ಬ್ರೇಕಿಂಗ್ ನ್ಯೂಸ್
16-07-21 01:11 pm Filmbeat : Shruthi K ಸಿನಿಮಾ
ರಾಷ್ಟ್ರಪ್ರಶಸ್ತಿ ಪುರಸ್ಕೃತ ಖ್ಯಾತ ನಟಿ ಸುರೇಖಾ ಸಿಕ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. 75 ವರ್ಷದ ನಟಿ ಸುರೇಖಾ ಇಂದು (ಜುಲೈ 16) ಬೆಳಗ್ಗೆ ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ವರದಿಗಳ ಪ್ರಕಾರ ಸುರೇಖಾ 2018ರಲ್ಲಿ ಪಾರ್ಶ್ವವಾಯುಗೆ ತುತ್ತಾಗಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. 2020ರಲ್ಲಿ ಸುರೇಖಾಗೆ ಬ್ರೈನ್ ಸ್ಟ್ರೋಕ್ ಆಗಿದ್ದು, ತೀವ್ರ ಅಸ್ವಸ್ಥರಾಗಿದ್ದರು ಎನ್ನಲಾಗುತ್ತಿದೆ.
3 ಬಾರಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿರುವ ನಟಿ ಸುರೇಖಾ ಸಿಕ್ರಿ ಅನಾರೋಗ್ಯದ ಬಗ್ಗೆ ಕುಟುಂಬದವರು ಬಹಿರಂಗ ಪಡಿಸಿರಲಿಲ್ಲ. ಇದೀಗ ನಿಧನದ ಬಳಿಕ ಮಾಹಿತಿ ಹಂಚಿಕೊಂಡಿರುವ ಸುರೇಖಾ ಮ್ಯಾನೇಜರ್, "ಮೂರು ಬಾರಿ ರಾಷ್ಟ್ರಪ್ರಶಸ್ತಿ ವಿಜೇತ ನಟಿ ಸುರೇಖಾ ಸಿಕ್ರಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೋದಿದರು. ಬ್ರೈನ್ ಸ್ಟ್ರೋಕ್ ನಿಂದ ಬಳಲುತ್ತಿದ್ದರು" ಎಂದು ಹೇಳಿದ್ದಾರೆ.


ನಟಿ ಸುರೇಖಾ ಸಿಕ್ರಿ 1978ರಲ್ಲಿ 'ಕಿಸ್ಸಾ ಕುರ್ಸಿ ಕಾ' ಚಿತ್ರದಿಂದ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. ಸುರೇಖಾ 1988ರಲ್ಲಿ ಬಂದ 'ತಮಾಸ್', 1995ರಲ್ಲಿ ಬಿಡುಗಡೆಯಾದ 'ಮಮ್ಮೊ' ಮತ್ತು 2018ರಲ್ಲಿ ಬಂದ 'ಬದೈ ಹೋ' ಸಿನಿಮಾಗಾಗಿ ಸುರೇಖಾ ಅತ್ಯುತ್ತಮ ಪೋಷಕ ನಟಿ ರಾಷ್ಟ್ರಪ್ರಶಸ್ತಿ ಮುಡಿಗೇರಿಸಿಕೊಂಡಿದ್ದರು. ಸಿನಿಮಾ ಮಾತ್ರವಲ್ಲದೆ ಕಿರುತೆರೆಯಲ್ಲೂ ಸುರೇಖಾ ಖ್ಯಾತಿಗಳಿಸಿದ್ದರು.
'ಬಾಲಿಕಾ ವಧು' ಧಾರಾವಾಹಿ ದೊಡ್ಡ ಮಟ್ಟದಲ್ಲಿ ಹೆಸರು ತಂದುಕೊಟ್ಟಿತ್ತು. ಇನ್ನು 'ಬದೈ ಹೋ' ಸಿನಿಮಾದ ಪಾತ್ರ ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿತ್ತು. 2018ರಲ್ಲಿ ನಟಿ ಸುರೇಖಾ ಬ್ರೈನ್ ಸ್ಕ್ರೋಕ್ ನಿಂದ ಬಾತ್ ರೂಮ್ ನಲ್ಲಿ ಬಿದ್ದು ತೆಲೆಗೆ ತೀವ್ರವಾದ ಏಟು ಬಿದ್ದಿತ್ತು.
ಚೇತರಿಸಿಕೊಳ್ಳುತ್ತಿದ್ದ ಸುರೇಖಾ ಸಂದರ್ಶನದಲ್ಲಿ ಮಾತನಾಡಿ, "ನನಗೆ ಹತ್ತು ತಿಂಗಳ ಹಿಂದೆ ಬ್ರೈನ್ ಸ್ಟ್ರೋಕ್ ಆಗಿತ್ತು. ಅಂದಿನಿಂದ ಇವತ್ತಿನ ವರೆಗೂ ನಾನು ಚೇತರಿಸಿಕೊಳ್ಳುತ್ತಿದ್ದೇನೆ. ಅನಾರೋಗ್ಯದಿಂದ ನನಗೆ ಕೆಲಸ ಮಾಡಲು ನನಗೆ ಸಾಧ್ಯವಾಗಲಿಲ್ಲ. ಶೀಘ್ರದಲ್ಲೇ ಸರಿಯಾಗುತ್ತೇನೆ ಎಂದು ವೈದ್ಯರು ಹೇಳಿದ್ದಾರೆ" ಎಂದಿದ್ದರು.
(Kannada Copy of Filmbeat Kannada)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am