ಬ್ರೇಕಿಂಗ್ ನ್ಯೂಸ್
04-08-21 11:36 am Headline Karnataka News Network ಸಿನಿಮಾ
ನವದೆಹಲಿ, ಆಗಸ್ಟ್ 4: ಖ್ಯಾತ ರ್ಯಾಪ್ ಗಾಯಕ ಯೋ ಯೋ ಹನಿ ಸಿಂಗ್ ವಿರುದ್ದ ಗಂಭೀರ ಆರೋಪ ಕೇಳಿ ಬಂದಿದೆ. ಅವರ ಪತ್ನಿ ಶಾಲಿನ ತಲ್ವಾರ್ ತಮ್ಮ ಪತಿ ಕೌಟುಂಬಿಕ ದೌರ್ಜನ್ಯ ಎಸೆಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ದೆಹಲಿಯ ತಿಸ್ ಹಜಾರಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತಮ್ಮ ದೂರಿನಲ್ಲಿ ಹನಿ ಸಿಂಗ್ ನನಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 28 ರೊಳಗೆ ಉತ್ತರ ನೀಡುವಂತೆ ಕೋರ್ಟ್ ಹನಿ ಸಿಂಗ್ಗೆ ನೋಟಿಸ್ ನೀಡಿದೆ.
ಶಾಲಿನಿ ತಲ್ವಾರ್ ನೀಡಿರುವ ದೂರಿನಲ್ಲಿ ಹನಿ ಸಿಂಗ್ ವಿರುದ್ಧ ಸಾಕಷ್ಟು ಆರೋಪಗಳ ಪಟ್ಟಿಯೇ ಇದೆ. ನನ್ನ ಮೇಲೆ ಹನಿ ಸಿಂಗ್ ಹಲವಾರು ಬಾರಿ ದೈಹಿಕ ಹಲ್ಲೆ ಮಾಡಿದ್ದಾರೆ. ಮಾನಸಿಕ ಕಿರುಕುಳ ನೀಡಿದ್ದಾರೆ. ಹನಿ ಸಿಂಗ್ ಸಾಕಷ್ಟು ಹಣ ಸಂಪಾದಿಸಿದ್ದಾರೆ. ಹಾಡುಗಳು, ಶೋಗಳು, ರಾಯಲ್ಟಿ ರೂಪದಲ್ಲೇ ಅವರಿಗೆ ತಿಂಗಳಿಗೆ 4 ಕೋಟಿ ರೂ. ಸಂಪಾದನೆ ಆಗುತ್ತಿತ್ತು. ಆ ಸಮಯದಲ್ಲಿ ಅವರು ಡ್ರಗ್ಸ್, ಮದ್ಯಪಾನ, ಸಂವರ್ಧನ ಔಷಧಗಳಿಗೆ ದಾಸರಾಗಿದ್ದರು. ಹನಿ ಸಿಂಗ್ ದುರಾಹಂಕಾರಿ ಮತ್ತು ಕೆಟ್ಟದಾಗಿ ಬೈಯುತ್ತಿದ್ದರು. ಅನೇಕ ಮಹಿಳೆಯರೊಂದಿಗೆ ಲೈಂಗಿಕ ಸಂಪರ್ಕ ಇಟ್ಟುಕೊಂಡಿದ್ದರು' ಎಂದು ತಿಳಿಸಿದ್ದಾರೆ.





ಆಗಸ್ಟ್ 3ರಂದು ದೂರು ದಾಖಲಾಗಿದ್ದು, ಸದ್ಯ ಹನಿ ಸಿಂಗ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮೂಲಗಳ ಪ್ರಕಾರ, ಶಾಲಿನಿ ಅವರ ಜಂಟಿ ಖಾತೆಗಳಿರುವ ಯಾವುದೇ ಆಸ್ತಿಯನ್ನು ಹನಿ ಸಿಂಗ್ ಮಾರಾಟ ಮಾಡದಂತೆ ನ್ಯಾಯಾಲಯವು ಆದೇಶ ನೀಡಿದೆ ಎಂಬ ಮಾಹಿತಿಯೂ ಸಿಕ್ಕಿದೆ.
38ರ ಹರೆಯದ ಹನಿ ಸಿಂಗ್, ಯೋ ಯೋ ಹನಿ ಸಿಂಗ್ ಅಂತಲೇ ಫೇಮಸ್. 2011ರಲ್ಲಿ ಶಾಲಿನಿ ತಲ್ವಾರ್ ಅವರನ್ನು ಹನಿ ಸಿಂಗ್ ಮದುವೆ ಆಗಿದ್ದರು. 2006ರಲ್ಲಿ ವೃತ್ತಿ ಜೀವನ ಆರಂಭಿಸಿದ ಹನಿ ಸಿಂಗ್, ಆರಂಭದ 10 ವರ್ಷ ಸಾಕಷ್ಟು ಖ್ಯಾತಿ ಪಡೆದುಕೊಂಡಿದ್ದರು. ಅವರ ಮ್ಯೂಸಿಕ್ ವಿಡಿಯೋ ಆಲ್ಭಂಗಳು ಸಖತ್ ಕ್ರೇಜ್ ಹುಟ್ಟುಹಾಕಿದ್ದವು. ತದನಂತರ ಅವರ ಖ್ಯಾತಿ ನಿಧಾನವಾಗಿ ಕಮ್ಮಿ ಆಗುತ್ತ ಹೋಯಿತು. ಆ ಸಂದರ್ಭದಲ್ಲಿ ಅವರು ಖಿನ್ನತೆಗೆ ಒಳಗಾಗಿದ್ದರು ಎಂಬ ಮಾತು ಕೇಳಿಬಂದಿತ್ತು. ಸದ್ಯ ಪತ್ನಿಯಿಂದ ದಾಖಲಾಗಿರುವ ಈ ದೂರಿಗೆ ಹನಿ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೋ ಕಾದು ನೋಡಬೇಕು.
The wife of singer Hirdesh Singh, who goes by the stage name Yo Yo Honey Singh, has approached a Delhi court alleging physical, mental and emotional abuse at the hands of her husband.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm