ಬ್ರೇಕಿಂಗ್ ನ್ಯೂಸ್
16-08-21 10:58 am Filmbeat: Manjunatha C ಸಿನಿಮಾ
ಹಿಂದಿಯ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಇಂಡಿಯನ್ ಐಡಲ್ 12 ನಿನ್ನೆ ಮುಕ್ತಾಯವಾಗಿದೆ. ನಿನ್ನೆ ನಡೆದ ಫಿನಾಲೆಯಲ್ಲಿ ಅಂತಿಮ ಸುತ್ತಿಗೆ ಬಂದಿದ್ದ ಗಾಯಕರು ಪ್ರಶಸ್ತಿಗಾಗಿ ಸೆಣೆಸಾಡಿದರು, ಅಂತಿಮವಾಗಿ ಪ್ರಶಸ್ತಿಯು ಪವನ್ದೀಪ್ ಪಾಲಾಗಿದೆ.
ಸತತವಾಗಿ 12 ಗಂಟೆಗಳ ಕಾಲ ನಡೆದ ಫಿನಾಲೆಯಲ್ಲಿ ಆರು ಸ್ಪರ್ಧಿಗಳು ಪ್ರಶಸ್ತಿಗಾಗಿ ಗಾಯನದ ಮೂಲಕ ಸೆಣಸಾಡಿದರು. ಪವನ್ದೀಪ್ ರಾಜನ್, ಅರುಣಿತಾ ಕಂಜಿಲಾಲ್, ಎಂಡಿ ಧನಿಶ್, ನಿಹಾಲ್ ಟುರೊ, ಶಣ್ಮುಕಪ್ರಿಯ, ಸೈಲ್ ಕಾಂಬ್ಳೆ ಅವರುಗಳು ಫಿನಾಲೆ ವೇದಿಕೆ ಮೇಲೆ ಗಾನ ಸುಧೆ ಹರಿಸಿದರು.



ಅಂತಿಮವಾಗಿ ಪವನ್ದೀಪ್ ರಾಜನ್ ಅನ್ನು ವಿನ್ನರ್ ಆಗಿ ಘೋಷಿಸಲಾಯ್ತು. ಅರುಣಿತಾ ಕಂಜಿಲಾಲ್ ಮೊದಲ ರನರ್ಅಪ್, ಸೈಲ್ ಕಾಂಬ್ಳೆ ಅನ್ನು ಎರಡನೇ ರನ್ನರ್ ಅಪ್ ಆಗಿ ಘೋಷಿಸಲಾಯ್ತು. ಶೋ ವಿಜೇತ ಪವನ್ದೀಪ್ಗೆ 25 ರ ಮೊತ್ತದ ಚೆಕ್ ಹಾಗೂ ಟ್ರೋಫಿಯನ್ನು ನೀಡಲಾಯ್ತು.

ಶೋ ಅನ್ನು ಜಡ್ಜ್ ಮಾಡಿದ ಅನು ಮಲ್ಲಿಕ್, ಹಿಮೇಶ್ ರೆಶಮಿಯಾ, ಸೋನು ಕಕ್ಕರ್ ಅವರುಗಳು ಎಲ್ಲ ಸ್ಪರ್ಧಿಗಳು ಚೆನ್ನಾಗಿ ಹಾಡಿದರೆಂದು ಹುರಿದುಂಬಿಸಿದರು. ಆದರೆ ಪವನ್ದೀಪ್ ರಾಜನ್ ಪ್ರದರ್ಶನ ಅತ್ಯದ್ಭುತವಾಗಿತ್ತೆಂದು ಕೊಂಡಾಡಿದರು.

ಪ್ರಶಸ್ತಿ ಗೆದ್ದ ಬಳಿಕ ಮಾತನಾಡಿದ ಪವನ್ದೀಪ್ ರಾಜನ್, ''ಇಂಡಿಯನ್ ಐಡಲ್ನಲ್ಲಿ ಭಾಗವಹಿಸಿದ್ದೇ ಕನಸು ನನಸಾದಂಥಹಾ ಅನುಭವ. ಫಿನಾಲೆವರೆಗೆ ಬಂದಿದ್ದು ಇನ್ನೂ ಅದ್ಭುತ ಅನುಭವ. ಶೋನ ವಿಜೇತ ನಾನಾಗಿದ್ದೇನೆ ಎಂಬುದನ್ನು ಇನ್ನೂ ನನಗೆ ನಂಬಲಾಗುತ್ತಿಲ್ಲ. ಇದೊಂದು ದೊಡ್ಡ ಗೌರವ ನನಗೆ. ನನಗೆ ಮತ ಹಾಕಿ ನಾನು ಗೆಲ್ಲುವಂತೆ ಮಾಡಿದ ಎಲ್ಲ ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳುತ್ತನೆ. ಇಂಡಿಯನ್ ಐಡಲ್ ವರೆಗೆ ನನ್ನ ಪಯಣದಲ್ಲಿ ಜೊತೆಯಾಗಿದ್ದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ವಿಶೇಷವಾಗಿ ಇಂಡಿಯನ್ ಐಡಲ್ನ ಎಲ್ಲ ಸಂಗೀತಗಾರರಿಗೆ, ನಮ್ಮ ಕೋಚ್ಗಳಿಗೆ ಈ ಟ್ರೋಫಿ ನಿಮ್ಮೆಲ್ಲರಿಗೂ ಸೇರಿದ್ದು'' ಎಂದಿದ್ದಾರೆ.
(Kannada Copy of Filmbeat Kannada)
Pawandeep Rajan took home Indian Idol 12 trophy along with the prize money of Rs lakh. The other finalists were Arunita Kanjilal, Mohd Danish, Sayli Kamble, Nihal Tauro and Shanmukha Priya.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm