ಬ್ರೇಕಿಂಗ್ ನ್ಯೂಸ್
26-08-21 11:30 am Filmbeat: Bharath Kumar K ಸಿನಿಮಾ
ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಕೇಸ್ ಸಂಚಲನ ಸೃಷ್ಟಿಸಿದ್ದು ನಟಿ ರಾಗಿಣಿ, ಸಂಜನಾಗೆ ಸಂಕಷ್ಟ ತಂದೊಡ್ಡಿದೆ. ಆ ಕಡೆ ಬಾಲಿವುಡ್ನಲ್ಲೂ ಡ್ರಗ್ಸ್ ಕೇಸ್ ತಣ್ಣಗಾಗಿಲ್ಲ. ಇದೀಗ, ನಾಲ್ಕು ವರ್ಷದ ಹಿಂದಿನ ಡ್ರಗ್ಸ್ ಪ್ರಕರಣ ಟಾಲಿವುಡ್ನಲ್ಲಿ ಮತ್ತೆ ಜೀವ ಪಡೆದುಕೊಂಡಿದೆ.
ಡ್ರಗ್ಸ್ ಕೇಸ್ ಸಂಬಂಧಿಸಿದಂತೆ ತೆಲುಗಿನ ಸ್ಟಾರ್ ಕಲಾವಿದರಿಗೆ ಜಾರಿ ನಿರ್ದೇಶನಾಲಯ (ED-Enforcement Directorate) ಸಮನ್ಸ್ ಜಾರಿ ಮಾಡಿದೆ ಎಂಬ ವಿಚಾರ ಹೊರಬಿದ್ದಿದೆ.
ತೆಲುಗಿನ ಖ್ಯಾತನಾಮರಾದ ರಕುಲ್ ಪ್ರೀತ್ ಸಿಂಗ್, ರಾಣಾ ದಗ್ಗುಬಾಟಿ, ಪೂರಿ ಜಗನ್ನಾಥ್, ರವಿತೇಜ, ಚಾರ್ಮಿ ಕೌರ್, ಮುಮೈತ್ ಖಾನ್ ಸೇರಿದಂತೆ ಒಟ್ಟು 12 ಜನರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಬುಧವಾರ (ಆಗಸ್ಟ್ 25) ಸಮನ್ಸ್ ಜಾರಿ ಮಾಡಿದೆ.

ಪೂರಿ ಜಗನ್ನಾಥ್ಗೆ ಆಗಸ್ಟ್ 31 ರಂದು, ರಕುಲ್ ಪ್ರೀತ್ ಸಿಂಗ್ಗೆ ಸೆಪ್ಟೆಂಬರ್ 6, ರಾಣಾ ದಗ್ಗುಬಾಟಿಗೆ ಸೆಪ್ಟೆಂಬರ್ 8, ರವಿತೇಜಗೆ ಸೆಪ್ಟೆಂಬರ್ 9, ಮುಮೈತ್ ಖಾನ್ಗೆ ನವೆಂಬರ್ 15 ರಂದು ಹಾಗೂ ಚಾರ್ಮಿ ಕೌರ್ಗೆ ಹಾಜರಾಗಲು ಸೂಚಿಸಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ 2017ರಲ್ಲಿ ಹೈದರಾಬಾದ್ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡ (ಎಸ್ಐಟಿ) ಟಾಲಿವುಡ್ನ 12 ಸೆಲೆಬ್ರಿಟಿಗಳನ್ನು ವಿಚಾರಣೆಗೆ ಒಳಪಡಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಲಾಖೆಯೂ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿಕೊಂಡಿತ್ತು. ಇಂಡಿಯಾ ಟುಡೆ ವರದಿ ಪ್ರಕಾರ, ಈ ಪ್ರಕರಣದಲ್ಲಿ ಸೆಲೆಬ್ರಿಟಿಗಳನ್ನು ಸಾಕ್ಷಿಯಾಗಿ ಕರೆಸಿಕೊಳ್ಳಲು ಮುಂದಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಮಾಡಿದೆ.
ಡ್ರಗ್ಸ್ ಪ್ರಕರಣದಲ್ಲಿ ಎಸ್ಐಟಿ ತಂಡವೂ ಸೆಲೆಬ್ರಿಟಿಗಳು ಸೇರಿದಂತೆ 62 ಶಂಕಿತರ ಕೂದಲು ಮತ್ತು ಉಗುರಿನ ಮಾದರಿಗಳನ್ನು ಸಂಗ್ರಹಿಸಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ಖ್ಯಾತ ವ್ಯಕ್ತಿಯ ವಿರುದ್ಧ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಸಿಲ್ಲ. ಡ್ರಗ್ ಕಳ್ಳಸಾಗಣೆ ಅಥವಾ ಸೇವನೆಯಲ್ಲಿ ಸೆಲೆಬ್ರಿಟಿಗಳು ಭಾಗವಾಗಿದ್ದರೆ ಎಂದು ಇಲ್ಲಿಯವರೆಗೆ ಎಸ್ಐಟಿ ಎಲ್ಲಿಯೂ ಹೇಳಿಲ್ಲ. ಹಾಗಾಗಿ, ಎಲ್ಲಾ ಸೆಲೆಬ್ರಿಟಿಗಳು ಡ್ರಗ್ಸ್ ಕೇಸ್ನಿಂದ ಕ್ಲೀನ್ ಚಿಟ್ ಸಿಕ್ಕಿದೆ ಎಂದು ನಂಬಲಾಗಿತ್ತು. ಮುಂಬೈನಿಂದ ಹೈದರಾಬಾದ್ಗೆ ಕೊಕೇನ್ ಪೂರೈಸಿದ ಆರೋಪದ ಮೇಲೆ 2017 ರ ಆಗಸ್ಟ್ನಲ್ಲಿ ದಕ್ಷಿಣ ಆಫ್ರಿಕಾದ ಪ್ರಜೆ ರಾಫೆಲ್ ಅಲೆಕ್ಸ್ ವಿಕ್ಟರ್ನನ್ನು ಎಸ್ಐಟಿ ಬಂಧಿಸಿದ್ದರು. ಅದಾದ ಮೇಲೆಯೇ ತೆಲುಗು ಚಿತ್ರರಂಗದ ನಂಟು ಇರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.
(Kannada Copy of Filmbeat Kannada)
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm