ಬ್ರೇಕಿಂಗ್ ನ್ಯೂಸ್
26-08-21 11:30 am Filmbeat: Bharath Kumar K ಸಿನಿಮಾ
ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಕೇಸ್ ಸಂಚಲನ ಸೃಷ್ಟಿಸಿದ್ದು ನಟಿ ರಾಗಿಣಿ, ಸಂಜನಾಗೆ ಸಂಕಷ್ಟ ತಂದೊಡ್ಡಿದೆ. ಆ ಕಡೆ ಬಾಲಿವುಡ್ನಲ್ಲೂ ಡ್ರಗ್ಸ್ ಕೇಸ್ ತಣ್ಣಗಾಗಿಲ್ಲ. ಇದೀಗ, ನಾಲ್ಕು ವರ್ಷದ ಹಿಂದಿನ ಡ್ರಗ್ಸ್ ಪ್ರಕರಣ ಟಾಲಿವುಡ್ನಲ್ಲಿ ಮತ್ತೆ ಜೀವ ಪಡೆದುಕೊಂಡಿದೆ.
ಡ್ರಗ್ಸ್ ಕೇಸ್ ಸಂಬಂಧಿಸಿದಂತೆ ತೆಲುಗಿನ ಸ್ಟಾರ್ ಕಲಾವಿದರಿಗೆ ಜಾರಿ ನಿರ್ದೇಶನಾಲಯ (ED-Enforcement Directorate) ಸಮನ್ಸ್ ಜಾರಿ ಮಾಡಿದೆ ಎಂಬ ವಿಚಾರ ಹೊರಬಿದ್ದಿದೆ.
ತೆಲುಗಿನ ಖ್ಯಾತನಾಮರಾದ ರಕುಲ್ ಪ್ರೀತ್ ಸಿಂಗ್, ರಾಣಾ ದಗ್ಗುಬಾಟಿ, ಪೂರಿ ಜಗನ್ನಾಥ್, ರವಿತೇಜ, ಚಾರ್ಮಿ ಕೌರ್, ಮುಮೈತ್ ಖಾನ್ ಸೇರಿದಂತೆ ಒಟ್ಟು 12 ಜನರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿ ಬುಧವಾರ (ಆಗಸ್ಟ್ 25) ಸಮನ್ಸ್ ಜಾರಿ ಮಾಡಿದೆ.

ಪೂರಿ ಜಗನ್ನಾಥ್ಗೆ ಆಗಸ್ಟ್ 31 ರಂದು, ರಕುಲ್ ಪ್ರೀತ್ ಸಿಂಗ್ಗೆ ಸೆಪ್ಟೆಂಬರ್ 6, ರಾಣಾ ದಗ್ಗುಬಾಟಿಗೆ ಸೆಪ್ಟೆಂಬರ್ 8, ರವಿತೇಜಗೆ ಸೆಪ್ಟೆಂಬರ್ 9, ಮುಮೈತ್ ಖಾನ್ಗೆ ನವೆಂಬರ್ 15 ರಂದು ಹಾಗೂ ಚಾರ್ಮಿ ಕೌರ್ಗೆ ಹಾಜರಾಗಲು ಸೂಚಿಸಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ 2017ರಲ್ಲಿ ಹೈದರಾಬಾದ್ ಅಬಕಾರಿ ಇಲಾಖೆಯ ವಿಶೇಷ ತನಿಖಾ ತಂಡ (ಎಸ್ಐಟಿ) ಟಾಲಿವುಡ್ನ 12 ಸೆಲೆಬ್ರಿಟಿಗಳನ್ನು ವಿಚಾರಣೆಗೆ ಒಳಪಡಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಲಾಖೆಯೂ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿಕೊಂಡಿತ್ತು. ಇಂಡಿಯಾ ಟುಡೆ ವರದಿ ಪ್ರಕಾರ, ಈ ಪ್ರಕರಣದಲ್ಲಿ ಸೆಲೆಬ್ರಿಟಿಗಳನ್ನು ಸಾಕ್ಷಿಯಾಗಿ ಕರೆಸಿಕೊಳ್ಳಲು ಮುಂದಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಮಾಡಿದೆ.
ಡ್ರಗ್ಸ್ ಪ್ರಕರಣದಲ್ಲಿ ಎಸ್ಐಟಿ ತಂಡವೂ ಸೆಲೆಬ್ರಿಟಿಗಳು ಸೇರಿದಂತೆ 62 ಶಂಕಿತರ ಕೂದಲು ಮತ್ತು ಉಗುರಿನ ಮಾದರಿಗಳನ್ನು ಸಂಗ್ರಹಿಸಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ಖ್ಯಾತ ವ್ಯಕ್ತಿಯ ವಿರುದ್ಧ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಸಿಲ್ಲ. ಡ್ರಗ್ ಕಳ್ಳಸಾಗಣೆ ಅಥವಾ ಸೇವನೆಯಲ್ಲಿ ಸೆಲೆಬ್ರಿಟಿಗಳು ಭಾಗವಾಗಿದ್ದರೆ ಎಂದು ಇಲ್ಲಿಯವರೆಗೆ ಎಸ್ಐಟಿ ಎಲ್ಲಿಯೂ ಹೇಳಿಲ್ಲ. ಹಾಗಾಗಿ, ಎಲ್ಲಾ ಸೆಲೆಬ್ರಿಟಿಗಳು ಡ್ರಗ್ಸ್ ಕೇಸ್ನಿಂದ ಕ್ಲೀನ್ ಚಿಟ್ ಸಿಕ್ಕಿದೆ ಎಂದು ನಂಬಲಾಗಿತ್ತು. ಮುಂಬೈನಿಂದ ಹೈದರಾಬಾದ್ಗೆ ಕೊಕೇನ್ ಪೂರೈಸಿದ ಆರೋಪದ ಮೇಲೆ 2017 ರ ಆಗಸ್ಟ್ನಲ್ಲಿ ದಕ್ಷಿಣ ಆಫ್ರಿಕಾದ ಪ್ರಜೆ ರಾಫೆಲ್ ಅಲೆಕ್ಸ್ ವಿಕ್ಟರ್ನನ್ನು ಎಸ್ಐಟಿ ಬಂಧಿಸಿದ್ದರು. ಅದಾದ ಮೇಲೆಯೇ ತೆಲುಗು ಚಿತ್ರರಂಗದ ನಂಟು ಇರುವ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.
(Kannada Copy of Filmbeat Kannada)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am