರೋಕ್ ನಿಂದ ಬಳಲುತ್ತಿದ್ದರು" ಎಂದು ಹೇಳಿದ್ದಾರೆ.


ನಟಿ ಸುರೇಖಾ ಸಿಕ್ರಿ 1978ರಲ್ಲಿ 'ಕಿಸ್ಸಾ ಕುರ್ಸಿ ಕಾ' ಚಿತ್ರದಿಂದ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. ಸುರೇಖಾ 1988ರಲ್ಲಿ ಬಂದ 'ತಮಾಸ್', 1995ರಲ್ಲಿ ಬಿಡುಗಡೆಯಾದ 'ಮಮ್ಮೊ' ಮತ್ತು 2018ರಲ್ಲಿ ಬಂದ 'ಬದೈ ಹೋ' ಸಿನಿಮಾಗಾಗಿ ಸುರೇಖಾ ಅತ್ಯುತ್ತಮ ಪೋಷಕ ನಟಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಸುರೇಖಾ ಖ್ಯಾತಿಗಳಿಸಿದ್ದರು.
'ಬಾಲಿಕಾ ವಧು' ಧಾರಾವಾಹಿ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿತ್ತು. ಇನ್ನು 'ಬದೈ ಹೋ' ಸಿನಿಮಾದ ಪಾತ್ರ ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. 2018ರಲ್ಲಿ ನಟಿ ಸುರೇಖಾ ಬ್ರೈನ್ ಸ್ಕ್ರೋಕ್ ನಿಂದ ಬಾತ್ ರೂಮ್ ನಲ್ಲಿ ಬಿದ್ದು ತೆಲೆಗೆ ತೀವ್ರವಾದ ಏಟು ಬಿದ್ದಿತ್ತು.
ಚೇತರಿಸಿಕೊಳ್ಳುತ್ತಿದ್ದ ಸುರೇಖಾ ಸಂದರ್ಶನದಲ್ಲಿ ಮಾತನಾಡಿ, "ನನಗೆ ಹತ್ತು ತಿಂಗಳ ಹಿಂದೆ ಬ್ರೈನ್ ಸ್ಟ್ರೋಕ್ ಆಗಿತ್ತು. ಅಂದಿನಿಂದ ಇವತ್ತಿನ ವರೆಗೂ ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಅನಾರೋಗ್ಯದಿಂದ ನನಗೆ ಕೆಲಸ ಮಾಡಲು ನನಗೆ ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಸರಿಯಾಗುತ್ತೇನೆ ಎಂದು ವೈದ್ಯರು ಹೇಳಿದ್ದಾರೆ" ಎಂದಿದ್ದರು.
(Kannada Copy of Filmbeat Kannada)
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am