ಬ್ರೇಕಿಂಗ್ ನ್ಯೂಸ್
09-08-21 05:56 pm Headline Karnataka News Network ಸಿನಿಮಾ
'ಕೃಷ್ಣ' ಅಜಯ್ ರಾವ್ ಮತ್ತು ರಚಿತಾ ರಾಮ್ ಒಟ್ಟಿಗೆ ನಟಿಸುತ್ತಿರುವ 'ಲವ್ ಯೂ ರಚ್ಚು' ಸಿನಿಮಾದ ಶೂಟಿಂಗ್ ವೇಳೆ ವಿದ್ಯುತ್ ಅವಘಡ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬಿಡದಿ ಬಳಿ ಈ ಘಟನೆ ನಡೆದಿದೆ.
ಲವ್ ಯೂ ರಚ್ಚು ಕೊರೊನಾ ಎರಡನೇ ಅಲೆ ಕಡಿಮೆ ಆಗುತ್ತಿದ್ದಂತೆಯೇ, ಇದರ ಶೂಟಿಂಗ್ ಪುನಃ ಚಾಲನೆಗೊಂಡಿತ್ತು. ಆದರೆ, ಆರಂಭದಲ್ಲೇ ಇದಕ್ಕೊಂದು ವಿಘ್ನ ಎದುರಾಗಿದೆ. ಶೂಟಿಂಗ್ ವೇಳೆ ನಡೆದ ಶಾರ್ಟ್ ಸರ್ಕ್ಯೂಟ್ನಿಂದ ಒಬ್ಬರು ಸಾವನ್ನಪ್ಪಿದ್ದಾರೆ.
ಸೆಟ್ನಲ್ಲಿ ಆಗಿದ್ದೇನು?
ರಾಮನಗರ ತಾಲೂಕಿನ ಜೋಗರಪಾಳ್ಯ ಗ್ರಾಮದಲ್ಲಿ ಬಳಿ ಈ ದುರ್ಘಟನೆ ಸಂಭವಿಸಿದ್ದು, ಇಬ್ಬರಿಗೆ ವಿದ್ಯುತ್ ತಗುಲಿತ್ತು ಎಂಬ ಮಾಹಿತಿ ಕೇಳಿಬಂದಿದೆ. ಅದರಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಒಬ್ಬರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ಇನ್ನು, ಈ ದುರ್ಘಟನೆಯಿಂದಾಗಿ ಚಿತ್ರತಂಡವು ಶೂಟಿಂಗ್ ನಿಲ್ಲಿಸಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ವಿವೇಕ್ (28) ಎಂದು ತಿಳಿದುಬಂದಿದೆ. ಸದ್ಯ ಅವರ ಶವವನ್ನು ರಾಜರಾಜೇಶ್ವರಿನಗರದ ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
(Kannada Copy of Vijayakarnataka Kannada)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am