ಬ್ರೇಕಿಂಗ್ ನ್ಯೂಸ್
01-09-21 03:24 pm Filmbeat Kannada ಸಿನಿಮಾ
ಬಾಲಿವುಡ್ ಖ್ಯಾತ ನಟ ದಿಲೀಪ್ ಕುಮಾರ್ ಪತ್ನಿ ಸೈರಾ ಬಾನು ಆಸ್ಪತ್ರೆಗೆ ದಾಖಲಾಗಿದ್ದು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮುಂಬೈನ ಹಿಂದುಜಾ ಆಸ್ಪತ್ರೆಗೆ ಸೈರಾ ಬಾನು ಅವರನ್ನು ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಸೈರಾ ಬಾನು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಕಳೆದ 3 ದಿನಗಳ ಹಿಂದೆಯೇ ಸೈರಾ ಬಾನು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು (ಸೆಪ್ಟಂಬರ್ 1) ಐ ಸಿ ಯುಗೆ ಸ್ಥಳಾಂತರಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಇತ್ತೀಚಿಗಷ್ಟೆ ಸೈರಾ ಬಾನು ಪ್ರೀತಿಯ ಪತಿ ದಿಲೀಪ್ ಕುಮಾರ್ ಅವರನ್ನು ಕಳೆದುಕೊಂಡಿದ್ದರು. ಪತಿಯ ಅಗಲಿಕೆಯ ನೋವಿನಲ್ಲಿದ್ದ ಸೈರಾ ಈಗ ದಿಢೀರ್ ಆಸ್ಪತ್ರೆಗೆ ದಾಖಲಾಗಿರುವುದು ಸ್ನೇಹಿತರಲ್ಲಿ ಆತಂಕ ಮನೆ ಮಾಡಿದೆ. ಸೈರಾ ಆಸ್ಪತ್ರೆಗೆ ದಾಖಲಾದ ಬಗ್ಗೆ ಅವರ ಕುಟುಂಬದವರಾಗಲಿ ಅಥವಾ ಆಸ್ಪತ್ರೆಯಿಂದ ಯಾವುದೇ ಮಾಹಿತಿ ಬಹಿರಂಗ ಪಡಿಸಿಲ್ಲ.
ನಟ ದಿಲೀಪ್ ಕುಮಾರ್ ವಯೋಸಹಜ ಕಾಯಿಲೆಯಿಂದ ಜುಲೈ 7ರಂದು ನಿಧನ ಹೊಂದಿದರು. 98 ವರ್ಷದ ನಟ ದಿಲೀಪ್ ಅನಾರೋಗ್ಯದ ಕಾರಣ ಆಗಾಗ ಆಸ್ಪತ್ರೆಗೆ ದಾಖಲಾಗುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜುಲೈ 7ರಂದು ಕೊನೆಯುಸಿರೆಳೆದರು. ಸೈರಾ ಬಾನು ಮತ್ತು ದಿಲೀಪ್ ಇಬ್ಬರದ್ದು ಪ್ರೇಮ ವಿವಾಹ. ಇಬ್ಬರೂ ಮದುವೆಯಾಗಿ 54 ವರ್ಷಗಳು ಕಳೆದಿವೆ. ಇಬ್ಬರ ಪ್ರೇಮ ಕಥೆ ಬಾಲಿವುಡ್ ನಲ್ಲಿ ಮರೆಯಲಾಗದ ಪ್ರೇಮಕಥೆಯಾಗಿದೆ.
ಕೊನೆಯದಾಗಿ ಸೈರಾ ಬಾನು ಆಂಗ್ಲ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಪತಿ ಆರೋಗ್ಯದ ಬಗ್ಗೆ ಮಾತನಾಡಿದ್ದರು. ದಿಲೀಪ್ ಕುಮಾರ್ ಆರೋಗ್ಯ ತೀರ ಹದಗೆಟ್ಟಿದೆ ಎಂದು ಹೇಳಿದ್ದರು. "ಅವರ ಆರೋಗ್ಯ ತುಂಬಾ ಹದಗೆಟ್ಟಿದೆ. ತುಂಬಾ ದುರ್ಬಲ ಆಗಿದ್ದಾರೆ. ಮನೆಯೊಳಗೆ ಮಾತ್ರ ಓಡಾಡುತ್ತಾರೆ. ರೋಗನಿರೋಧಕ ಶಕ್ತಿ ಕಡಿಮೆಯಾಗಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ" ಎಂದು ಹೇಳಿದ್ದರು. ಜೊತೆಗೆ ಪತಿಯನ್ನು ಹಾಡಿ ಹೊಗಳಿದ್ದರು. ಇದೀಗ ಸ್ವತಃ ಸೈರಾ ಅವರೇ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೈರಾ ಬೇಗ ಗುಣಮುಖರಾಗಲಿ ಎಂದು ಸ್ನೇಹಿತರು, ಚಿತ್ರರಂಗದ ಗಣ್ಯರು ಹಾರೈಸುತ್ತಿದ್ದಾರೆ.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm