ಬ್ರೇಕಿಂಗ್ ನ್ಯೂಸ್
20-08-21 06:07 pm Headline Karnataka News Network ಸಿನಿಮಾ
ಎರ್ನಾಕುಲಂ, ಆಗಸ್ಟ್ 20: ನನಗೆ ದನದ ಸೆಗಣಿ ಎಂದು ಕರೆದುಕೊಳ್ಳಲು ಯಾವುದೇ ನಾಚಿಕೆಯಿಲ್ಲ. ಆ ಪದವನ್ನು ಕೇಳಿ ನಾನು ತುಂಬ ಹೆಮ್ಮೆ ಪಡುತ್ತೇನೆ ಎಂದು ಮಲಯಾಳಂ ಚಿತ್ರಗಳ ಖ್ಯಾತ ನಟ ಸುರೇಶ್ ಗೋಪಿ ಹೇಳಿದ್ದಾರೆ.
ವಿಶ್ವ ಹಿಂದು ಪರಿಷತ್ ರಾಜ್ಯಾದ್ಯಂತ ಕೈಗೊಂಡಿರುವ ಗೋ ಸಂರಕ್ಷಣಾ ರಥಯಾತ್ರೆಯನ್ನು ಉದ್ಘಾಟಿಸಿದ ಸುರೇಶ್ ಗೋಪಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೀಕಿಸಲಾಗಿತ್ತು. ಸುರೇಶ್ ಗೋಪಿ ಒಬ್ಬ ಸೆಗಣಿ ಇದ್ದಂತೆ ಎಂದು ಟೀಕಿಸಿ ಬರೆದಿದ್ದು ವೈರಲ್ ಆಗಿತ್ತು. ಎರ್ನಾಕುಲಂ ಜಿಲ್ಲೆಯ ಪಾವಕ್ಕುಲಂ ದೇವಸ್ಥಾನದಲ್ಲಿ ರಥಯಾತ್ರೆಗೆ ಚಾಲನೆ ನೀಡಲಾಗಿತ್ತು.
ಈ ರೀತಿಯ ಟೀಕೆ ಕೇಳಿಬಂದಿರುವ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಸುರೇಶ್ ಗೋಪಿ, ಯಾರು ಕೂಡ ನನ್ನನ್ನು ಸೆಗಣಿ ಎಂದು ಕರೆಯುವುದನ್ನು ನಿಲ್ಲಿಸಬೇಡಿ. ಅದನ್ನು ಖಂಡಿತವಾಗಿಯೂ ಮುಂದುವರಿಸಬೇಕು. ಆದರೆ, ಒಂದು ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಕೇರಳದ ಸುಧಾರಣಾವಾದಿ ನಾರಾಯಣ ಗುರು ಅವರನ್ನು ಹುಟ್ಟಿದ ಸಂದರ್ಭದಲ್ಲಿ ಮೊದಲು ಸೆಗಣಿಯಿಂದಲೇ ಮುಟ್ಟಿಸಲಾಗಿತ್ತು ಎಂಬುದನ್ನು ಮರೆಯಬಾರದು ಎಂದಿದ್ದಾರೆ.


ಗೋಸಂರಕ್ಷಣಾ ರಥಯಾತ್ರೆಯು ವರ್ಷ ಪೂರ್ತಿ ಕೇರಳ ರಾಜ್ಯಾದ್ಯಂತ ಸಂಚರಿಸಲಿದ್ದು, ಗೋವುಗಳ ಸಂತತಿ ಹೆಚ್ಚುವಂತೆ ಮತ್ತು ಗೋವುಗಳ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲಿದೆ. ಮುಂದಿನ ವರ್ಷ ಎರ್ನಾಕುಲಂ ಜಿಲ್ಲೆಯ ಪಾವಕ್ಕುಲಂ ದೇವಸ್ಥಾನದಲ್ಲಿ ರಥಯಾತ್ರೆ ಕೊನೆಯಾಗಲಿದೆ.
ಗೋವುಗಳ ರಕ್ಷಣೆಯಿಂದ ಕೃಷಿ ಸಂಸ್ಕೃತಿಗೆ ಒತ್ತು ಸಿಗಲಿದೆ. ಅಲ್ಲದೆ, ಪೂರ್ವಜರು ಪಾಲಿಸಿಕೊಂಡು ಬಂದಿದ್ದ ಶುದ್ಧ ಆಹಾರ ಸಂಸ್ಕೃತಿಗೂ ಒತ್ತು ಸಿಗಲಿದೆ ಎಂದು ಸುರೇಶ್ ಗೋಪಿ ಹೇಳಿದ್ದಾರೆ. ಚಿತ್ರ ನಿರ್ದೇಶಕ ಹಾಗೂ ವಿಶ್ವ ಹಿಂದು ಪರಿಷತ್ ರಾಜ್ಯಾಧ್ಯಕ್ಷ ವಿಜಿ ಥಂಪಿ ಕೂಡ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಸೋಶಿಯಲ್ ಮೀಡಿಯಾದಲ್ಲಿ ಸುರೇಶ್ ಗೋಪಿ ಅವರನ್ನು ಅಭಿಮಾನಿಯೊಬ್ಬ ಕೇಳಿದ್ದ. ನಿಮ್ಮ ವಿರುದ್ಧ ಕ್ಯಾಂಪೇನ್ ನಡೆಸುತ್ತಿರುವ ಬ್ಲಾಗರ್ ಗಳಾದ ಇ ಬುಲ್ ಜೆ ಬ್ರದರ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ ಮಾಡುತ್ತೀರಾ ಎಂಬ ಪ್ರಶ್ನೆ ಮಾಡಿದ್ದ. ಬುಲ್ ಜೆ ಬ್ರದರ್ಸ್, ಸಾರಿಗೆ ಇಲಾಖೆಯಲ್ಲಿ ನೌಕರರು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದ ಸುರೇಶ್ ಗೋಪಿ, ನಾನ್ಯಾಕೆ ಆ ಬಗ್ಗೆ ದೂರು ನೀಡಲಿ. ಅದು ಸಿಎಂ ಪಿಣರಾಯಿ ವಿಜಯನ್ ಮತ್ತು ಸಾರಿಗೆ ಇಲಾಖೆಯ ಮಂತ್ರಿಗೆ ಬಿಟ್ಟದ್ದು. ನಾನು ಆ ವಿಚಾರದಲ್ಲಿ ಮೂಗು ತೂರಿಸಲು ಇಷ್ಟಪಡಲ್ಲ. ಯಾಕಂದ್ರೆ, ನಾನು ಬರೀ ಸೆಗಣಿ ಅಷ್ಚೇ ಎಂದು ಕಮೆಂಟ್ ಮಾಡಿದ್ದು ಭಾರೀ ವೈರಲ್ ಆಗಿದೆ.
The actor arrived at Pavakulam Mahadeva Temple at Kaloor to inaugurate the cow protection campaign (Gau Raksha Yatra) organised by the Vishva Hindu Parishad
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am