ಬ್ರೇಕಿಂಗ್ ನ್ಯೂಸ್
01-09-21 03:24 pm Filmbeat Kannada ಸಿನಿಮಾ
ಬಾಲಿವುಡ್ ಖ್ಯಾತ ನಟ ದಿಲೀಪ್ ಕುಮಾರ್ ಪತ್ನಿ ಸೈರಾ ಬಾನು ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮುಂಬೈನ ಹಿಂದುಜಾ ಆಸ್ಪತ್ರೆಗೆ ಸೈರಾ ಬಾನು ಅವರನ್ನು ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಸೈರಾ ಬಾನು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಕಳೆದ 3 ದಿನಗಳ ಹಿಂದೆಯೇ ಸೈರಾ ಬಾನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು (ಸೆಪ್ಟಂಬರ್ 1) ಐ ಸಿ ಯುಗೆ ಸ್ಥಳಾಂತರಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಇತ್ತೀಚಿಗಷ್ಟೆ ಸೈರಾ ಬಾನು ಪ್ರೀತಿಯ ಪತಿ ದಿಲೀಪ್ ಕುಮಾರ್ ಅವರನ್ನು ಕಳೆದುಕೊಂಡಿದ್ದರು. ಪತಿಯ ಅಗಲಿಕೆಯ ನೋವಿನಲ್ಲಿದ್ದ ಸೈರಾ ಈಗ ದಿಢೀರ್ ಆಸ್ಪತ್ರೆಗೆ ದಾಖಲಾಗಿರುವುದು ಸ್ನೇಹಿತರಲ್ಲಿ ಆತಂಕ ಮನೆ ಮಾಡಿದೆ. ಸೈರಾ ಆಸ್ಪತ್ರೆಗೆ ದಾಖಲಾದ ಬಗ್ಗೆ ಅವರ ಕುಟುಂಬದವರಾಗಲಿ ಅಥವಾ ಆಸ್ಪತ್ರೆಯಿಂದ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ.

ನಟ ದಿಲೀಪ್ ಕುಮಾರ್ ವಯೋಸಹಜ ಕಾಯಿಲೆಯಿಂದ ಜುಲೈ 7ರಂದು ನಿಧನ ಹೊಂದಿದರು. 98 ವರ್ಷದ ನಟ ದಿಲೀಪ್ ಅನಾರೋಗ್ಯದ ಕಾರಣ ಆಗಾಗ ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ 7ರಂದು ಕೊನೆಯುಸಿರೆಳೆದರು. ಸೈರಾ ಬಾನು ಮತ್ತು ದಿಲೀಪ್ ಇಬ್ಬರದ್ದು ಪ್ರೇಮ ವಿವಾಹ. ಇಬ್ಬರೂ ಮದುವೆಯಾಗಿ 54 ವರ್ಷಗಳು ಕಳೆದಿವೆ. ಇಬ್ಬರ ಪ್ರೇಮ ಕಥೆ ಬಾಲಿವುಡ್ ನಲ್ಲಿ ಮರೆಯಲಾಗದ ಪ್ರೇಮಕಥೆಯಾಗಿದೆ.
ಕೊನೆಯದಾಗಿ ಸೈರಾ ಬಾನು ಆಂಗ್ಲ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಪತಿ ಆರೋಗ್ಯದ ಬಗ್ಗೆ ಮಾತನಾಡಿದ್ದರು. ದಿಲೀಪ್ ಕುಮಾರ್ ಆರೋಗ್ಯ ತೀರ ಹದಗೆಟ್ಟಿದೆ ಎಂದು ಹೇಳಿದ್ದರು. "ಅವರ ಆರೋಗ್ಯ ತುಂಬಾ ಹದಗೆಟ್ಟಿದೆ. ತುಂಬಾ ದುರ್ಬಲ ಆಗಿದ್ದಾರೆ. ಮನೆಯೊಳಗೆ ಮಾತ್ರ ಓಡಾಡುತ್ತಾರೆ. ರೋಗನಿರೋಧಕ ಶಕ್ತಿ ಕಡಿಮೆಯಾಗಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ" ಎಂದು ಹೇಳಿದ್ದರು. ಜೊತೆಗೆ ಪತಿಯನ್ನು ಹಾಡಿ ಹೊಗಳಿದ್ದರು. ಇದೀಗ ಸ್ವತಃ ಸೈರಾ ಅವರೇ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೈರಾ ಬೇಗ ಗುಣಮುಖರಾಗಲಿ ಎಂದು ಸ್ನೇಹಿತರು, ಚಿತ್ರರಂಗದ ಗಣ್ಯರು ಹಾರೈಸುತ್ತಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm